Andolana originals

ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ

ಹೆಚ್ಚುತ್ತಿರುವ ಶೀತ ವಾತಾವರಣ; ಸದ್ಯಕ್ಕಿಲ್ಲ ಮಳೆಯ ಆತಂಕ 

ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದ್ದು, ಫೆಬ್ರವರಿವರೆಗೆ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ ಕಡೆ ಅಧಿಕ ಪ್ರಮಾಣದಲ್ಲಿ ಬೀಸುತ್ತಿರುವುದರಿಂದ ತೀವ್ರ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಡಿ.೧೫ರಂದು ಈ ತಿರುಗುವಿಕೆಯ ವ್ಯಾಪ್ತಿ ವಿಸ್ತಾರಗೊಂಡು ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗಲಿದೆ. ಇದರಿಂದ ರಾಜ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ.

ರಾಜ್ಯದ ಉತ್ತರದ ಜಿಲ್ಲೆಗಳಲ್ಲಿ ಅತೀ ಕಡಿಮೆ ತಾಪಮಾನ ದಾಖಲಾಗುತ್ತಿದೆ. ದಕ್ಷಿಣದ ಜಿಲ್ಲೆಗಳಲ್ಲಿಯೂ ತಾಪಮಾನ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಮಡಿಕೇರಿಯಲ್ಲಿ ಕನಿಷ್ಠ ೧೦ರಿಂದ ೧೨ ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಮಂಜಿನ ನಗರಿಯಲ್ಲಿ ಮೈ ಕೊರೆಯುವ ಚಳಿ ಕಂಡುಬರುತ್ತಿದ್ದು, ರಾತ್ರಿ ಮತ್ತು ಬೆಳಗಿನ ಜಾವ] ಮನೆಯಿಂದ ಹೊರಬರುವುದು ಕಷ್ಟವೆನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನು ಓದಿ: ‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಡಿಸೆಂಬರ್ ತಿಂಗಳಿನಲ್ಲಿ ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇಲ್ಲಿನ ಚಳಿಯ ವಾತಾವರಣಕ್ಕೆ ಕೆಲ ಪ್ರವಾಸಿಗರು ಮನಸೋತರೆ, ಮತ್ತೆ ಕೆಲವರು ವಿಪರೀತ ಚಳಿಗೆ ನಡುಗುವಂತಾಗಿದೆ. ಶೀತ ವಾತಾವರಣಕ್ಕೆ ಫೈರ್ ಕ್ಯಾಂಪ್, ಹೀಟರ್, ಸ್ವೆಟರ್, ಟೋಪಿ, ಸಾಕ್ಸ್ ಮೊರೆ ಹೋಗುತ್ತಿದ್ದಾರೆ. ಆದರೂ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಇಲ್ಲಿನ ವಿಭಿನ್ನ ವಾತಾವರಣವನ್ನು ಎಂಜಾಯ್ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಭತ್ತ ಮತ್ತು ಕಾಫಿ ಬೆಳೆ ಕಟಾವಿಗೆ ಬಂದಿದ್ದು, ಹಲವೆಡೆ ಕೊಯ್ಲು ಆರಂಭವಾಗಿದೆ. ಈಗಿನ ವಾತಾವರಣ ಕಟಾವು ಮಾಡಿದ ಬೆಳೆಗಳನ್ನು ಒಣಗಿಸಲು ಪೂರಕವಾಗಿದ್ದು, ಬೆಳೆ ತೇವಾಂಶದಲ್ಲಿರದಂತೆ ಎಚ್ಚರ ವಹಿಸುವುದರೊಂದಿಗೆ ಒಣಗಿಸಲು ಯಾವುದೇ ಅಡ್ಡಿಯಿಲ್ಲ ಎಂದು ಹವಾಮಾನ ಇಲಾಖೆಯ ವಿಜ್ಞಾನಿಗಳು ತಿಳಿಸಿದ್ದಾರೆ.

” ಉತ್ತರ ಭಾರತದ ಅಸ್ವಾಭಾವಿಕ ತಿರುಗುವಿಕೆಯ ಕಾರಣದಿಂದ ಉತ್ತರದ ಶೀತ ಮಾರುತಗಳು ದಕ್ಷಿಣದ ರಾಜ್ಯಗಳ ಕಡೆ ಅಧಿಕ ಪ್ರಮಾಣದಲ್ಲಿ ಬೀಸುತ್ತಿರುವುದರಿಂದ ತೀವ್ರ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಇದು ಫೆಬ್ರವರಿವರೆಗೆ ಹೀಗೆಯೇ ಮುಂದುವರಿಯಲಿದ್ದು, ಚಳಿ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಆತಂಕ ಸದ್ಯಕ್ಕಿಲ್ಲ. ರೈತರು ನಿರಾತಂಕವಾಗಿ ಕಟಾವು ಕಾರ್ಯ ನಡೆಸಬಹುದು.”

-ಡಾ.ಸುಮಂತ್ ಕುಮಾರ್ ಜಿ.ವಿ, ಸಹ ಸಂಶೋಧಕ, ಹವಾಮಾನ ವಿಭಾಗ (ನಾಗನಹಳ್ಳಿ),ಮೈಸೂರು.

ಚಳಿ ವಾತಾವರಣ ಮುಂದುವರಿಕೆ..!: 

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯಾದ್ಯಂತ ಒಣ ಹವೆಯೊಂದಿಗೆ ತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಡಿ.೧೭ರಂದು ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಡಿ.೧೭ರಂದು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಬಹುದು. ಡಿ.೧೮ ಅಥವಾ ೧೯ರಿಂದ ಮತ್ತೆ ತೀವ್ರ ಚಳಿಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೀನ್ ಡಿಸೋಜ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

1 hour ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

1 hour ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

1 hour ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

1 hour ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

11 hours ago