Andolana originals

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್

ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ

ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಜತೆಗೆ ಕೊಳೆತ ತರಕಾರಿಗಳನ್ನು ಸಮಪರ್ಕವಾಗಿ ವಿಲೇವಾರಿ ಮಾಡದ ಕಾರಣ ಗಬ್ಬುನಾರುತ್ತಿದ್ದು ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿ ಭಾನುವಾರ ಇಲ್ಲಿ ಸಂತೆ ಕಟ್ಟಲಾಗುತ್ತದೆ.

ಈ ಹಿಂದೆ ಪಟ್ಟಣದ ದಿವಾನ್‌ಪೂರ್ಣಯ್ಯ ಬಂಗಲೆಯ ಮುಂಭಾಗದಲ್ಲಿ ಸಂತೆ ನಡೆಯುತ್ತಿತ್ತು. ಈ ಸ್ಥಳ ಇಕ್ಕಟ್ಟಿನಿಂದ ಕೂಡಿತ್ತು. ಜೊತೆಗೆ ರಸ್ತೆಯ ಬದಿಗಳಲ್ಲಿ ತರಕಾರಿ ವ್ಯಾಪಾರಿಗಳು ಮಾರಾಟ ಮಾಡುತ್ತಿದ್ದರು. ಈ ದೃಷ್ಟಿಯಲ್ಲಿ ಪಟ್ಟಣದ ಅಗ್ರಹಾರ ಬಡಾವಣೆಯ ಬಳಿ ಹೊಸ ಸಂತೆ ಮೈದಾನ ನಿರ್ಮಾಣ ಮಾಡಲಾಯಿತು.

ಮುಚ್ಚಿರುವ ಅಂಗಡಿ ಮಳಿಗೆಗಳು: ೨೦೦ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರತಿ ಭಾನುವಾರ ಪಟ್ಟಣದ ಸಂತೆ ಮೈದಾನದಲ್ಲಿ ತರಕಾರಿಗಳು, ಹಣ್ಣು, ಸೊಪ್ಪು, ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಅವರಿಗೂ ಉಪಯುಕ್ತವಾಗುವ ನಿಟ್ಟಿನಲ್ಲಿ ೧೨ಕ್ಕೂ ಅಂಗಡಿಗಳನ್ನು ನಿರ್ಮಿಸಿ ಅವುಗಳನ್ನು ವ್ಯಾಪಾರಿಗಳಿಗೆ ಬಾಡಿಗೆಗೆ ನೀಡದೆ ಖಾಲಿ ಬಿಡಲಾಗಿದೆ. ಹಾಗಾಗಿ ಇವು ನಿರುಪಯುಕ್ತವಾಗಿವೆ. ಇದಕ್ಕೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ ವೇ ಕಾರಣ ಎಂಬುದು ಸಾರ್ವಜನಿಕರ ದೂರು.

ಮೂಲಭೂತ ಸಮಸ್ಯೆಗಳು: ಈ ಮೈದಾನದಲ್ಲಿ ಕುಡಿಯುವ ನೀರು, ಶೌಚಾಲಯ ಸಮಸ್ಯೆಗಳಿದ್ದು, ಮಾರುಕಟ್ಟೆಯ ಸುತ್ತಮುತ್ತ ಅನೈರ್ಮಲ್ಯದಿಂದ ಕೂಡಿದೆ. ಇಲ್ಲಿನ ವ್ಯಾಪಾರಿಗಳು ಪಟ್ಟಣ ಪಂಚಾಯಿತಿಗೆ ಪ್ರತಿ ವಾರವೂ ಸುಂಕ ಕಟ್ಟುತ್ತಾರೆ. ತೆರಿಗೆ ಹಣದಿಂದಾದರೂ ಅಲ್ಲಿನ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆ ಪಟ್ಟಣ ಪಂಚಾಯಿತಿಗೆ ಇದ್ದಂತಿಲ್ಲ. ತರಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದಿಲ್ಲ.

ಪಟ್ಟಣದಲ್ಲಿ ಪ್ರತಿ ಭಾನುವಾರ ನಡೆಯುವ ಸಂತೆಯ ದಿನ ವ್ಯಾಪಾರ ಮಾಡಿ ಹೋಗುವ ಸಮಯದಲ್ಲಿ ಕೊಳೆತ ತರಕಾರಿಗಳನ್ನು ಪಕ್ಕದಲ್ಲಿ ರಾಶಿ ಮಾಡಿ ಹಾಗೆಯೇ ಬಿಟ್ಟು ವ್ಯಾಪಾರಿಗಳು ಹೋಗುತ್ತಾರೆ.

ಪಟ್ಟಣ ಪಂಚಾಯಿತಿ ಕಸ ವಿಲೇವಾರಿ ಸಿಬ್ಬಂದಿ ಮರು ದಿನ ಕಸವನ್ನು ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಮೈದಾನದಲ್ಲಿ ತರಕಾರಿಗಳು ಕೊಳೆತು ಗಬ್ಬು ನಾರುತ್ತಾ ವಾಸನೆ ಉಂಟಾಗಿ ಅಕ್ಕಪಕ್ಕದ ನಿವಾಸಿಗಳಿಗೆ ರೋಗ ರುಜಿನಗಳ ತಾಣವಾಗುತ್ತಿದೆ. ಈ ಬಗ್ಗೆ ಪಟ್ಟಣದ ಪಂಚಾಯಿತಿ ಅಧಿಕಾರಿಗಳು ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

” ಯಳಂದೂರು ಪಟ್ಟಣದಲ್ಲಿರುವ ಸಂತೆ ಮೈದಾನದಲ್ಲಿರುವ ಅಂಗಡಿ ಮಳಿಗೆಗಳನ್ನು ೪ ಬಾರಿ ಟೆಂಡರ್ ಕರೆದಿದ್ದರೂ ಯಾರೂ ಖರೀದಿಗೆ ಆಗಮಿಸಿಲ್ಲ. ಜತೆಗೆ ಶೌಚಗೃಹವನ್ನು ನಿರ್ಮಿಸಿ ಇಲ್ಲಿ ವ್ಯಾಪಾರ ಮಾಡುವ ವರ್ತಕರು ಹಾಗೂ ಗ್ರಾಹಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ತೊಂಬೆ ಮೂಲಕ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೂ ಕೂಡ ಕೆಲವು ಜನರು ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡುತ್ತಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಗಮನಹರಿಸಿ ಕಸವನ್ನು ವಿಲೇವಾರಿ ಮಾಡಿ, ಸಂತೆ ಮೈದಾನದ ಮೂಲಭೂತ ಸೌಲಭ್ಯಕ್ಕಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು.”

– ಎಂ.ಪಿ. ಮಹೇಶಕುಮಾರ್, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ

” ಪಟ್ಟಣದ ಅಗ್ರಹಾರ ಬಡಾವಣೆಯಲ್ಲಿ ನಿರ್ಮಿಸಿರುವ ಮಾರುಕಟ್ಟೆಯಲ್ಲಿ ಕುಡಿಯುವ ನೀರು, ಶೌಚಗೃಹ, ಹಾಗೂ ಅಂಗಡಿಗಳನ್ನು ಬಾಗಿಲು ತೆರೆಯದೆ ಬಿಟ್ಟಿದ್ದು, ಇದರಿಂದ ಅನೇಕ ಸಮಸ್ಯೆಗಳ ನಡುವೆ ವ್ಯಾಪಾರವನ್ನು ಮಾಡಿಕೊಂಡು ಹೋಗಬೇಕಾಗಿದೆ. ಶೀಘ್ರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಸೌಲಭ್ಯವನ್ನು ಕಲ್ಪಿಸಬೇಕಾಗಿದೆ.”

-ಮಹೇಶ್, ಪಟ್ಟಣದ ನಿವಾಸಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

58 mins ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

1 hour ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

1 hour ago

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…

1 hour ago

ಜಯಪುರ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆ

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…

1 hour ago

ಮನಸೂರೆಗೊಳ್ಳುತ್ತಿರುವ ಸುತ್ತೂರು ಜಾತ್ರೆಯಲ್ಲಿನ ಕಲಾವೈಭವ

ಎಸ್.ಎಸ್.ಭಟ್ ನಂಜನಗೂಡು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿನ ಕಲಾ ವೈಭವ ಕಲಾಸಕ್ತರೂ ಸೇರಿದಂತೆ ಎಲ್ಲರ ಮನಸೂರೆಗೊಂಡಿತು. ಅನೇಕ ವರ್ಷಗಳಿಂದ…

1 hour ago