Andolana originals

ಮಾರ್ಚ್‌ನಲ್ಲಿ ನೂತನ ಬಸ್‌ ನಿಲ್ದಾಣಕ್ಕೆ ಶಿಲಾನ್ಯಾಸ

ವಿರೋಧದ ನಡೆವೆಯೂ ಬನ್ನಿಮಂಟಪದಲ್ಲೇ ಬಸ್‌ ನಿಲ್ದಾಣ ನಿರ್ಮಿಸಲು ತೀರ್ಮಾನ

ಕೆ. ಬಿ. ರಮೇಶನಾಯಕ
ಮೈಸೂರು: ಸಬ್ ಅರ್ಬನ್ ಬಸ್ ನಿಲ್ದಾಣ ಸ್ಥಳಾಂತರಕ್ಕೆ ಬಂದ ತೀವ್ರ ವಿರೋಧ ಹಾಗೂ ಒತ್ತಡಗಳ ನಡುವೆಯೂ ಈಗಾಗಲೇ ತೀರ್ಮಾನಿಸಿದಂತೆ ಬನ್ನಿಮಂಟಪದಲ್ಲಿ ನೂತನ ಬಸ್ ನಿಲ್ದಾಣವನ್ನು ನಿರ್ಮಿಸುವ ಅಚಲ ನಿರ್ಧಾರ ತಳೆದಿರುವ ಸರ್ಕಾರ ಮಾರ್ಚ್‌ನಲ್ಲಿ ಶಂಕುಸ್ಥಾಪನೆಗೆ ತಯಾರಿ ನಡೆಸಿದೆ.

ನಗರದ ಮಧ್ಯಭಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡುವ ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.

ಭವಿಷ್ಯದ ಬಸ್‌ಗಳ ಕಾರ್ಯಾಚರಣೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅತ್ಯಾಧುನಿಕ ಶೈಲಿಯಲ್ಲಿ ನಿರ್ಮಾಣವಾಗುವ ಬಸ್ ನಿಲ್ದಾಣ ಮೂಲ ಸೌಕರ್ಯಗಳನ್ನು ಹೊಂದಿರುತ್ತದೆ. ಸಬ್ ಅರ್ಬನ್ ಬಸ್ ನಿಲ್ದಾಣವನ್ನು ಸ್ಥಳಾಂತರಿಸದಂತೆ ಸುತ್ತ ಮುತ್ತಲಿನ ವ್ಯಾಪಾರಿಗಳು ಇಟ್ಟಿದ್ದ ಬೇಡಿಕೆಯನ್ನು ನಯವಾಗಿಯೇ ತಿರಸ್ಕರಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಬನ್ನಿಮಂಟಪದಲ್ಲಿರುವ ನಿಗಮಕ್ಕೆ ಸೇರಿದ ಡಿಪೋ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಿಸುವುದು ಖಚಿತವಾಗಿದೆ.

ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಹಾಗೂ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಕಾರ್ಯಾಚರಣೆ ಮಾಡುವ ಹಾಗೂ ಅಲ್ಲಿಂದ ಬರುವ ಬಸ್‌ಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ. ಇದರಿಂದ ಈಗಿರುವ ಬಸ್ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದರಿಂದಾಗಿ ಸೂಕ್ತ ಜಾಗಕ್ಕಾಗಿ ಶೋಧ ನಡೆಸುತ್ತಿದ್ದ ನಿಗಮದ ಅಧಿಕಾರಿಗಳು ಬನ್ನಿಮಂಟಪ ದಲ್ಲಿರುವ ನಿಗಮದ ಜಾಗದಲ್ಲೇ ಸಮಗ್ರ ಸಾರಿಗೆ ವ್ಯವಸ್ಥೆ ಯನ್ನು ಕಲ್ಪಿಸಲು ರಾಜ್ಯಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

ಸರ್ಕಾರ ಈಗಾಗಲೇ ೧೨೯ ಕೋಟಿ ರೂ. ಅನುದಾನ ಬಿಡುಗಡೆಗೆ ಸಚಿವ ಸಂಪುಟ ದಲ್ಲಿ ಅನುಮೋದನೆ ನೀಡಿದ್ದರಿಂದ ನಿಗಮದ ಕೇಂದ್ರ ಕಚೇರಿಯಲ್ಲಿ ಟೆಂಡರ್ ಪ್ರಕ್ರಿಯೆ ಶುರುವಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದು ಏಜೆನ್ಸಿ ನಿಗದಿ ಯಾಗುತ್ತಿದ್ದಂತೆ ಕಾಮಗಾರಿ ಶುರುವಾಗಲಿದ್ದು, ಮಾರ್ಚ್ ಒಳಗೆ ಶಂಕುಸ್ಥಾಪನೆಯೂ ನಡೆಯಲಿದೆ ಎಂದು ಹೇಳಲಾಗಿದೆ.

ಅತ್ಯಾಧುನಿಕ ಶೈಲಿಯ ನಿಲ್ದಾಣ: ಹುಬ್ಬಳ್ಳಿಯ ಶಶಿ ಪ್ರಾಜೆಕ್ಟ್ ಕನ್ಸಲ್ಟೆಂಟ್ ಪ್ರೈವೇಟ್ ಲಿಮಿಟೆಡ್‌ನವರು ನೂತನ ಬಸ್ ನಿಲ್ದಾಣದ ವಿನ್ಯಾಸವನ್ನು ತಯಾರಿಸಿದ್ದು, ೬ ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳುವ ನಿಲ್ದಾಣದ ನೆಲಮಾಳಿಗೆ ಯಲ್ಲಿ ಒಂದು ಸಾವಿರ ಬೈಕ್‌ಗಳು, ೫೦೦ ಕಾರುಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೆಲ ಅಂತಸ್ತಿನಲ್ಲಿ ೭೫ ಬಸ್‌ಗಳ ನಿಲುಗಡೆಗೆ ಅವಕಾಶ, ಭವಿಷ್ಯ ದಲ್ಲಿ ವಿದ್ಯುತ್‌ಚಾಲಿತ ಬಸ್‌ಗಳು ಸಂಚಾರ ಮಾಡುವ ಕಾರಣಕ್ಕಾಗಿ ೩೦ ಇವಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಅಳವಡಿಸ ಲಾಗುತ್ತದೆ.

ಸಬ್ ಅರ್ಬನ್ ಬಸ್ ನಿಲ್ದಾಣದಲ್ಲಿ ೨೫ ಬಸ್‌ಗಳು ಮಾತ್ರ ನಿಲುಗಡೆಗೆ ಅವಕಾಶವಿದ್ದರೆ, ಇಲ್ಲಿ ಏಕಕಾಲದಲ್ಲಿ ೭೫ಬಸ್‌ಗಳು ನಿಲುಗಡೆ ಮಾಡಬಹುದಾಗಿರುವ ಕಾರಣ ಕಾಯ್ದಿರಿಸುವಿಕೆ ಬಸ್ ಗಳನ್ನು ಹೆಚ್ಚಿನ ಮಟ್ಟದಲ್ಲಿ ಕಾರ್ಯಾಚರಣೆಗೆ ಬಳಸಬಹುದಾಗಿದೆ ಎಂದು ಹೇಳಲಾಗಿದೆ.

ಬನ್ನಿಮಂಟಪದ ಡಿಪೋ ಜಾಗದಲ್ಲಿ ಅತ್ಯಾಧುನಿಕ ಶೈಲಿಯ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಒಪ್ಪಿಗೆ ದೊರೆತು ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಈಗಿರುವ ಬಸ್ ನಿಲ್ದಾಣ ಕಿಷ್ಕಿಂದೆಯಾಗಿರುವ ಕಾರಣ ಹೊಸ ನಿಲ್ದಾಣ ಅನಿವಾರ್ಯವಾಗಿದೆ. ಯಾವುದೇ ಯೋಜನೆಗೆ ಪರ- ವಿರೋಧ ಸಹಜ. -ಶ್ರೀನಿವಾಸ್, ಡಿಸಿ, ಮೈಸೂರು ಗ್ರಾಮಾಂತರ ಸಾರಿಗೆ ವಿಭಾಗ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

4 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago