Andolana originals

ಪಂಜಿನ ಕವಾಯತಿನೊಂದಿಗೆ ದಸರಾಕ್ಕೆ ವರ್ಣರಂಜಿತ ತೆರೆ

ಮೈಸೂರು: ಆಕರ್ಷಕ ಪರೇಡ್, ಅನೇಕ ರೋಚಕ, ಸಾಹಸ ಪ್ರದರ್ಶನಗಳು, ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ರೂಪಕ, ಹಾಡು, ಚಂಡೆ ಮದ್ದಳೆ, ಮನಮೋಹಕ ಪಂಜಿನ ಕವಾಯತು, ಡ್ರೋನ್ ಪ್ರದರ್ಶನ ಇವುಗಳೊಂದಿಗೆ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು.
ಶನಿವಾರ ಬನ್ನಿಮಂಟಪ ಮೈದಾನದಲ್ಲಿ ನಡೆದ ಪಂಜಿನ ಕವಾಯತು ಪ್ರದರ್ಶನ (ಟಾರ್ಚ್‌ ಲೈಟ್ ಪರೇಡ್)ದಲ್ಲಿ ಕಲೆಯ ಅನೇಕ ಪ್ರಕಾರಗಳು ಅನಾವರ ಣಗೊಂಡವು. ಸುಬೇದಾರ್ ಎಂ.ಕೆ.ಸಿಂಗ್ ನೇತೃತ್ವದಲ್ಲಿ ನಡೆದ ರೋಚಕ ಬೈಕ್ ಶೋ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿತು.

ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಪ್ರಾರಂಭವಾಗುವ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಪಂಜಿನ ಕವಾಯತು ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ಅಶ್ವಾರೋಹಿ ದಳದ ಸಾಹಸ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು.

ಅಶ್ವಾರೋಹಿ ದಳದ ಸಾಹಸ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಇದಕ್ಕೂ ಮುನ್ನ ಸಾಂಪ್ರದಾಯಿಕವಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಲೋಟ್ ಅವರು ತೆರೆದ ವಾಹನದಲ್ಲಿ ಪಥ ಸಂಚಲನದ ಪರಿವೀಕ್ಷಣೆ ಮಾಡಿದರು. ಅಶ್ವಾರೋಹಿ ಪಡೆಯ ತುಕಡಿಗಳು, ಕೆಎಸ್‌ಆರ್‌ ಪಿಯ ತುಕಡಿಗಳು, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ, ನೌಕದಳ, ವಾಯುದಳ, ಸೌಟ್ಸ್ ಮತ್ತು ಗೈಡ್ಸ್ ಬಾಲಕಿ ಯರು, ಸೇವಾದಳ ಸೇರಿದಂತೆ ಶಸ್ತ್ರಸಜ್ಜಿತ ತುಕಡಿಗಳಿಂದ ನಡೆದ ಪರೇಡ್
ಗಮನ ಸೆಳೆಯಿತು.

ಖ್ಯಾತ ಕಲಾವಿದರಾದ ಅನನ್ಯ ಭಟ್ ಮತ್ತು ತಂಡದವರು ನಾಡಗೀತೆ ಹಾಡಿದರೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾದ್ಯವೃಂದದವರು ರಾಷ್ಟ್ರ ಗೀತೆ ನುಡಿಸಿದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ಮೊದಲ ಬಾರಿಗೆ ಆಯೋಜಿಸಿದ್ದ ‘ಬೃಹತ್ ಡೋನ್ ಶೋ’ ನಲ್ಲಿ ಬಾನಂಗಳದಲ್ಲಿ ಮೂಡಿದ ಚಿತ್ತಾರಗಳನ್ನು ನೋಡಿ ಜನರು ಸಂಭ್ರಮಿಸಿದರು. ರೋಚಕ ಬೈಕ್ ಶೋ ಪ್ರೇಕ್ಷಕರನ್ನು ಕುತೂಹಲದ ಜತೆಗೆ ಎದೆ ಝಲ್ಲೆನಿಸುವಂತೆ ಮಾಡಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ಅಧಿ ಕಾರಿಗಳು, ಗಣ್ಯರು,ಜನಪ್ರತಿನಿಧಿಗಳು ಹಾಜರಾಗಿ ಪಂಜಿನ ಕವಾಯತು ಪ್ರದರ್ಶನವನ್ನು ವೀಕ್ಷಿಸಿದರು.

ಪಾಸ್ ಇದ್ದರೂ ಗೊಂದಲ: ಜಂಬೂಸವಾರಿ ವೀಕ್ಷಿಸಿದ್ದ ಗಣ್ಯರು ಬನ್ನಿಮಂಟಪದ ಕಡೆಗೆ ಆಗಮಿಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತ ವಾಯಿತು. ಪಾಸ್‌ ಇದ್ದರೂ ಯಾವ ಗೇಟ್‌ನಿಂದ ಒಳಗೆ ಹೋಗ ಬೇಕು ಎನ್ನುವ ಗೊಂದಲದಿಂದ ಹಲವರು ಪರದಾಡಿದರೆ, ಪಾಸ್ ಇಲ್ಲದಿದ್ದರೂ ಕೆಲವರು ಒಳನುಗ್ಗಿ ಅಡ್ಡಾಡಿಕೊಂಡು ವೀಕ್ಷಣೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

15 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

55 mins ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

1 hour ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

1 hour ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago