Andolana originals

ಕಬಳಿಸಲು ಯತ್ನಿಸಿದ ಜಮೀನು ಸರ್ಕಾರದ ವಶಕ್ಕೆ

ಎಚ್.ಡಿ.ಕೋಟೆ ತಹಸಿಲ್ದಾರ್‌ರಿಂದ ಕಾರ್ಯಾಚರಣೆ; ೪ ಎಕರೆ ಸುಪರ್ದಿಗೆ

ನಕಲಿ ದಾಖಲಾತಿ ಸೃಷ್ಟಿಸಿ ಅಮಾನತ್ತಾಗಿದ್ದ ಕಂದಾಯ ಇಲಾಖೆ ಅಧಿಕಾರಿಗಳು

ಮಂಜು ಕೋಟೆ

ಎಚ್.ಡಿ.ಕೋಟೆ: ಕಂದಾಯ ಇಲಾಖೆಯ ಅಧಿಕಾರಿಗಳು ಭೂ ಹಗರಣ ನಡೆಸಿ ನಕಲಿ ದಾಖಲಾತಿ ಸೃಷ್ಟಿಸಿ ತಮ್ಮ ಸಂಬಂಧಿಕರ ಹೆಸರಿನಲ್ಲಿ ಕಬಳಿಸಲು ಮುಂದಾಗಿದ್ದ ೪ ಎಕರೆ ೨೦ ಗುಂಟೆ ಜಮೀನನ್ನು ಮತ್ತೆ ಸರ್ಕಾರದ ವಶಕ್ಕೆ ಪಡೆದು ಕೊಳ್ಳುವಲ್ಲಿ ತಹಸಿಲ್ದಾರ್ ಮುಂದಾಗಿದ್ದಾರೆ.

ತಾಲ್ಲೂಕಿನ ಪಡುಕೋಟೆ ಗ್ರಾಮದ ಸರ್ವೆ ನಂ.೫೩ರಲ್ಲಿ ೩ ಎಕರೆ ೨೦ ಗುಂಟೆ ಮತ್ತು ೧ ಎಕರೆ ಜಮೀನನ್ನು ೨ ವರ್ಷಗಳ ಹಿಂದೆ ತಾಲ್ಲೂಕು ಕಚೇರಿಯ ಕಂದಾಯ ಇಲಾಖೆಯಲ್ಲಿದ್ದ ಗ್ರಾಮ ಲೆಕ್ಕಿಗ ಅನಿಲ್ ಕುಮಾರ್ (ಈಗ ನಂ.ಗೂಡಿನ ಹೆಡಿಯಾಲದಲ್ಲಿ ಸೇವೆ) ಮತ್ತು ಎಸ್‌ಡಿಎ ಹರೀಶ್ (ಈಗ ನರಸೀಪುರದ ತಾಲ್ಲೂಕು ಕಚೇರಿಯಲ್ಲಿ ಎಸ್‌ಡಿಎ ಆಗಿ ಸೇವೆ) ಅವರು ತಮ್ಮ ಸಂಬಂಧಿಕರಾದ ಸುಜಾತ ಮತ್ತು ಭವ್ಯ ಎಂಬವರಿಗೆ ೩ ಎಕರೆ ೨೦ ಗುಂಟೆ ಮತ್ತು ೧ ಎಕರೆ ಜಮೀನು ಸಾಗುವಳಿ ಪಡೆಯಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ.

ಈ ಹಿಂದೆ ಕಂದಾಯ ನಿರೀಕ್ಷಕರಾಗಿದ್ದ ಈಗ ಮೈಸೂರು ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮಹೇಶ್ ಮತ್ತು ಪಿ.ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಫ್ಡಿಎ ವಿಷ್ಣು, ತಹಸಿಲ್ದಾರ್ ರತ್ನಾಂಬಿಕ ಮತ್ತು ಶಿರಸ್ತೆದಾರ್ ಕುಮಾರ್ ಅವರ ಸಹಕಾರದೊಂದಿಗೆ ನಕಲಿ ದಾಖಲಾತಿ ಸೃಷ್ಟಿಸಿದ್ದರು.

ಈ ಪ್ರಕರಣದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಅವರು ತನಿಖೆ ನಡೆಸಿ ತಹಸಿಲ್ದಾರ್ ಮತ್ತು ಶಿರಸ್ತೆದಾರ್  ಅವರನ್ನು ಹೊರತುಪಡಿಸಿ ನಾಲ್ವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತ್ತುಗೊಳಿಸಿದ್ದರು.

ಗ್ರಾಮದ ರವಿ ಗೌಡ ಈ ಪ್ರಕರಣದ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಕ್ಷಣವೇ ನಕಲಿ ದಾಖಲಾತಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರ ವ್ಯಾಪ್ತಿಗೆ ಪಡೆದುಕೊಳ್ಳಿ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ಸಲ್ಲಿಸಿ ಎಂದು ಆದೇಶಿಸಿದ್ದರು.

ಅದರಂತೆ ತಹಸಿಲ್ದಾರ್ ಶ್ರೀನಿವಾಸ್ ನೇತೃತ್ವದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಗಂಗಾಧರ, ಎಡಿಎಲ್‌ಆರ್ ಬಸವರಾಜು, ಸರ್ವೆಯರ್ ಶಂಭುಲಿಂಗ, ಕಂದಾಯ ನಿರೀಕ್ಷಕರಾದ ವಿಶ್ವನಾಥ್, ಗ್ರಾಮಲೆಕ್ಕಿಗ ರಾಜೇಶ್, ಸಬ್ ಇನ್ ಸ್ಪೆಕ್ಟರ್ ಚಿಕ್ಕನಾಯಕ, ಬಸವರಾಜು ಮತ್ತಿತರರು ಜಮೀನಿಗೆ ತೆರಳಿ ಸರ್ಕಾರದ ವಶಕ್ಕೆ ಪಡೆದುಕೊಂಡು ಜಮೀನಿನ ಗೇಟ್‌ಗೆ ಬೀಗಮುದ್ರೆ ಹಾಕಿ ಸರ್ಕಾರದ ಜಮೀನು ಎಂದು ಫಲಕ ಅಳವಡಿಸಿದ್ದಾರೆ.

ಕಂದಾಯ ಇಲಾಖೆ ಅಧಿಕಾರಿಗಳೇ ಭೂ ಹಗರಣ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಆಂದೋಲನ’ ದಿನಪತ್ರಿಕೆಯಲ್ಲಿ ನಿರಂತರವಾಗಿ ವರದಿ ಪ್ರಕಟ ಮಾಡಲಾಗಿತ್ತು. ಇದರಿಂದ ಎಚ್ಚೆತ್ತ ಅಂದಿನ ಜಿಲ್ಲಾಧಿಕಾರಿ ರಾಜೇಂದ್ರ ಅವರು ನಾಲ್ವರನ್ನು ಅಮಾನತ್ತುಗೊಳಿಸಿದ್ದರು. ಈಗ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಮತ್ತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಡಿಸಿ ಮುಂದಾಗಿದ್ದಾರೆ.

” ಲೋಕಾಯುಕ್ತ ಮತ್ತು ಜಿಲ್ಲಾಧೀಕಾರಿಗಳ ನಿರ್ದೇಶನದಂತೆ ಪಡುಕೋಟೆ ವ್ಯಾಪ್ತಿಯ ಸ.ನಂ.೫೩ರ ೪ ಎಕರೆ ೨೦ ಗುಂಟೆ ಜಮೀನನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ಜಮೀನಿನ ಸಾಗುವಳಿ ಪಡೆಯಲು ಸೃಷ್ಟಿಸಿದ್ದ ನಕಲಿ ದಾಖಲಾತಿಗಳನ್ನು ರದ್ದುಗೊಳಿಸಲಾಗಿದೆ. ತಪ್ಪಿತಸ್ಥ ಕಂದಾಯ ಇಲಾಖೆಯ ಅಧಿಕಾರಿ ಮತ್ತು ನೌಕರರ ವಿರುದ್ಧ ಕ್ರಮಕ್ಕೆ ಡಿಸಿ ಅವರಿಗೆ ವರದಿ ಕಳಿಸಲಾಗಿದೆ.”

-ಶ್ರೀನಿವಾಸ್, ತಹಸಿಲ್ದಾರ್, ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

3 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

4 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

10 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

10 hours ago