Andolana originals

ಓದುಗರ ಪತ್ರ:  ಸರ್ಕಾರದ ನಿರ್ಧಾರ ಸ್ವಾಗತಾರ್ಹ

ಮಲ್ಟಿಪ್ಲೆಕ್ಸ್ ಸೇರಿದಂತೆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿನ ಪ್ರವೇಶ ದರವನ್ನು ಗರಿಷ್ಟ ರೂ.೨೦೦ ಗೆ ನಿಗದಿ ಪಡಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ. ರಾಜ್ಯದ ಅದರಲ್ಲೂ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಮತ್ತು ಇತರ ವೈಭವೋಪೇತ ಚಲನಚಿತ್ರ ಮಂದಿರಗಳಲ್ಲಿ ಪ್ರವೇಶ ದರವನ್ನು ಮನಸೋ ಇಚ್ಛೆ ನಿಗದಿ ಅಮೇಲೆ ಹೊರೆಯನ್ನು ಹೊರಿಸಿದ್ದರು.

ಹೀಗಾಗಿ ಅನೇಕ ಚಿತ್ರಮಂದಿರಗಳು ಪ್ರೇಕ್ಷಕರಿಲ್ಲದೆ ಭಣಗುಡುತ್ತಿದ್ದವು. ಇದರಿಂದಾಗಿ ಸಣ್ಣ, ಮಧ್ಯಮ ಮಟ್ಟದ ಚಿತ್ರಗಳು ಕೂಡ ಪ್ರೇಕ್ಷಕರಿಲ್ಲದೇ ನರಳುವಂತಾಯಿತು. ಬೆಂಗಳೂರು, ಮೈಸೂರು ಮುಂತಾದ ಮಹಾನಗರಗಳಲ್ಲಿ ಚಿತ್ರಮಂದಿರಗಳು ಒಂದರ ಹಿಂದೆ ಒಂದು ಮುಚ್ಚಿ, ಈಗ ಕೇವಲ ಕೆಲವೇ ಚಿತ್ರಮಂದಿರಗಳು ಅಸ್ತಿತ್ವದಲ್ಲಿವೆ. ೬೦ರ ದಶಕದಲ್ಲಿ ಚಿತ್ರಮಂದಿರಗಳಲ್ಲಿನ ಪ್ರವೇಶ ದರ ಕೇವಲ ೬೫ ಪೈಸೆ ಇದ್ದಿತು. ಈಗ ಕೆಲವು ವೈಭವೋಪೇತ ಚಿತ್ರಮಂದಿರಗಳ ಪ್ರವೇಶ ದರ ೧೦೦೦ ರೂ. ಮೀರಿದೆ. ಚಲನಚಿತ್ರ ಮಂದಿರಗಳಲ್ಲಿ ದರವನ್ನು ನಿಗದಿ ಪಡಿಸುವ ಮೂಲಕ ರಾಜ್ಯ ಸರ್ಕಾರ ಚಿತ್ರಮಂದಿರಗಳ ಮೇಲೆ ಸ್ವಲ್ಪಮಟ್ಟಿನ ನಿಯಂತ್ರಣ ಸಾಧಿಸಿದಂತಾಗಿದೆ. ಇದು ಉತ್ತಮ ನಿರ್ಧಾರವಾಗಿದ್ದು, ಸಿನಿಮಾ ಪ್ರೇಕ್ಷಕರ ಪಾಲಿಗೆ ಒಳ್ಳೆಯ ಬೆಳವಣಿಗೆಯಾಗಿದೆ.

ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago