ಲಕ್ಷ್ಮೀಕಾಂತ್ ಕೊಮಾರಪ್ಪ
ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ
ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ
ಸೋಮವಾರಪೇಟೆ: ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ, ಕೃಷಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕೊಡಗಿನ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ (ಯಿಫಾ) ವತಿಯಿಂದ ಆ.೨೮ರಂದು ಹೆಬ್ಬಾಲೆ ಗ್ರಾಮದಲ್ಲಿ ಗದ್ದೆ ನಾಟಿ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ. ಹೆಬ್ಬಾಲೆ ಗ್ರಾಮದ ಕೃಷಿಕ ಸಂದೇಶ್ ಅವರ ಭತ್ತದ ಗದ್ದೆಯಲ್ಲಿ ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದ್ದು, ಪುರುಷರಿಗಾಗಿ ವಾಲಿಬಾಲ್ ಹಾಗೂ ಮಹಿಳೆಯರು ಮತ್ತು ಪುರುಷರಿಗಾಗಿ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಇದರೊಂದಿಗೆ ಸ್ಥಳೀಯರಿಗಾಗಿ ವಿವಿಧ ಗ್ರಾಮೀಣ ಕ್ರೀಡಾ ಸ್ಪರ್ಧೆಗಳನ್ನೂ ಆಯೋಜಿಸಲಾಗಿದೆ.
೨೦೧೮ರಿಂದ ಯಿಫಾ ವತಿಯಿಂದ ಗದ್ದೆ ನಾಟಿ ಹಾಗೂ ಕೆಸರುಗದ್ದೆ ಕ್ರೀಡಾಕೂಟವನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಯುವಕರು ಮಣ್ಣಿನೊಂದಿಗೆ ಬೆರೆಯಬೇಕು ಎಂಬ ಉದ್ದೇಶದಿಂದ ೨೦೧೮ರಿಂದ ಗದ್ದೆನಾಟಿ ಮತ್ತು ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದು, ಐಟಿ-ಬಿಟಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಯುವಕರು ಕೂಡ ೨೦೧೮ರಲ್ಲಿ ಗದ್ದೆಗಿಳಿದು ನಾಟಿ ಕಾರ್ಯದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದರು. ನಗರ ಜೀವನದಲ್ಲಿರುವ ಯುವಕರಿಗೂ ನಮ್ಮ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವುದು ಈ ಕಾರ್ಯಕ್ರಮದ ವಿಶೇಷತೆ. ಮಣ್ಣಿನ ಘಮ, ನಾಟಿಯ ಸಂಭ್ರಮ ಮತ್ತು ಗ್ರಾಮೀಣ ಕ್ರೀಡೆಗಳ ಉತ್ಸಾಹ ಒಂದೇ ವೇದಿಕೆಯಲ್ಲಿ ಮೇಳೈಸಲಿದ್ದು, ಹೆಬ್ಬಾಲೆಯಲ್ಲಿ ಆ.೨೮ರಂದು ನಡೆಯಲಿರುವ ಕಾರ್ಯಕ್ರಮ ಗಮನ ಸೆಳೆಯುವ ನಿರೀಕ್ಷೆ ಮೂಡಿಸಿದೆ.
ಮೊದಲ ಬಾರಿಗೆ ನಾಟಿ ಮಾಡಿದ್ದ ಸಂಸದ ಯದುವೀರ್ ಯಿಫಾ ವತಿಯಿಂದ ಕಳೆದ ಬಾರಿ ಹುದುಗೂರು ಗ್ರಾಮ ದಲ್ಲಿ ಆಯೋಜಿಸಿದ್ದ ನಾಟಿ ಕಾರ್ಯಕ್ರಮದಲ್ಲಿ ಮೈಸೂರು – ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಜೀವನದಲ್ಲೇ ಮೊದಲ ಬಾರಿಗೆ ರೈತರೊಂದಿಗೆ ಗದ್ದೆಗಿಳಿದು ನಾಟಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ರೈತರೊಂದಿಗೆ ಗದ್ದೆಯಲ್ಲಿ ಭತ್ತದ ಸಸಿಗಳನ್ನು ನೆಟ್ಟು, ಕೃಷಿಯ ಮಹತ್ವ ಹಾಗೂ ಯುವಜ ನರು ಕೃಷಿಯತ್ತ ಆಸಕ್ತಿ ಬೆಳೆಸಿಕೊಳ್ಳುವ ಅಗತ್ಯತೆ ಕುರಿತು ಜಾಗೃತಿ ಮೂಡಿಸಿದ್ದರು. ಈ ಬಾರಿಯ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಅವರು ಸೇರಿದಂತೆ ಶಾಸಕ ಡಾ.ಮಂಥರ್ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಉದ್ಯಮಿಗಳಾದ ಎಡಿಕೇರಿ ಪ್ರಸನ್ನ, ಹರಪಳ್ಳಿ ರವೀಂದ್ರ, ಕೊತ್ನಳ್ಳಿ ಅರುಣ್, ನಾಪಂಡ ಮುತ್ತಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಂಕಷ್ಟದ ಸಂದರ್ಭದಲ್ಲಿ ಜನರ ನೆರವಿಗೆ ನಿಂತ ಯಿಫಾ: ಯಿಫಾ ಜನಸೇವೆಯ ಉದ್ದೇಶದಿಂದ ಹುಟ್ಟಿಕೊಂಡ ಸಂಘಟನೆಯಾಗಿದ್ದು, ಇಂದು ಜನಸೇವೆ, ಸಾಮಾಜಿಕ ಜಾಗೃತಿ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿಕಾರ್ಯನಿರ್ವಹಿಸುತ್ತಿದೆ. ೨೦೧೮ರಲ್ಲಿ ಕೊಡಗಿನಲ್ಲಿ ಸಂಭವಿಸಿದ ಭೂಕುಸಿತದ ಸಂದರ್ಭದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಿದ್ದ ಯಿಫಾ, ೨೦೧೯ರಲ್ಲಿ ಉತ್ತರ ಕರ್ನಾಟಕ ಹಾಗೂ ಕೊಡಗು ಭಾಗದಲ್ಲಿ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿಯೂ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿತ್ತು. ೨೦೨೦-೨೧ರ ಕೋವಿಡ್ ಸಂಕಷ್ಟದ ಸಮಯದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿತು
” ಯುವ ಪೀಳಿಗೆ ಮಣ್ಣಿನೊಂದಿಗೆ ನಂಟು ಬೆಳೆಸಿಕೊಂಡು, ಕೃಷಿಯನ್ನು ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಬದುಕಿನ ಅವಿಭಾಜ್ಯ ಅಂಗವಾಗಿ ಸ್ವೀಕರಿಸಬೇಕು. ಈ ನಿಟ್ಟಿನಲ್ಲಿ ಯುವಜನರಲ್ಲಿ ಆಸಕ್ತಿ ಮೂಡಿಸುವ ಉದ್ದೇಶದಿಂದಲೇ ೨೦೧೮ರಿಂದ ಗದ್ದೆನಾಟಿ ಹಾಗೂ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದೇವೆ.”
-ಶ್ರೀನಿಧಿ ಲಿಂಗಪ್ಪ, ಅಧ್ಯಕ್ಷ, ಯಿಫಾ ಕೊಡಗು
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…