Andolana originals

ವಸ್ತುಪ್ರದರ್ಶನದಲ್ಲಿ ‘ಮೋಜಿನ ಮೇಳ’ ಸಂಪನ್ನ

ಎಚ್.ಎಸ್.ದಿನೇಶ್ ಕುಮಾರ್

ಫಾಲ್ಸ್ ಮಾದರಿಯ ಝರಿಯಲ್ಲಿ ಸೆಲಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ ಜನರು

ಮೈಸೂರು: ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಕಳೆದ ೪೦ ದಿನಗಳಿಂದ ನಡೆದ ‘ಮೋಜಿನ ಮೇಳ’ ಪ್ರದರ್ಶನ ಭಾನುವಾರ ಮುಕ್ತಾಯವಾಗಿದೆ. ಮೇಳದಲ್ಲಿ ಸ್ಥಳೀಯರು ಸೇರಿದಂತೆ ದೇಶದ ವಿವಿಧೆಡೆ ಗಳಿಂದ ಆಗಮಿಸಿದ್ದ ಪ್ರವಾಸಿಗರು ಭೇಟಿ ನೀಡಿ ಸಂಭ್ರಮಿಸಿದ್ದಾರೆ.

ನಗದ ಪ್ರಮುಖ ಆಕರ್ಷಣೆಯ ಕೇಂದ್ರವಾಗಿರುವ ದಸರಾ ವಸ್ತುಪ್ರದರ್ಶನ ಮೈದಾನವನ್ನು ವರ್ಷ ಪೂರ್ತಿ ಪ್ರವಾಸಿ ಸ್ಥಳವನ್ನಾಗಿ ಪರಿವರ್ತಿಸುವ ಪ್ರಯತ್ನದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ‘ಮೋಜಿನ ಮೇಳ ಪ್ರದರ್ಶನ’ವನ್ನು ಪ್ರಾರಂಭಿಸಿತ್ತು. ಒಂದೇ ಸೂರಿನಡಿಯಲ್ಲಿ ಶಾಪಿಂಗ್, ಆಹಾರ ಮಳಿಗೆಗಳು, ಅಮ್ಯೂಸ್‌ಮೆಂಟ್, ಮಕ್ಕಳ ಆಟೋಟ ವಿಭಾಗ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಸೆಲ್ಛಿ ಪಾಯಿಂಟ್: ಇದೇ ಪ್ರಥಮ ಬಾರಿಗೆ ವಸ್ತು ಪ್ರದರ್ಶನ ಆವರಣದಲ್ಲಿ ನಯಾಗರ ಫಾಲ್ಸ್ ಮಾದರಿಯಲ್ಲಿ ಝರಿ ನೀರು ಹರಿಯುವ ವ್ಯವಸ್ಥೆ ಮಾಡಲಾಗಿತ್ತು. ಇದು ಅಕ್ಷರಶಃ ಸೆಲ್ಛಿ ಪಾಯಿಂಟ್ ಆಗಿ ಪರಿವ ರ್ತನೆಯಾಗಿತ್ತು. ಪ್ರವಾಸಿಗರು ಸೆಲಿ ತೆಗೆದುಕೊಂಡು ಖುಷಿಪಟ್ಟರು.

ಚುರುಮುರಿ, ಡೆಲ್ಲಿ ಹಪ್ಪಳ: ಮೋಜಿನ ಮೇಳಕ್ಕೆ ಆಗಮಿಸಿದ್ದವರಿಗೆ ಕುರುಕಲು ತಿಂಡಿಗೇನು ಬರವಿರಲಿಲ್ಲ. ಮಲ್ಲಿಗೆ ಇಡ್ಲಿ, ಚುರುಮುರಿ, ಗೋಬಿ, ನೂಡಲ್ಸ್, ಮಸಾಲೆ ಪುರಿ ಹಾಗೂ ಇನ್ನಿತರೆ ತಿನಿಸುಗಳು ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾದವು.

ಕೈ ಕೊಟ್ಟ ಮಳೆ: ಆರಂಭದಲ್ಲಿ ಲಾಭದಾಯಕವಾಗಿ ನಡೆದ ಮೇಳ ಅಂತ್ಯದಲ್ಲಿ ಮಳೆಯ ಕಾರಣದಿಂದ ಜನರನ್ನು ಸೆಳೆಯುವಲ್ಲಿ ವಿಫಲವಾಯಿತು. ಕೊನೆಯ ಒಂದು ವಾರವಂತೂ ವಸ್ತುಪ್ರದರ್ಶನ ಆವರಣ ಬಿಕೋ ಎನ್ನುತ್ತಿತ್ತು ಎಂದು ಜನರು ಹೇಳುತ್ತಾರೆ.

ಮಿಶ್ರ ಪ್ರತಿಕ್ರಿಯೆ: ವ್ಯಾಪಾರಸ್ಥರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಮೊದಲು ಜನರು ಸಾಕಷ್ಟು ಸಂಖ್ಯೆಯಲ್ಲಿ ಭೇಟಿ ನೀಡಿದರು. ಕೊನೆ ದಿನಗಳಲ್ಲಿ ಜನವೂ ಇಲ್ಲದೇ, ವ್ಯಾಪಾರವೂ ಇಲ್ಲದೇ ಕೈ ಸುಟ್ಟುಕೊಳ್ಳುವಂತಾಯಿತು ಎನ್ನುತ್ತಾರೆ ವ್ಯಾಪಾರಿಗಳು.

” ಆರಂಭದಲ್ಲಿ ಹೆಚ್ಚಿನ ಜನಸಂದಣಿ ಇತ್ತು. ಕೊನೆಯ ದಿನಗಳಲ್ಲಿ ನಾವು ಮಳೆಯಿಂದ ನಷ್ಟ ಅನುಭವಿಸುವಂತಾಗಿದೆ. ಮಳೆ ಬಾರದಿದ್ದಲ್ಲಿ ಹೆಚ್ಚಿನ ಜನರು ಬರುತ್ತಿದ್ದರು. ಮಳೆಯ ಕಾರಣ ಜನರು ಇಲ್ಲಿಗೆ ಭೇಟಿ ನೀಡಲಿಲ್ಲ. ದಸರಾ ವೇಳೆ ನಡೆಯುವ ವಸ್ತುಪ್ರದರ್ಶನಕ್ಕೂ ಈಗ ನಡೆಯುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ.”

-ಚಂದ್ರು, ವ್ಯಾಪಾರಿ

” ಬೇಸಿಗೆ ವೇಳೆ ಜನರನ್ನು ವಿಶೇಷವಾಗಿ ಮಕ್ಕಳನ್ನು ಸೆಳೆಯುವ ಉದ್ದೇಶದಿಂದ ಬೇಸಿಗೆ ವಸ್ತುಪ್ರದರ್ಶನ ನಡೆಸಲಾಯಿತು. ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತ ವಾಗಿದೆ. ಮಳೆಯ ಕಾರಣದಿಂದ ಕೊನೆಯಲ್ಲಿ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ ಅಷ್ಟೇ. ಮಳೆ ಮುಂದುವರಿದಿರುವ ಕಾರಣ ಮೇಳ ವನ್ನು ವಿಸ್ತರಿಸಲಿಲ್ಲ.”

-ಅಯೂಬ್‌ಖಾನ್, ಅಧ್ಯಕ್ಷರು, ವಸ್ತುಪ್ರದರ್ಶನ ಪ್ರಾಧಿಕಾರ 

ಆಂದೋಲನ ಡೆಸ್ಕ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

16 mins ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

25 mins ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

37 mins ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

58 mins ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

1 hour ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

1 hour ago