Andolana originals

‘ನವ ಮೃಗಾಲಯಗಳಲ್ಲೂ ನವಚೈತನ್ಯ ಮೂಡಿಸುವ ಗುರಿ’

ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕರ್ನಾಟಕ ಮೃಗಾಲಯ ಪ್ರಾಽಕಾರದ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಖಚಿತ ನುಡಿ

ಎಸ್.ಎಸ್.ಭಟ್

ನಂಜನಗೂಡು: ರಾಜ್ಯದ ಮೃಗಾಲಯಗಳನ್ನು ಮತ್ತಷ್ಟು ಆಕರ್ಷಣೀಯವಾಗಿಸುವ ಹಂಬಲ ಇದೆ. ಈ ನಿಟ್ಟಿನಲ್ಲಿ ಮೈಸೂರಿನ ಮೃಗಾಲಯದಲ್ಲಿ ಮತ್ಸ್ಯಾಗಾರ ಹಾಗೂ ಪೆಂಗ್ವಿನ್ ಹೌಸ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ನೂತನ ಅಧ್ಯಕ್ಷ ಹಾಡ್ಯ ರಂಗಸ್ವಾಮಿ ಹೇಳಿದರು.

ಮೃಗಾಲಯಗಳಲ್ಲಿ ಪ್ರಾಣಿಗಳ ಸಂರಕ್ಷಣೆಗೆ ಆದ್ಯತೆ ನೀಡುವುದಲ್ಲದೆ, ಹೊಸ ಯೋಜನೆಗಳನ್ನು ರೂಪಿಸಲು ಕ್ರಮವಹಿಸಲಾಗುವುದು ಎಂದು ಹೇಳುವ ಮೂಲಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದರು.

ಆಂದೋಲನ: ರಾಜ್ಯ ಮೃಗಾಲಯದ ಅಧ್ಯಕ್ಷರಾಗಿ ನೇಮಕಗೊಂಡ ಆದೇಶ ಹೊರಬಿದ್ದ ಸಂದರ್ಭದಲ್ಲಿ ನಿಮ್ಮ ಮನದಾಳದಲ್ಲಿ ಏನನಿಸಿತು?

ಹಾಡ್ಯ ರಂಗಸ್ವಾಮಿ: ಮೃಗಾಲಯದ ಅಧ್ಯಕ್ಷ ಸ್ಥಾನ ನನಗೆ ಅನಿರೀಕ್ಷಿತವಾಗಿ ಒಲಿದು ಬಂದಿದೆ. ನಾನು ಇದಕ್ಕಾಗಿ ಯಾವುದೇ ಲಾಬಿಯನ್ನು ನಡೆಸಿರಲಿಲ್ಲ. ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ರಂಗಸ್ವಾಮಿ ಅವರು ಈವರೆಗೆ ಏನನ್ನೂ ಕೇಳಿಲ್ಲ. ಹಾಗಾಗಿ ಈ ಬಾರಿ ಅವರಿಗೆ ಯಾವುದಾದರೂ ಸ್ಥಾನ ನೀಡಿ ಎಂದು ಮನವಿ ಸಲ್ಲಿಸಿದ್ದರ ಹೊರತಾಗಿ, ವೈಯಕ್ತಿಕವಾಗಿ ಯಾವುದೇ ಲಾಬಿ ಮಾಡಿಲ್ಲ. ಅಂತಹ ಜಾಯಮಾನ ನನ್ನದಲ್ಲ. ೧೯೮೩ರಲ್ಲಿ ಸಚಿವರೂ, ಸಂತೇಮರಹಳ್ಳಿಯ ಶಾಸಕರೂ ಆಗಿದ್ದ ಬಿ.ರಾಚಯ್ಯನವರ ನಾಯಕತ್ವದಲ್ಲಿ ನಾನು ರಾಜಕಾರಣ ಪ್ರವೇಶಿಸಿದೆ. ನಂತರ ರಾಚಯ್ಯ ಅವರ ಪುತ್ರ, ಪ್ರಸ್ತುತ ಶಾಸಕರಾಗಿರುವ ಎ.ಆರ್. ಕೃಷ್ಣಮೂರ್ತಿಯವರ ಗರಡಿಯಲ್ಲಿ ಪಳಗಿ, ಸಿದ್ದರಾಮಯ್ಯನವರ ಜೊತೆ ಕಾಂಗ್ರೆಸ್‌ಗೆ ಸೇರ್ಪಡೆಯಾದೆ. ಕಾರ್ಯ ಗ್ರಾಮ ಪಂಚಾಯಿತಿಗೆ ಒಂದು ಅವಽಗೆ ಉಪಾಧ್ಯಕ್ಷನಾಗಿ, ಮತ್ತೊಂದು ಅವಧಿಗೆ ಅಧ್ಯಕ್ಷನಾದಾಗ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿದ ಸಿದ್ದರಾಮಯ್ಯನವರು, ನನ್ನನ್ನು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಕ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ಮೇಲೆ ವಿಶ್ವಾಸ ಇಟ್ಟು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ನೇಮಿಸಿದ್ದಾರೆ. ಅವರ ನಂಬಿಕೆಯನ್ನು ಉಳಿಸಿಕೊಂಡು, ರಾಜ್ಯದ ಮೃಗಾಲಯಗಳನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇನೆ.

ಆಂದೋಲನ: ಮೃಗಾಲಯಗಳ ಅಭಿವೃದ್ಧಿಗಾಗಿ ನಿಮ್ಮಲ್ಲಿರುವ ಯೋಜನೆಗಳೇನು?

ಹಾಡ್ಯ ರಂಗಸ್ವಾಮಿ: ರಾಜ್ಯದ ಮೃಗಾಲಯಗಳನ್ನು ಇನ್ನಷ್ಟು ಬಲಪಡಿಸಬೇಕು. ಬನ್ನೇರುಘಟ್ಟ ಹಾಗೂ ಮೈಸೂರಿನ ಮೃಗಾಲಯಗಳು ಮಾತ್ರ ಲಾಭದಲ್ಲಿವೆ. ಉಳಿದ ಏಳು ಮೃಗಾಲಯಗಳು ನಷ್ಟದಲ್ಲಿವೆ. ಅವುಗಳನ್ನೂ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತೇನೆ. ನಾನು ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದಾಗ ನಿಮಗೆ ಯಾವ ಬ್ರಾಂಡ್‌ನ ನೂತನ ಕಾರು ಬೇಕು ಎಂದು ಅಧಿಕಾರಿಗಳು ಕೇಳಿದರು. ರಾಜ್ಯದ ಮೃಗಾಲಯಗಳ ನಷ್ಟದ ಕಾಲ ಮುಗಿಯುವವರೆಗೂ ನನಗೆ ಹೊಸ ಕಾರು ಬೇಡ. ಹಳೆಯದೇ ಇರಲಿ ಎಂದು ಹೇಳಿದ್ದೇನೆ.

ಆಂದೋಲನ: ಮೈಸೂರಿನ ಕಾರಂಜಿ ಕೆರೆ ಮತ್ತು ಶ್ರೀ ಜಯಚಾಮರಾಜೇಂದ್ರ ಮೃಗಾಲಯದ ನಡುವೆ ಇರುವ ಖಾಲಿ ಜಾಗಕ್ಕೆ ಕಾಯಕಲ್ಪ ನೀಡುವ ಚಿಂತನೆ ಇದೆಯೇ?

ಹಾಡ್ಯ ರಂಗಸ್ವಾಮಿ: ಕಾರಂಜಿ ಕೆರೆ ಮತ್ತು ಜಯಚಾಮರಾಜೇಂದ್ರ ಮೃಗಾಲಯದ ನಡುವಿನ ಖಾಲಿ ಜಾಗದಲ್ಲಿ ಮತ್ಸ್ಯಾಗಾರ ಹಾಗೂ ಪೆಂಗ್ವಿನ್ ಹೌಸ್ ಗಳನ್ನು ನಿರ್ಮಿಸುವ ಉದ್ದೇಶ ನನೆಗುದಿಗೆ ಬಿದ್ದಿದೆ. ಅದನ್ನು ನನ್ನ ಅವಧಿಯಲ್ಲಿ ಕಾರ್ಯಗತಗೊಳಿಸುವ ಹಂಬಲ ಇದೆ. ಮೃಗಾಲಯದ ಆವರಣದಲ್ಲಿ ಅನೇಕ ಕಟ್ಟಡಗಳ ನಿರ್ಮಾಣ ಅರೆಬರೆಯಾಗಿದ್ದು, ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು.

ಆಂದೋಲನ: ಶಾಲಾ ಮಕ್ಕಳಿಗೆ ಪ್ರವೇಶ ಶುಲ್ಕದ ರಿಯಾಯಿತಿ ಪ್ರಮಾಣವನ್ನು ಹೆಚ್ಚಿಸುವಿರಾ?

ಹಾಡ್ಯ ರಂಗಸ್ವಾಮಿ: ಶಾಲಾ ಮಕ್ಕಳಿಗೆ ಈಗಾಗಲೇ ರಿಯಾಯಿತಿ ಇದ್ದು, ಅದನ್ನು ಇನ್ನಷ್ಟು ಹೆಚ್ಚಿಸಬಹುದಾ ಎಂಬುದನ್ನು ಯೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ನಷ್ಟದಲ್ಲಿರುವ ಮೃಗಾಲಯಗಳನ್ನು ಲಾಭದಾಯಕ ಗೊಳಿಸುವ ಪ್ರಯತ್ನ ಮಾಡಲಾಗುವುದು. ಅದಾಗದಿದ್ದರೂ, ಕನಿಷ್ಠ ನಷ್ಟವಿಲ್ಲದಂತೆ ನಿರ್ವಹಿಸಲು ಮಾರ್ಗಗಳನ್ನು ಚಿಂತಿಸಲಾಗುವುದು. ಒಟ್ಟಾರೆಯಾಗಿ ಮೃಗಾಲಯಗಳನ್ನು ಮತ್ತಷ್ಟು ಆಕರ್ಷಣೀಯಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಯತೀಂದ್ರರ ಬೆಂಬಲದೊಂದಿಗೆ ಇಂದಿನಿಂದಲೇ ಪಣತೊಟ್ಟು ಕೆಲಸ ಮಾಡುತ್ತೇನೆ.

ಆಂದೋಲನ: ಮೃಗಾಲಯಕ್ಕೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಲು ಹೊಸ ಯೋಜನೆಗಳನ್ನು ರೂಪಿಸುವ ಆಲೋಚನೆ ಇದೆಯಾ?

ಹಾಡ್ಯ ರಂಗಸ್ವಾಮಿ: ನಿಜ, ಈ ಕುರಿತು ಈಗಾಗಲೇ ನಾನು ಒಂದೆರಡು ಯೋಜನೆಗಳ ಬಗ್ಗೆ ಚಿಂತಿಸಿದ್ದೇನೆ. ಅದಕ್ಕಾಗಿ ಸದ್ಯದಲ್ಲೇ ಮೃಗಾಲಯದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗುವುದು. ನಮ್ಮ ಮೃಗಾಲಯಗಳಲ್ಲಿ ಇಲ್ಲದ ವಿದೇಶಗಳಲ್ಲಿ ಕಾಣಬಹುದಾದ ಅಪರೂಪದ ಪ್ರಾಣಿಗಳನ್ನು ಇಲ್ಲಿಗೆ ತಂದು ಸಲಹಿ, ನಮ್ಮ ಮೃಗಾಲಯದ ವೀಕ್ಷಕರಿಗೆ ಅವುಗಳನ್ನು ಪರಿಚಯಿಸುವ ಹೆಬ್ಬಯಕೆ ಇದೆ. ಮೃಗಾಲಯದಲ್ಲಿ ಸಾಕಷ್ಟು ವರ್ಷಗಳು ಸೇವೆ ಸಲ್ಲಿಸಿ, ಒಳ್ಳೆಯ ಹೆಸರು ಗಳಿಸಿ ನಿವೃತ್ತರಾದವರ ಸಲಹೆಗಳನ್ನೂ ಪಡೆಯಲಾಗುವುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

2 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

2 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

2 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

2 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

2 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

2 hours ago