ಓದುಗರ ಪತ್ರ
ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿನ ಪ್ರವೇಶ ದರವನ್ನು ಗರಿಷ್ಟ ರೂ.೨೦೦ ಗೆ ನಿಗದಿ ಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ರಾಜ್ಯದ ಅದರಲ್ಲೂ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಮತ್ತು ಇತರ ವೈಭವೋಪೇತ ಚಲನಚಿತ್ರ ಮಂದಿರಗಳಲ್ಲಿ ಪ್ರವೇಶ ದರವನ್ನು ಮನಸೋ ಇಚ್ಛೆ ನಿಗದಿ ಅಮೇಲೆ ಹೊರೆಯನ್ನು ಹೊರಿಸಿದ್ದರು.
ಹೀಗಾಗಿ ಅನೇಕ ಚಿತ್ರಮಂದಿರಗಳು ಪ್ರೇಕ್ಷಕರಿಲ್ಲದೆ ಭಣಗುಡುತ್ತಿದ್ದವು. ಇದರಿಂದಾಗಿ ಸಣ್ಣ, ಮಧ್ಯಮ ಮಟ್ಟದ ಚಿತ್ರಗಳು ಕೂಡ ಪ್ರೇಕ್ಷಕರಿಲ್ಲದೇ ನರಳುವಂತಾಯಿತು. ಬೆಂಗಳೂರು, ಮೈಸೂರು ಮುಂತಾದ ಮಹಾನಗರಗಳಲ್ಲಿ ಚಿತ್ರಮಂದಿರಗಳು ಒಂದರ ಹಿಂದೆ ಒಂದು ಮುಚ್ಚಿ, ಈಗ ಕೇವಲ ಕೆಲವೇ ಚಿತ್ರಮಂದಿರಗಳು ಅಸ್ತಿತ್ವದಲ್ಲಿವೆ. ೬೦ರ ದಶಕದಲ್ಲಿ ಚಿತ್ರಮಂದಿರಗಳಲ್ಲಿನ ಪ್ರವೇಶ ದರ ಕೇವಲ ೬೫ ಪೈಸೆ ಇದ್ದಿತು. ಈಗ ಕೆಲವು ವೈಭವೋಪೇತ ಚಿತ್ರಮಂದಿರಗಳ ಪ್ರವೇಶ ದರ ೧೦೦೦ ರೂ. ಮೀರಿದೆ. ಚಲನಚಿತ್ರ ಮಂದಿರಗಳಲ್ಲಿ ದರವನ್ನು ನಿಗದಿ ಪಡಿಸುವ ಮೂಲಕ ರಾಜ್ಯ ಸರ್ಕಾರ ಚಿತ್ರಮಂದಿರಗಳ ಮೇಲೆ ಸ್ವಲ್ಪಮಟ್ಟಿನ ನಿಯಂತ್ರಣ ಸಾಧಿಸಿದಂತಾಗಿದೆ. ಇದು ಉತ್ತಮ ನಿರ್ಧಾರವಾಗಿದ್ದು, ಸಿನಿಮಾ ಪ್ರೇಕ್ಷಕರ ಪಾಲಿಗೆ ಒಳ್ಳೆಯ ಬೆಳವಣಿಗೆಯಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…