ಮಂಜು ಕೋಟೆ
ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ
ಎಚ್.ಡಿ.ಕೋಟೆ: ಗಿರಿಜನ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರ ಸ್ಥಾನವಾದ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪದಿಂದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮುಜುಗರ ಪಡುವಂತಾಗಿದೆ.
ತಾಲ್ಲೂಕಿನ ಗಡಿ ಭಾಗದ ಜಕ್ಕಹಳ್ಳಿ ಗ್ರಾಮದಲ್ಲಿರುವ ಗಿರಿಜನ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರು ಬಹಿರಂಗವಾಗಿ ನಡೆಸುತ್ತಿರುವ ಸರಸ ಸಲ್ಲಾಪದಿಂದ ವಿದ್ಯಾರ್ಥಿಗಳು ಮಾತ್ರವಲ್ಲದೆ, ಸಂಬಂಧಪಟ್ಟ ಇಲಾಖೆಯವರೂ ತಲೆ ತಗ್ಗಿಸುವಂತಾಗಿದೆ.
ಈ ಭಾಗದಲ್ಲಿ ಗಿರಿಜನ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಆಶ್ರಮ ಶಾಲೆಗಳನ್ನು ತೆರೆದು ಪ್ರತಿ ವರ್ಷ ಲಕ್ಷಾಂತರ ರೂ. ಅನುದಾನವನ್ನು ಪರಿಶಿಷ್ಟ ಪಂಗಡ ಇಲಾಖೆಗೆ ನೀಡುತ್ತಿದೆ.ಗಿರಿಜನ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರುವ ಸಲುವಾಗಿ ಇಂಥ ಆಶ್ರಮ ಶಾಲೆಗಳನ್ನು ಅವಲಂಬಿಸಿಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ.
ಅನೇಕ ಮೂಲಸೌಕರ್ಯಗಳ ಕೊರತೆ ಮತ್ತು ಆಹಾರ ಪದಾರ್ಥದ ಸಮಸ್ಯೆಗಳು ಎದುರಾದರೂ ಅವುಗಳನ್ನು ಲೆಕ್ಕಿಸದೆ ಆಶ್ರಮ ಶಾಲೆಗಳಲ್ಲಿ ವಾಸ್ತವ್ಯ ಮಾಡಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ಹಾಡಹಗಲೇ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇರುವ ಸಂದರ್ಭದಲ್ಲಿ ಇಲ್ಲಿನ ಅಡುಗೆ ಸಿಬ್ಬಂದಿ ಸಿನಿಮಾ ಶೈಲಿಯಲ್ಲಿ ಸರಸ ಸಲ್ಲಾಪ ನಡೆಸುತ್ತಿದ್ದಾರೆ. ಇವರ ಚೆಲ್ಲಾಟ ನೋಡಿದ ಅನೇಕ ವಿದ್ಯಾರ್ಥಿನಿಯರು ತಲೆ ತಗ್ಗಿಸಿಕೊಂಡು ಹೋಗು ವಂತಾಗಿದೆ.
ಆದರೆ, ಶಾಲೆಯ ಜವಾಬ್ದಾರಿ ಹೊತ್ತಿರುವ ವಾರ್ಡನ್ ಮತ್ತು ಮುಖ್ಯ ಶಿಕ್ಷಕರು ಆಶ್ರಮ ಶಾಲೆಗಳಲ್ಲಿ ವಾಸ್ತವ್ಯ ಹೂಡದೇ ಮತ್ತು ಸಮರ್ಪಕವಾಗಿ ಕೆಲಸ ನಿರ್ವಹಿಸದೇ ಇರುವುದರಿಂದ ಇಂತಹ ಪ್ರಕರಣಗಳು ನಡೆಯುತ್ತಿವೆ ಎನ್ನುವುದು ಸಾರ್ವಜ ನಿಕರ ಆರೋಪ.
ಗಡಿ ಭಾಗದ ಆದಿವಾಸಿ ಮತ್ತು ಬಡಜನರು, ರೈತರ ಮಕ್ಕಳು ಶಿಕ್ಷಣ ಪಡೆಯುವುದೇ ಬಹಳಷ್ಟು ಕಷ್ಟ. ಇಂತಹ ಸಂದರ್ಭದಲ್ಲಿ ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ಈ ರೀತಿಯ ಪ್ರಕರಣಗಳಿಂದ ಪೋಷಕರು ತಮ್ಮ ಮಕ್ಕಳನ್ನು ಆಶ್ರಮ ಶಾಲಾ ಕಾಲೇಜುಗಳಿಗೆ ಕಳಿಸಲು ಹಿಂದೇಟು ಹಾಕುವಂತಾಗಿದೆ. ತಾಲ್ಲೂಕಿನ ಪ್ರತಿಯೊಂದು ಆಶ್ರಮ ಶಾಲೆಯಲ್ಲೂ ಒಂದೊಂದು ತರಹದ ಸಮಸ್ಯೆಗಳು ಎದುರಾಗುತ್ತಿರುವುದರಿಂದ ಸಂಬಂಧಪಟ್ಟ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಽಕಾರಿಗಳು ಇತ್ತ ಗಮನಹರಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒತ್ತು ಕೊಡುವ ಜೊತೆಗೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕೆಲಸ ನಿರ್ವಹಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ.
” ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ಸಿಬ್ಬಂದಿಯ ಸರಸ ಸಲ್ಲಾಪ ಮತ್ತು ಮೂಲಸೌಕರ್ಯಗಳ ಕೊರತೆ ಬಗ್ಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಆತಂಕ ಎದುರಾಗಿದೆ.”
-ಮನೋಜ್, ಪೋಷಕರು
” ಆಶ್ರಮ ಶಾಲೆಯಲ್ಲಿ ಯಾರೇ ಸರಸ ಸಲ್ಲಾಪ ನಡೆಸಿದರೂ ಅದು ತಪ್ಪು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲು ಶಕ್ತಿಮೀರಿ ಕೆಲಸ ಮಾಡುತ್ತಿದ್ದೇವೆ.”
-ಮಲ್ಲೇಶ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…