Andolana originals

ದಸರಾದಲ್ಲಿ ಡಿಜೆ ಬಳಕೆ ವಿಚಾರ ಮತ್ತೆ ಮುನ್ನೆಲೆಗೆ

ನವೀನ್ ಡಿಸೋಜ

ಡಿಜೆ, ಡಿಜಿಟಲ್ ಲೇಸರ್ ಲೈಟ್ ಬಳಕೆ ನಿರ್ಬಂಧಿಸುವಂತೆ ನೋಟಿಸ್; ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಒತ್ತಾಯ

ಮಡಿಕೇರಿ: ದಸರಾ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಹೈ ಕೋರ್ಟ್ ವಕೀಲ ಅಮೃತೇಶ್ ಅವರು ಮತ್ತೊಮ್ಮೆ ಜಿಲ್ಲಾಡಳಿತ ಹಾಗೂ ದಸರಾ ದಶಮಂಟಪ ಸಮಿತಿಗಳಿಗೆ ನೋಟಿಸ್ ನೀಡಿದ್ದು, ಈ ಬಾರಿ ಜನೋತ್ಸವದಲ್ಲಿ ಡಿಜೆ ಮತ್ತು ಡಿಜಿಟಲ್ ಲೇಸರ್ ಬಳಸದಂತೆ ಎಚ್ಚರಿಸಿದ್ದಾರೆ.

ಮಡಿಕೇರಿ ದಸರಾ ಜನೋತ್ಸವದಲ್ಲಿ ಡಿಜೆ ಬಳಕೆಗೆ ಸಂಬಂಧಿಸಿದಂತೆ ೨೦೨೩ರಿಂದಲೇ ಚರ್ಚೆಯಾಗುತ್ತಿದೆ. ಆ ವರ್ಷ ಮೊದಲ ಬಾರಿಗೆ ಹೈಕೋರ್ಟ್ ಮೊರೆ ಹೋಗಿದ್ದ ವಕೀಲ ಅಮೃತೇಶ್ ಡಿಜೆ ನಿರ್ಬಂಽಸಬೇಕೆಂದು ಕೋರಿದ್ದರು. ಅದರಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ನ್ಯಾಯಾಲಯ ನಿಯಮ ಉಲ್ಲಂಸದಂತೆ ಎಚ್ಚರವಹಿಸಲು ಮತ್ತು ಉಲ್ಲಂಸಿದರೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿತ್ತು. ಆನಂತರ ೨ ವರ್ಷಗಳಿಂದ ದಸರಾ ಶೋಭಾಯಾತ್ರೆಯಲ್ಲಿ ಡಿಜೆ ಬಳಸುತ್ತಿರುವ ಮಂಟಪಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದೀಗ ಈ ಬಾರಿಯೂ ಅಮೃತೇಶ್ ನೋಟಿಸ್ ನೀಡಿದ್ದಾರೆ.

ಉಚ್ಚನ್ಯಾಯಾಲಯದ ವಕೀಲ ಎನ್.ಪಿ.ಅಮೃತೇಶ್ ಮತ್ತು ದೀಕ್ಷಾ ಎನ್.ಅಮೃತೇಶ್ ಅವರು ಮಡಿಕೇರಿ ದಸರಾದಲ್ಲಿ ಡಿಜೆ ಮತ್ತು ಡಿಜಿಟಲ್ ಲೇಸರ್ ಲೈಟ್ ಬಳಕೆಯನ್ನು ನಿರ್ಬಂಽಸಬೇಕೆಂದು ಕೊಡಗು ಜಿಲ್ಲಾಧಿಕಾರಿ, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಾಲಿನ್ಯ ನಿಯಂತ್ರಣಾಧಿಕಾರಿ, ಮಡಿಕೇರಿ ಟೌನ್ ಪೊಲೀಸ್ ಉಪ ನಿರೀಕ್ಷಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಮತ್ತು ಕಾರ್ಯದರ್ಶಿಗೆ ನೋಟಿಸ್ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಕಾನೂನು ಪಾಲನೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಗಣೇಶೋತ್ಸವ ಮೆರವಣಿಗೆಗಳಲ್ಲಿ ಡಿಜೆ ಬಳಕೆಗೆ ಬಹುತೇಕ ಬ್ರೇಕ್ ಬಿದ್ದಿದೆ. ಹಲವು ಕಡೆಗಳಲ್ಲಿ ಡಿಜೆ ಬದಲಿಗೆ ಸಾಂಪ್ರದಾಯಿಕ ವಾದ್ಯಗಳಾದ ಚಂಡೆ, ಕೇರಳದ ನಾಸಿಕ್ ಡೋಲು, ಕೇರಳ ಬ್ಯಾಂಡ್ ಸೆಟ್, ಡೊಳ್ಳು ಕುಣಿತ, ತಮಟೆ ಮುಂತಾದವುಗಳಿಗೆ ಆದ್ಯತೆ ನೀಡಲಾಗಿದೆ. ಇನ್ನೂ ಕೆಲವೆಡೆ ನಿಯಮ ಉಲ್ಲಂಘನೆಯಾಗಿದ್ದು, ಪ್ರಕರಣ ದಾಖಲಾಗಿದೆ. ಕೊಡಗಿನಲ್ಲಿಯೇ ವಿರಾಜಪೇಟೆಯಲ್ಲಿ ೧೬ ಮತ್ತು ಕುಶಾಲನಗರದಲ್ಲಿ ೫ ಎಫ್‌ಐಆರ್ ದಾಖಲಾಗಿವೆ. ಹೀಗಾಗಿ ದಸರಾ ಉತ್ಸವದಲ್ಲಿಯೂ ಇಂತಹದ್ದೇ ಕ್ರಮವಾಗುವ ಸಾಧ್ಯತೆಯಿದ್ದು, ಸಾಂಪ್ರದಾಯಿಕ ವಾದ್ಯಗಳಿಗೆ ಆದ್ಯತೆ ನೀಡಬೇಕೆಂಬುದು ದೂರುದಾರ ವಕೀಲರ ಆಗ್ರಹವೂ ಆಗಿದೆ.

ಡಿಜೆ ಬಳಕೆಯಿಂದ ಭಾರೀ ಪ್ರಮಾಣದಲ್ಲಿ ಶಬ್ದಮಾಲಿನ್ಯವಾಗುತ್ತದೆ. ಈ ಹಿಂದೆ ಎಚ್ಚರಿಸಿದ್ದರೂ ಡಿಜೆ ಬಳಕೆ ಮಾಡಲಾಗಿದೆ. ಈ ಬಾರಿ ಹೀಗಾದರೆ ಡಿಜೆ ಸೌಂಡ್ ಸಿಸ್ಟಮ್ ಸಹಿತ ಅದಕ್ಕೆ ಬಳಸುವ ವಾಹನವನ್ನು ವಶಪಡಿಸಿಕೊಂಡು ಕೋರ್ಟ್‌ಗೆ ಹಾಜರುಪಡಿಸಬೇಕೆಂದು ಕೇಳಿಕೊಳ್ಳುತ್ತೇವೆ. ಪೊಲೀಸ್ ಇಲಾಖೆಯಿಂದಷ್ಟೇ ಅಲ್ಲ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ವಕೀಲ ಅಮೃತೇಶ್ ಹೇಳಿದ್ದಾರೆ.

ಆರ್‌ಸಿಬಿ ವಿಜಯೋತ್ಸವದ ವೇಳೆಯ ಕಾಲ್ತುಳಿತ ಘಟನೆಯ ಬಳಿಕ ಸರ್ಕಾರ ಜನದಟ್ಟಣೆ ನಿರ್ವಹಣೆ ಸಂಬಂಧ ನೂತನ ಎಸ್‌ಒಪಿ ಜಾರಿ ಮಾಡಿದ್ದು, ಅದನ್ನು ಪಾಲಿಸಬೇಕಿದೆ. ಡಿಜೆ ಬಳಕೆಯಿಂದ ಪರಿಸರ ಮಾತ್ರವಲ್ಲದೇ ಯುವ ಜನತೆಯ ಮೇಲೆ ದುಷ್ಪರಿಣಾಮವನ್ನುಂಟು ಮಾಡುತ್ತಿದೆ. ಹೀಗಾಗಿ ಕಡ್ಡಾಯವಾಗಿ ನಿಷೇಧಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಇಲಾಖೆಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದರು.

” ದಶಮಂಟಪಗಳಲ್ಲಿ ಕಥೆ ಹೇಳಲು ಬೇಕಾದ ದ್ವನಿವರ್ಧಕಗಳನ್ನು ನಿಯಮಾನುಸಾರ ಬಳಸಲಿ, ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಅಬ್ಬರದ ಡಿಜೆ ಬಳಸುವ ಮೂಲಕ ಇತರರಿಗೆ ತೊಂದರೆ ನೀಡುವ ಬದಲು ಸಾಂಪ್ರದಾಯಿಕ ವಾದ್ಯಗಳನ್ನು ಬಳಸಬಹುದಲ್ಲವೆ? ಅವರಿಗೂ ಅದರಿಂದ ಅನುಕೂಲವಾದಂತಾಗುತ್ತದೆ. ಡಿಜೆ ವಿಚಾರದಲ್ಲಿ ನಿಯಮ ಸ್ಪಷ್ಟವಾಗಿದ್ದು, ಡಿಜೆ ಬಳಕೆಗೆ ಅನುಮತಿ ಕೋರಿ ಸೌಂಡ್ ಆಪರೇಟರ‍್ಸ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನೂ  ನ್ಯಾಯಾಲಯ ರದ್ದುಗೊಳಿಸಿದೆ” .

-ಅಮೃತೇಶ್ ಎನ್.ಪಿ., ಹೈಕೋರ್ಟ್ ವಕೀಲ

” ಈ ಬಾರಿ ದಸರಾ ಉತ್ಸವದಲ್ಲಿ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲಿದ್ದೇವೆ. ಈಸಂಬಂಧ ಸದ್ಯದಲ್ಲಿಯೇ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು.”

-ಬಿ.ಎಂ.ರಾಜೇಶ್, ಗೌರವಾಧ್ಯಕ್ಷ , ದಶಮಂಟಪ ಸಮಿತಿ

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

5 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

7 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

8 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

11 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

13 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

14 hours ago