Andolana originals

ಉದ್ಬೂರು ಮುಖ್ಯರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು

ದೂರ ನಂಜುಂಡಸ್ವಾಮಿ

ರಸ್ತೆ ಅಭಿವೃದ್ಧಿಗೆ ಸಚಿವರೇ ಭೂಮಿಪೂಜೆ ನಡೆಸಿದ್ದರೂ ನಡೆಯದ ಕಾಮಗಾರಿ 

ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ಉದ್ಬೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಉದ್ಬೂರು ಗ್ರಾಮದ ಮುಖ್ಯರಸ್ತೆಯಲ್ಲಿ ಡಾಂಬರು ಕಿತ್ತು ಬಂದು ಗುಂಡಿಗಳು ನಿರ್ಮಾಣವಾಗಿ ರಸ್ತೆ ತೀರಾ ಹದಗೆಟ್ಟಿರುವುದರಿಂದ ಸವಾರರು ನಿತ್ಯ ತೊಂದರೆ ಎದುರಿಸುತ್ತಿದ್ದಾರೆ.

ರಸ್ತೆ ಕಾಮಗಾರಿಗೆಂದು ರಾಜ್ಯ ಸರ್ಕಾರದಿಂದ ೧೦ ಕೋಟಿ ರೂ. ಬಿಡುಗಡೆಯಾಗಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಿ ನಾಲ್ಕೂವರೆ ತಿಂಗಳುಗಳು ಕಳೆಯುತ್ತ ಬಂದರೂ ಕಾಮಗಾರಿ ಇನ್ನೂ ಪ್ರಾರಂಭವಾಗಿಲ್ಲ.

ಇದನ್ನು ಓದಿ:ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ

ಉದ್ಬೂರಿನ ಕೆರೆ ಸಮೀಪ ಬರುವ ಈ ರಸ್ತೆಯಲ್ಲಿ ದಿನನಿತ್ಯ ಹುಲ್ಲಹಳ್ಳಿ – ಮೈಸೂರು ಮಾರ್ಗವಾಗಿ ಬಿಡುವಿಲ್ಲದೆ ವಾಹನಗಳು ಸಂಚರಿಸುತ್ತಿರುತ್ತವೆ. ರೈತರು, ಕೂಲಿ ಕಾರ್ಮಿಕರು ದಿನನಿತ್ಯದ ಕೆಲಸಕ್ಕಾಗಿ ಇಲ್ಲಿ ಸಂಚರಿಸುವ ವೇಳೆ ಹರಸಾಹಸ ಪಡಬೇಕಾಗಿದೆ. ದ್ವಿಚಕ್ರವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದೆ. ರಾತ್ರಿ ವೇಳೆಯಲ್ಲಿ ಇಲ್ಲಿ ಗುಂಡಿ ಇರುವುದೇ ಕಾಣಿಸುವುದಿಲ್ಲ. ಈ ರಸ್ತೆಯಲ್ಲಿ ೩ ತಿಂಗಳುಗಳಿಂದ ಹಲವಾರು ಅಪಘಾತಗಳು ಸಂಭವಿಸಿವೆ.

ಕಳೆದ ಏಪ್ರಿಲ್ ೨೩ರಂದು ಶಾಸಕ ಜಿ.ಟಿ.ದೇವೇ ಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಮಾನಂದವಾಡಿ ಮುಖ್ಯರಸ್ತೆ ಉದ್ಬೂರು ಗೇಟ್‌ನಿಂದ ಉದ್ಬೂರು ಗ್ರಾಮದವರೆಗೆ ಜೋಡಿರಸ್ತೆ ನಿರ್ಮಾಣ ಹಾಗೂ ಉದ್ಬೂರು ಗ್ರಾಮದ ಒಳಗಡೆ ಚರಂಡಿ ನಿರ್ಮಾಣ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ಇದಾಗಿ ನಾಲ್ಕೂವರೆ ತಿಂಗಳುಗಳೇ ಕಳೆಯುತ್ತಾ ಬಂದರೂ ಕಾಮಗಾರಿ ಪ್ರಾರಂಭ ವಾಗಿಲ್ಲ. ಲೋಕೋಪಯೋಗಿ ಇಲಾಖೆ ಯವರು ಗುಂಡಿ ಮುಚ್ಚುವ ಕಾರ್ಯಕ್ಕೂ ಮುಂದಾಗಿಲ್ಲ.

ಇದನ್ನು ಓದಿ:ಬಳ್ಳಾರಿ ಜೈಲಿಗೆ ನಟ ದರ್ಶನ್‌ : ಆದೇಶ ಕಾಯ್ದಿರಿಸಿದ ಕೋರ್ಟ್‌

ಗ್ರಾಮಸ್ಥರೇ ಆಗಾಗ್ಗೆ ಗುಂಡಿಗೆ ಮಣ್ಣು ಸುರಿಯುತ್ತಿದ್ದಾರೆ. ಈಗ ಸತತವಾಗಿ ಮಳೆ ಬೀಳುತ್ತಿರುವುದರಿಂದ ಉದ್ಬೂರು ಕೆರೆ ಸಮೀಪ ಹಾಗೂ ಇಟ್ಟಿಗೆಗೂಡು ಸಮೀಪ ಗುಂಡಿಗಳಲ್ಲಿ ನೀರು ತುಂಬಿಕೊಂಡು ವಾರಕ್ಕೆ ಇಬ್ಬರಿಂದ ಮೂವರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಸದ್ಯಕ್ಕೆ ಗುಂಡಿಗಳನ್ನಾದರೂ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ರೈತರು, ಕಾರ್ಮಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.

” ಈ ರಸ್ತೆಯಲ್ಲಿ ಸಂಚರಿಸುವಾಗ ಜೀವವನ್ನು ಒಂದು ಕೈಯಲ್ಲಿ ಹಿಡಿದು ಸಂಚರಿಸಬೇಕಾಗಿದೆ. ಇಲ್ಲಿ ದಿನನಿತ್ಯ ಒಂದಲ್ಲ ಒಂದು ಅಪಘಾತ ನಡೆಯುತ್ತಲೇ ಇದೆ. ಭೂಮಿಪೂಜೆ ನಡೆಸಿದ್ದರೂ ಕಾಮಗಾರಿ ಪ್ರಾರಂಭವಾಗದೆ ವಾಹನ ಸವಾರರ ಜೀವಕ್ಕೆ ಸಂಚಕಾರವಾಗಿ ಪರಿಣಮಿಸಿದೆ.”

-ಪ್ರಕಾಶ್, ವಕೀಲರು, ತಳೂರು ಗ್ರಾಮ

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago