Andolana originals

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್

ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ

ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಜತೆಗೆ ಕೊಳೆತ ತರಕಾರಿಗಳನ್ನು ಸಮಪರ್ಕವಾಗಿ ವಿಲೇವಾರಿ ಮಾಡದ ಕಾರಣ ಗಬ್ಬುನಾರುತ್ತಿದ್ದು ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿ ಭಾನುವಾರ ಇಲ್ಲಿ ಸಂತೆ ಕಟ್ಟಲಾಗುತ್ತದೆ.

ಈ ಹಿಂದೆ ಪಟ್ಟಣದ ದಿವಾನ್‌ಪೂರ್ಣಯ್ಯ ಬಂಗಲೆಯ ಮುಂಭಾಗದಲ್ಲಿ ಸಂತೆ ನಡೆಯುತ್ತಿತ್ತು. ಈ ಸ್ಥಳ ಇಕ್ಕಟ್ಟಿನಿಂದ ಕೂಡಿತ್ತು. ಜೊತೆಗೆ ರಸ್ತೆಯ ಬದಿಗಳಲ್ಲಿ ತರಕಾರಿ ವ್ಯಾಪಾರಿಗಳು ಮಾರಾಟ ಮಾಡುತ್ತಿದ್ದರು. ಈ ದೃಷ್ಟಿಯಲ್ಲಿ ಪಟ್ಟಣದ ಅಗ್ರಹಾರ ಬಡಾವಣೆಯ ಬಳಿ ಹೊಸ ಸಂತೆ ಮೈದಾನ ನಿರ್ಮಾಣ ಮಾಡಲಾಯಿತು.

ಮುಚ್ಚಿರುವ ಅಂಗಡಿ ಮಳಿಗೆಗಳು: ೨೦೦ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರತಿ ಭಾನುವಾರ ಪಟ್ಟಣದ ಸಂತೆ ಮೈದಾನದಲ್ಲಿ ತರಕಾರಿಗಳು, ಹಣ್ಣು, ಸೊಪ್ಪು, ಇತರೆ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಅವರಿಗೂ ಉಪಯುಕ್ತವಾಗುವ ನಿಟ್ಟಿನಲ್ಲಿ ೧೨ಕ್ಕೂ ಅಂಗಡಿಗಳನ್ನು ನಿರ್ಮಿಸಿ ಅವುಗಳನ್ನು ವ್ಯಾಪಾರಿಗಳಿಗೆ ಬಾಡಿಗೆಗೆ ನೀಡದೆ ಖಾಲಿ ಬಿಡಲಾಗಿದೆ. ಹಾಗಾಗಿ ಇವು ನಿರುಪಯುಕ್ತವಾಗಿವೆ. ಇದಕ್ಕೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ ವೇ ಕಾರಣ ಎಂಬುದು ಸಾರ್ವಜನಿಕರ ದೂರು.

ಮೂಲಭೂತ ಸಮಸ್ಯೆಗಳು: ಈ ಮೈದಾನದಲ್ಲಿ ಕುಡಿಯುವ ನೀರು, ಶೌಚಾಲಯ ಸಮಸ್ಯೆಗಳಿದ್ದು, ಮಾರುಕಟ್ಟೆಯ ಸುತ್ತಮುತ್ತ ಅನೈರ್ಮಲ್ಯದಿಂದ ಕೂಡಿದೆ. ಇಲ್ಲಿನ ವ್ಯಾಪಾರಿಗಳು ಪಟ್ಟಣ ಪಂಚಾಯಿತಿಗೆ ಪ್ರತಿ ವಾರವೂ ಸುಂಕ ಕಟ್ಟುತ್ತಾರೆ. ತೆರಿಗೆ ಹಣದಿಂದಾದರೂ ಅಲ್ಲಿನ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆ ಪಟ್ಟಣ ಪಂಚಾಯಿತಿಗೆ ಇದ್ದಂತಿಲ್ಲ. ತರಕಾರಿ ತ್ಯಾಜ್ಯವನ್ನು ವಿಲೇವಾರಿ ಮಾಡುವುದಿಲ್ಲ.

ಪಟ್ಟಣದಲ್ಲಿ ಪ್ರತಿ ಭಾನುವಾರ ನಡೆಯುವ ಸಂತೆಯ ದಿನ ವ್ಯಾಪಾರ ಮಾಡಿ ಹೋಗುವ ಸಮಯದಲ್ಲಿ ಕೊಳೆತ ತರಕಾರಿಗಳನ್ನು ಪಕ್ಕದಲ್ಲಿ ರಾಶಿ ಮಾಡಿ ಹಾಗೆಯೇ ಬಿಟ್ಟು ವ್ಯಾಪಾರಿಗಳು ಹೋಗುತ್ತಾರೆ.

ಪಟ್ಟಣ ಪಂಚಾಯಿತಿ ಕಸ ವಿಲೇವಾರಿ ಸಿಬ್ಬಂದಿ ಮರು ದಿನ ಕಸವನ್ನು ವಿಲೇವಾರಿ ಮಾಡುತ್ತಿಲ್ಲ. ಇದರಿಂದ ಮೈದಾನದಲ್ಲಿ ತರಕಾರಿಗಳು ಕೊಳೆತು ಗಬ್ಬು ನಾರುತ್ತಾ ವಾಸನೆ ಉಂಟಾಗಿ ಅಕ್ಕಪಕ್ಕದ ನಿವಾಸಿಗಳಿಗೆ ರೋಗ ರುಜಿನಗಳ ತಾಣವಾಗುತ್ತಿದೆ. ಈ ಬಗ್ಗೆ ಪಟ್ಟಣದ ಪಂಚಾಯಿತಿ ಅಧಿಕಾರಿಗಳು ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

” ಯಳಂದೂರು ಪಟ್ಟಣದಲ್ಲಿರುವ ಸಂತೆ ಮೈದಾನದಲ್ಲಿರುವ ಅಂಗಡಿ ಮಳಿಗೆಗಳನ್ನು ೪ ಬಾರಿ ಟೆಂಡರ್ ಕರೆದಿದ್ದರೂ ಯಾರೂ ಖರೀದಿಗೆ ಆಗಮಿಸಿಲ್ಲ. ಜತೆಗೆ ಶೌಚಗೃಹವನ್ನು ನಿರ್ಮಿಸಿ ಇಲ್ಲಿ ವ್ಯಾಪಾರ ಮಾಡುವ ವರ್ತಕರು ಹಾಗೂ ಗ್ರಾಹಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ತೊಂಬೆ ಮೂಲಕ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೂ ಕೂಡ ಕೆಲವು ಜನರು ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡುತ್ತಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಗಮನಹರಿಸಿ ಕಸವನ್ನು ವಿಲೇವಾರಿ ಮಾಡಿ, ಸಂತೆ ಮೈದಾನದ ಮೂಲಭೂತ ಸೌಲಭ್ಯಕ್ಕಾಗಿ ಹೆಚ್ಚಿನ ಒತ್ತನ್ನು ನೀಡಲಾಗುವುದು.”

– ಎಂ.ಪಿ. ಮಹೇಶಕುಮಾರ್, ಮುಖ್ಯಾಧಿಕಾರಿ, ಪಟ್ಟಣ ಪಂಚಾಯಿತಿ

” ಪಟ್ಟಣದ ಅಗ್ರಹಾರ ಬಡಾವಣೆಯಲ್ಲಿ ನಿರ್ಮಿಸಿರುವ ಮಾರುಕಟ್ಟೆಯಲ್ಲಿ ಕುಡಿಯುವ ನೀರು, ಶೌಚಗೃಹ, ಹಾಗೂ ಅಂಗಡಿಗಳನ್ನು ಬಾಗಿಲು ತೆರೆಯದೆ ಬಿಟ್ಟಿದ್ದು, ಇದರಿಂದ ಅನೇಕ ಸಮಸ್ಯೆಗಳ ನಡುವೆ ವ್ಯಾಪಾರವನ್ನು ಮಾಡಿಕೊಂಡು ಹೋಗಬೇಕಾಗಿದೆ. ಶೀಘ್ರದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಸೌಲಭ್ಯವನ್ನು ಕಲ್ಪಿಸಬೇಕಾಗಿದೆ.”

-ಮಹೇಶ್, ಪಟ್ಟಣದ ನಿವಾಸಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

3 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

6 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

20 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

21 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

22 hours ago