ಓದುಗರ ಪತ್ರ
ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿನ ಪ್ರವೇಶ ದರವನ್ನು ಗರಿಷ್ಟ ರೂ.೨೦೦ ಗೆ ನಿಗದಿ ಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ರಾಜ್ಯದ ಅದರಲ್ಲೂ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಮತ್ತು ಇತರ ವೈಭವೋಪೇತ ಚಲನಚಿತ್ರ ಮಂದಿರಗಳಲ್ಲಿ ಪ್ರವೇಶ ದರವನ್ನು ಮನಸೋ ಇಚ್ಛೆ ನಿಗದಿ ಅಮೇಲೆ ಹೊರೆಯನ್ನು ಹೊರಿಸಿದ್ದರು.
ಹೀಗಾಗಿ ಅನೇಕ ಚಿತ್ರಮಂದಿರಗಳು ಪ್ರೇಕ್ಷಕರಿಲ್ಲದೆ ಭಣಗುಡುತ್ತಿದ್ದವು. ಇದರಿಂದಾಗಿ ಸಣ್ಣ, ಮಧ್ಯಮ ಮಟ್ಟದ ಚಿತ್ರಗಳು ಕೂಡ ಪ್ರೇಕ್ಷಕರಿಲ್ಲದೇ ನರಳುವಂತಾಯಿತು. ಬೆಂಗಳೂರು, ಮೈಸೂರು ಮುಂತಾದ ಮಹಾನಗರಗಳಲ್ಲಿ ಚಿತ್ರಮಂದಿರಗಳು ಒಂದರ ಹಿಂದೆ ಒಂದು ಮುಚ್ಚಿ, ಈಗ ಕೇವಲ ಕೆಲವೇ ಚಿತ್ರಮಂದಿರಗಳು ಅಸ್ತಿತ್ವದಲ್ಲಿವೆ. ೬೦ರ ದಶಕದಲ್ಲಿ ಚಿತ್ರಮಂದಿರಗಳಲ್ಲಿನ ಪ್ರವೇಶ ದರ ಕೇವಲ ೬೫ ಪೈಸೆ ಇದ್ದಿತು. ಈಗ ಕೆಲವು ವೈಭವೋಪೇತ ಚಿತ್ರಮಂದಿರಗಳ ಪ್ರವೇಶ ದರ ೧೦೦೦ ರೂ. ಮೀರಿದೆ. ಚಲನಚಿತ್ರ ಮಂದಿರಗಳಲ್ಲಿ ದರವನ್ನು ನಿಗದಿ ಪಡಿಸುವ ಮೂಲಕ ರಾಜ್ಯ ಸರ್ಕಾರ ಚಿತ್ರಮಂದಿರಗಳ ಮೇಲೆ ಸ್ವಲ್ಪಮಟ್ಟಿನ ನಿಯಂತ್ರಣ ಸಾಧಿಸಿದಂತಾಗಿದೆ. ಇದು ಉತ್ತಮ ನಿರ್ಧಾರವಾಗಿದ್ದು, ಸಿನಿಮಾ ಪ್ರೇಕ್ಷಕರ ಪಾಲಿಗೆ ಒಳ್ಳೆಯ ಬೆಳವಣಿಗೆಯಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…