ದೂರ ನಂಜುಂಡಸ್ವಾಮಿ
ರಸ್ತೆ ಅಭಿವೃದ್ಧಿಗೆ ಸಚಿವರೇ ಭೂಮಿಪೂಜೆ ನಡೆಸಿದ್ದರೂ ನಡೆಯದ ಕಾಮಗಾರಿ
ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ಉದ್ಬೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಉದ್ಬೂರು ಗ್ರಾಮದ ಮುಖ್ಯರಸ್ತೆಯಲ್ಲಿ ಡಾಂಬರು ಕಿತ್ತು ಬಂದು ಗುಂಡಿಗಳು ನಿರ್ಮಾಣವಾಗಿ ರಸ್ತೆ ತೀರಾ ಹದಗೆಟ್ಟಿರುವುದರಿಂದ ಸವಾರರು ನಿತ್ಯ ತೊಂದರೆ ಎದುರಿಸುತ್ತಿದ್ದಾರೆ.
ರಸ್ತೆ ಕಾಮಗಾರಿಗೆಂದು ರಾಜ್ಯ ಸರ್ಕಾರದಿಂದ ೧೦ ಕೋಟಿ ರೂ. ಬಿಡುಗಡೆಯಾಗಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಿ ನಾಲ್ಕೂವರೆ ತಿಂಗಳುಗಳು ಕಳೆಯುತ್ತ ಬಂದರೂ ಕಾಮಗಾರಿ ಇನ್ನೂ ಪ್ರಾರಂಭವಾಗಿಲ್ಲ.
ಇದನ್ನು ಓದಿ:ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ
ಉದ್ಬೂರಿನ ಕೆರೆ ಸಮೀಪ ಬರುವ ಈ ರಸ್ತೆಯಲ್ಲಿ ದಿನನಿತ್ಯ ಹುಲ್ಲಹಳ್ಳಿ – ಮೈಸೂರು ಮಾರ್ಗವಾಗಿ ಬಿಡುವಿಲ್ಲದೆ ವಾಹನಗಳು ಸಂಚರಿಸುತ್ತಿರುತ್ತವೆ. ರೈತರು, ಕೂಲಿ ಕಾರ್ಮಿಕರು ದಿನನಿತ್ಯದ ಕೆಲಸಕ್ಕಾಗಿ ಇಲ್ಲಿ ಸಂಚರಿಸುವ ವೇಳೆ ಹರಸಾಹಸ ಪಡಬೇಕಾಗಿದೆ. ದ್ವಿಚಕ್ರವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದೆ. ರಾತ್ರಿ ವೇಳೆಯಲ್ಲಿ ಇಲ್ಲಿ ಗುಂಡಿ ಇರುವುದೇ ಕಾಣಿಸುವುದಿಲ್ಲ. ಈ ರಸ್ತೆಯಲ್ಲಿ ೩ ತಿಂಗಳುಗಳಿಂದ ಹಲವಾರು ಅಪಘಾತಗಳು ಸಂಭವಿಸಿವೆ.
ಕಳೆದ ಏಪ್ರಿಲ್ ೨೩ರಂದು ಶಾಸಕ ಜಿ.ಟಿ.ದೇವೇ ಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಮಾನಂದವಾಡಿ ಮುಖ್ಯರಸ್ತೆ ಉದ್ಬೂರು ಗೇಟ್ನಿಂದ ಉದ್ಬೂರು ಗ್ರಾಮದವರೆಗೆ ಜೋಡಿರಸ್ತೆ ನಿರ್ಮಾಣ ಹಾಗೂ ಉದ್ಬೂರು ಗ್ರಾಮದ ಒಳಗಡೆ ಚರಂಡಿ ನಿರ್ಮಾಣ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ಇದಾಗಿ ನಾಲ್ಕೂವರೆ ತಿಂಗಳುಗಳೇ ಕಳೆಯುತ್ತಾ ಬಂದರೂ ಕಾಮಗಾರಿ ಪ್ರಾರಂಭ ವಾಗಿಲ್ಲ. ಲೋಕೋಪಯೋಗಿ ಇಲಾಖೆ ಯವರು ಗುಂಡಿ ಮುಚ್ಚುವ ಕಾರ್ಯಕ್ಕೂ ಮುಂದಾಗಿಲ್ಲ.
ಇದನ್ನು ಓದಿ:ಬಳ್ಳಾರಿ ಜೈಲಿಗೆ ನಟ ದರ್ಶನ್ : ಆದೇಶ ಕಾಯ್ದಿರಿಸಿದ ಕೋರ್ಟ್
ಗ್ರಾಮಸ್ಥರೇ ಆಗಾಗ್ಗೆ ಗುಂಡಿಗೆ ಮಣ್ಣು ಸುರಿಯುತ್ತಿದ್ದಾರೆ. ಈಗ ಸತತವಾಗಿ ಮಳೆ ಬೀಳುತ್ತಿರುವುದರಿಂದ ಉದ್ಬೂರು ಕೆರೆ ಸಮೀಪ ಹಾಗೂ ಇಟ್ಟಿಗೆಗೂಡು ಸಮೀಪ ಗುಂಡಿಗಳಲ್ಲಿ ನೀರು ತುಂಬಿಕೊಂಡು ವಾರಕ್ಕೆ ಇಬ್ಬರಿಂದ ಮೂವರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಸದ್ಯಕ್ಕೆ ಗುಂಡಿಗಳನ್ನಾದರೂ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ರೈತರು, ಕಾರ್ಮಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.
” ಈ ರಸ್ತೆಯಲ್ಲಿ ಸಂಚರಿಸುವಾಗ ಜೀವವನ್ನು ಒಂದು ಕೈಯಲ್ಲಿ ಹಿಡಿದು ಸಂಚರಿಸಬೇಕಾಗಿದೆ. ಇಲ್ಲಿ ದಿನನಿತ್ಯ ಒಂದಲ್ಲ ಒಂದು ಅಪಘಾತ ನಡೆಯುತ್ತಲೇ ಇದೆ. ಭೂಮಿಪೂಜೆ ನಡೆಸಿದ್ದರೂ ಕಾಮಗಾರಿ ಪ್ರಾರಂಭವಾಗದೆ ವಾಹನ ಸವಾರರ ಜೀವಕ್ಕೆ ಸಂಚಕಾರವಾಗಿ ಪರಿಣಮಿಸಿದೆ.”
-ಪ್ರಕಾಶ್, ವಕೀಲರು, ತಳೂರು ಗ್ರಾಮ
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…
ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ…