Andolana originals

ಉದ್ಬೂರು ಮುಖ್ಯರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು

ದೂರ ನಂಜುಂಡಸ್ವಾಮಿ

ರಸ್ತೆ ಅಭಿವೃದ್ಧಿಗೆ ಸಚಿವರೇ ಭೂಮಿಪೂಜೆ ನಡೆಸಿದ್ದರೂ ನಡೆಯದ ಕಾಮಗಾರಿ 

ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ಉದ್ಬೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಉದ್ಬೂರು ಗ್ರಾಮದ ಮುಖ್ಯರಸ್ತೆಯಲ್ಲಿ ಡಾಂಬರು ಕಿತ್ತು ಬಂದು ಗುಂಡಿಗಳು ನಿರ್ಮಾಣವಾಗಿ ರಸ್ತೆ ತೀರಾ ಹದಗೆಟ್ಟಿರುವುದರಿಂದ ಸವಾರರು ನಿತ್ಯ ತೊಂದರೆ ಎದುರಿಸುತ್ತಿದ್ದಾರೆ.

ರಸ್ತೆ ಕಾಮಗಾರಿಗೆಂದು ರಾಜ್ಯ ಸರ್ಕಾರದಿಂದ ೧೦ ಕೋಟಿ ರೂ. ಬಿಡುಗಡೆಯಾಗಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಸಹ ನೆರವೇರಿಸಿ ನಾಲ್ಕೂವರೆ ತಿಂಗಳುಗಳು ಕಳೆಯುತ್ತ ಬಂದರೂ ಕಾಮಗಾರಿ ಇನ್ನೂ ಪ್ರಾರಂಭವಾಗಿಲ್ಲ.

ಇದನ್ನು ಓದಿ:ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ಕೈಲ್ ಮುಹೂರ್ತ ಆಚರಣೆ

ಉದ್ಬೂರಿನ ಕೆರೆ ಸಮೀಪ ಬರುವ ಈ ರಸ್ತೆಯಲ್ಲಿ ದಿನನಿತ್ಯ ಹುಲ್ಲಹಳ್ಳಿ – ಮೈಸೂರು ಮಾರ್ಗವಾಗಿ ಬಿಡುವಿಲ್ಲದೆ ವಾಹನಗಳು ಸಂಚರಿಸುತ್ತಿರುತ್ತವೆ. ರೈತರು, ಕೂಲಿ ಕಾರ್ಮಿಕರು ದಿನನಿತ್ಯದ ಕೆಲಸಕ್ಕಾಗಿ ಇಲ್ಲಿ ಸಂಚರಿಸುವ ವೇಳೆ ಹರಸಾಹಸ ಪಡಬೇಕಾಗಿದೆ. ದ್ವಿಚಕ್ರವಾಹನ ಸವಾರರ ಸ್ಥಿತಿಯಂತೂ ಹೇಳತೀರದಾಗಿದೆ. ರಾತ್ರಿ ವೇಳೆಯಲ್ಲಿ ಇಲ್ಲಿ ಗುಂಡಿ ಇರುವುದೇ ಕಾಣಿಸುವುದಿಲ್ಲ. ಈ ರಸ್ತೆಯಲ್ಲಿ ೩ ತಿಂಗಳುಗಳಿಂದ ಹಲವಾರು ಅಪಘಾತಗಳು ಸಂಭವಿಸಿವೆ.

ಕಳೆದ ಏಪ್ರಿಲ್ ೨೩ರಂದು ಶಾಸಕ ಜಿ.ಟಿ.ದೇವೇ ಗೌಡರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರು ಮಾನಂದವಾಡಿ ಮುಖ್ಯರಸ್ತೆ ಉದ್ಬೂರು ಗೇಟ್‌ನಿಂದ ಉದ್ಬೂರು ಗ್ರಾಮದವರೆಗೆ ಜೋಡಿರಸ್ತೆ ನಿರ್ಮಾಣ ಹಾಗೂ ಉದ್ಬೂರು ಗ್ರಾಮದ ಒಳಗಡೆ ಚರಂಡಿ ನಿರ್ಮಾಣ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದು, ಇದಾಗಿ ನಾಲ್ಕೂವರೆ ತಿಂಗಳುಗಳೇ ಕಳೆಯುತ್ತಾ ಬಂದರೂ ಕಾಮಗಾರಿ ಪ್ರಾರಂಭ ವಾಗಿಲ್ಲ. ಲೋಕೋಪಯೋಗಿ ಇಲಾಖೆ ಯವರು ಗುಂಡಿ ಮುಚ್ಚುವ ಕಾರ್ಯಕ್ಕೂ ಮುಂದಾಗಿಲ್ಲ.

ಇದನ್ನು ಓದಿ:ಬಳ್ಳಾರಿ ಜೈಲಿಗೆ ನಟ ದರ್ಶನ್‌ : ಆದೇಶ ಕಾಯ್ದಿರಿಸಿದ ಕೋರ್ಟ್‌

ಗ್ರಾಮಸ್ಥರೇ ಆಗಾಗ್ಗೆ ಗುಂಡಿಗೆ ಮಣ್ಣು ಸುರಿಯುತ್ತಿದ್ದಾರೆ. ಈಗ ಸತತವಾಗಿ ಮಳೆ ಬೀಳುತ್ತಿರುವುದರಿಂದ ಉದ್ಬೂರು ಕೆರೆ ಸಮೀಪ ಹಾಗೂ ಇಟ್ಟಿಗೆಗೂಡು ಸಮೀಪ ಗುಂಡಿಗಳಲ್ಲಿ ನೀರು ತುಂಬಿಕೊಂಡು ವಾರಕ್ಕೆ ಇಬ್ಬರಿಂದ ಮೂವರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಸದ್ಯಕ್ಕೆ ಗುಂಡಿಗಳನ್ನಾದರೂ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ರೈತರು, ಕಾರ್ಮಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.

” ಈ ರಸ್ತೆಯಲ್ಲಿ ಸಂಚರಿಸುವಾಗ ಜೀವವನ್ನು ಒಂದು ಕೈಯಲ್ಲಿ ಹಿಡಿದು ಸಂಚರಿಸಬೇಕಾಗಿದೆ. ಇಲ್ಲಿ ದಿನನಿತ್ಯ ಒಂದಲ್ಲ ಒಂದು ಅಪಘಾತ ನಡೆಯುತ್ತಲೇ ಇದೆ. ಭೂಮಿಪೂಜೆ ನಡೆಸಿದ್ದರೂ ಕಾಮಗಾರಿ ಪ್ರಾರಂಭವಾಗದೆ ವಾಹನ ಸವಾರರ ಜೀವಕ್ಕೆ ಸಂಚಕಾರವಾಗಿ ಪರಿಣಮಿಸಿದೆ.”

-ಪ್ರಕಾಶ್, ವಕೀಲರು, ತಳೂರು ಗ್ರಾಮ

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

1 hour ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

2 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

2 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

3 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

6 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

7 hours ago