Andolana originals

ಪಂಜಿನ ಕವಾಯತಿನೊಂದಿಗೆ ದಸರಾಕ್ಕೆ ವರ್ಣರಂಜಿತ ತೆರೆ

ಮೈಸೂರು: ಆಕರ್ಷಕ ಪರೇಡ್, ಅನೇಕ ರೋಚಕ, ಸಾಹಸ ಪ್ರದರ್ಶನಗಳು, ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ರೂಪಕ, ಹಾಡು, ಚಂಡೆ ಮದ್ದಳೆ, ಮನಮೋಹಕ ಪಂಜಿನ ಕವಾಯತು, ಡ್ರೋನ್ ಪ್ರದರ್ಶನ ಇವುಗಳೊಂದಿಗೆ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು.
ಶನಿವಾರ ಬನ್ನಿಮಂಟಪ ಮೈದಾನದಲ್ಲಿ ನಡೆದ ಪಂಜಿನ ಕವಾಯತು ಪ್ರದರ್ಶನ (ಟಾರ್ಚ್‌ ಲೈಟ್ ಪರೇಡ್)ದಲ್ಲಿ ಕಲೆಯ ಅನೇಕ ಪ್ರಕಾರಗಳು ಅನಾವರ ಣಗೊಂಡವು. ಸುಬೇದಾರ್ ಎಂ.ಕೆ.ಸಿಂಗ್ ನೇತೃತ್ವದಲ್ಲಿ ನಡೆದ ರೋಚಕ ಬೈಕ್ ಶೋ ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿತು.

ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಪ್ರಾರಂಭವಾಗುವ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಪಂಜಿನ ಕವಾಯತು ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ಅಶ್ವಾರೋಹಿ ದಳದ ಸಾಹಸ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು.

ಅಶ್ವಾರೋಹಿ ದಳದ ಸಾಹಸ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಿತು. ಇದಕ್ಕೂ ಮುನ್ನ ಸಾಂಪ್ರದಾಯಿಕವಾಗಿ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಲೋಟ್ ಅವರು ತೆರೆದ ವಾಹನದಲ್ಲಿ ಪಥ ಸಂಚಲನದ ಪರಿವೀಕ್ಷಣೆ ಮಾಡಿದರು. ಅಶ್ವಾರೋಹಿ ಪಡೆಯ ತುಕಡಿಗಳು, ಕೆಎಸ್‌ಆರ್‌ ಪಿಯ ತುಕಡಿಗಳು, ನಗರ ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಗೃಹ ರಕ್ಷಕ ದಳ, ನೌಕದಳ, ವಾಯುದಳ, ಸೌಟ್ಸ್ ಮತ್ತು ಗೈಡ್ಸ್ ಬಾಲಕಿ ಯರು, ಸೇವಾದಳ ಸೇರಿದಂತೆ ಶಸ್ತ್ರಸಜ್ಜಿತ ತುಕಡಿಗಳಿಂದ ನಡೆದ ಪರೇಡ್
ಗಮನ ಸೆಳೆಯಿತು.

ಖ್ಯಾತ ಕಲಾವಿದರಾದ ಅನನ್ಯ ಭಟ್ ಮತ್ತು ತಂಡದವರು ನಾಡಗೀತೆ ಹಾಡಿದರೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ವಾದ್ಯವೃಂದದವರು ರಾಷ್ಟ್ರ ಗೀತೆ ನುಡಿಸಿದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ವತಿಯಿಂದ ಮೊದಲ ಬಾರಿಗೆ ಆಯೋಜಿಸಿದ್ದ ‘ಬೃಹತ್ ಡೋನ್ ಶೋ’ ನಲ್ಲಿ ಬಾನಂಗಳದಲ್ಲಿ ಮೂಡಿದ ಚಿತ್ತಾರಗಳನ್ನು ನೋಡಿ ಜನರು ಸಂಭ್ರಮಿಸಿದರು. ರೋಚಕ ಬೈಕ್ ಶೋ ಪ್ರೇಕ್ಷಕರನ್ನು ಕುತೂಹಲದ ಜತೆಗೆ ಎದೆ ಝಲ್ಲೆನಿಸುವಂತೆ ಮಾಡಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಹಿರಿಯ ಅಧಿ ಕಾರಿಗಳು, ಗಣ್ಯರು,ಜನಪ್ರತಿನಿಧಿಗಳು ಹಾಜರಾಗಿ ಪಂಜಿನ ಕವಾಯತು ಪ್ರದರ್ಶನವನ್ನು ವೀಕ್ಷಿಸಿದರು.

ಪಾಸ್ ಇದ್ದರೂ ಗೊಂದಲ: ಜಂಬೂಸವಾರಿ ವೀಕ್ಷಿಸಿದ್ದ ಗಣ್ಯರು ಬನ್ನಿಮಂಟಪದ ಕಡೆಗೆ ಆಗಮಿಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತ ವಾಯಿತು. ಪಾಸ್‌ ಇದ್ದರೂ ಯಾವ ಗೇಟ್‌ನಿಂದ ಒಳಗೆ ಹೋಗ ಬೇಕು ಎನ್ನುವ ಗೊಂದಲದಿಂದ ಹಲವರು ಪರದಾಡಿದರೆ, ಪಾಸ್ ಇಲ್ಲದಿದ್ದರೂ ಕೆಲವರು ಒಳನುಗ್ಗಿ ಅಡ್ಡಾಡಿಕೊಂಡು ವೀಕ್ಷಣೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago