ಕೆ.ಬಿ.ರಮೇಶನಾಯಕ
ಚುನಾವಣಾ ಅಖಾಡಕ್ಕೆ ಧುಮುಕಲಿರುವ ಶಾಸಕರು, ಮಾಜಿ ಶಾಸಕರು
ಮೌನವಾಗಿಯೇ ದಾಳಗಳನ್ನು ಉರುಳಿಸುತ್ತಿರುವ ನಾಯಕರು
ಮತ ಚಲಾಯಿಸುವ ಪ್ರತಿನಿಧಿ (ಡೆಲಿಗೇಟ್ಸ್) ಮನವೊಲಿಕೆಗೆ ಕಸರತ್ತು
ಮೈಸೂರು: ಸಹಕಾರ ಕ್ಷೇತ್ರದ ಕೇಂದ್ರ ಬಿಂದುವಾಗಿರುವ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಎಂಸಿಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ದಿನಾಂಕ ನಿಗದಿ ಯಾದ ಬೆನ್ನಲ್ಲೇ ಚುನಾವಣೆಯ ಕಣ ರಂಗೇರುತ್ತಿದೆ.
ಈ ಚುನಾವಣೆಯು ಪಕ್ಷಾತೀತ ವಾಗಿದ್ದರೂ ಅಖಾಡಕ್ಕೆ ಇಳಿಯುವ ಅಭ್ಯರ್ಥಿಗಳು ಒಂದೊಂದು ಪಕ್ಷದಲ್ಲಿ ಗುರುತಿಸಿಕೊಂಡಿರುವುದರಿಂದ ರಾಜಕೀಯ ಪಕ್ಷಗಳು ಆಡಳಿತ ಹಿಡಿಯಲು ಪ್ರತಿಷ್ಠೆಯನ್ನಾಗಿ ಸ್ವೀಕರಿಸಿವೆ. ಇದ ರಿಂದಾಗಿ ಚುನಾವಣೆಯಲ್ಲಿ ಗೆಲ್ಲಲು ಮೌನವಾಗಿಯೇ ದಾಳಗಳನ್ನು ಉರುಳಿಸುವುದಲ್ಲದೆ, ಮತ ಚಲಾಯಿ ಸುವ ಡೆಲಿಗೇಟ್ ಹಿಡಿದಿಟ್ಟುಕೊಳ್ಳಲು ಮನ ವೊಲಿಕೆಯ ಕಸರತ್ತು ಆರಂಭಿಸಿರುವುದು ಗಮನಾರ್ಹವಾಗಿದೆ. ಗ್ರಾಮೀಣ ಪ್ರದೇಶದ ರೈತ ಸಮುದಾಯಕ್ಕೆ ಸಾಲ ಸೌಲಭ್ಯ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಒದಗಿಸುತ್ತಾ ಬಂದಿರುವ ಎಂಸಿಡಿಸಿಸಿ ಬ್ಯಾಂಕ್ನ ಆಡಳಿತ ಮಂಡಳಿಯ ಅಧಿಕಾರಾವಧಿ ೨೦೨೩ರ ನವೆಂಬರ್ ತಿಂಗಳಲ್ಲೇ ಕೊನೆಗೊಂಡಿತ್ತು.
ಆದರೆ,ಕೆಲವು ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಚುನಾವಣೆಯನ್ನು ಮುಂದೂಡಲಾಗಿತ್ತು. ಇದರಿಂದಾಗಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರಿಂದಾಗಿ ಹೈಕೋರ್ಟ್ ಆದೇಶದಂತೆ ಚುನಾವಣೆ ನಡೆಸುವುದು ಅನಿವಾರ್ಯ ವಾಗಿದ್ದು, ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ ಜೂ.೨೬ಕ್ಕೆ ಮುಹೂರ್ತ ನಿಗದಿಪಡಿಸುತ್ತಿದ್ದಂತೆ ಅವಳಿ ಜಿಲ್ಲೆಗಳ ಸಹಕಾರ ವಲಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದೆ.
ಚುನಾವಣಾ ಅಖಾಡಕ್ಕೆ ಸಜ್ಜಾದ ಘಟಾನುಘಟಿ ನಾಯಕರು: ಈ ಬಾರಿ ಹಳೆಯ ಮತ್ತು ಹೊಸ ಮುಖಗಳು ಕಣಕ್ಕಿಳಿಯುತ್ತಿರುವುದರಿಂದ ಅಖಾಡ ಮತ್ತಷ್ಟು ರಂಗು ಪಡೆಯುವ ಸಾಧ್ಯತೆ ಇದೆ. ಸಹಕಾರ ಕ್ಷೇತ್ರದ ಚುನಾವಣೆ ನಡೆದಾಗ ಜನರಿಗೆ ಗೊತ್ತಿಲ್ಲದಂತೆ ಮುಗಿದು ಹೋಗುತ್ತಿತ್ತಾದರೂ ಈ ಬಾರಿಯ ಚುನಾ ವಣೆಯು ಅನೇಕರಿಗೆ ಪ್ರತಿಷ್ಠೆಯ ಕಣವಾಗಿದೆ.
ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು, ಹುಣಸೂರು ಶಾಸಕ ಜಿ.ಡಿ.ಹರೀಶ್ಗೌಡ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರು ಕ್ಷೇತ್ರದ ಮಾಜಿ ಶಾಸಕ ಆರ್.ನರೇಂದ್ರ, ಎಂಸಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಎಸ್.ಚಂದ್ರಶೇಖರ್, ಸಿ.ಬಸವೇ ಗೌಡ, ಮಾಜಿ ನಿರ್ದೇಶಕರಾದ ಬಿ.ಎನ್.ಸದಾನಂದ, ಅಮಿತ್ ವಿ.ದೇವರಹಟ್ಟಿ, ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಕಣಕ್ಕಿಳಿಯುವುದು ನಿಶ್ಚಿತವಾದರೆ, ಕೆ.ಆರ್.ನಗರ ಕ್ಷೇತ್ರದ ಶಾಸಕ ಡಿ.ರವಿಶಂಕರ್ ಅವರ ತಂದೆ ದೊಡ್ಡಸ್ವಾಮೇಗೌಡ ಸಹಕಾರ ಕ್ಷೇತ್ರದ ಕಣಕ್ಕಿಳಿಯುತ್ತಿರುವುದು ವಿಶೇಷವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ಸ್ಪರ್ಧೆ ಮಾಡುತ್ತಿರುವುದರಿಂದ ಕೆಲವು ಕ್ಷೇತ್ರಗಳಲ್ಲಿ ಹೊಸಬರಿಗೆ ಅಥವಾ ಹಳಬರಿಗೂ ಅವಕಾಶ ಸಿಗುವುದು ಕಡಿಮೆಯಾಗಿದೆ.
ಸ್ಪರ್ಧೆ ಮಾಡಿದರೂ ಶಾಸಕರನ್ನು ಎದುರಿಸಿ ಗೆಲ್ಲುವುದು ಕಷ್ಟಕರ ಎನ್ನುವುದು ಗೊತ್ತಾಗಿರುವ ಕಾರಣ ದೂರ ಉಳಿಯುವುದಕ್ಕೂ ಚಿಂತನೆ ನಡೆಸಿದ್ದಾರೆ. ದಿನಾಂಕ ಪ್ರಕಟವಾದ ಬೆನ್ನಲ್ಲೇ ತಮ್ಮ ತಮ್ಮ ಆಪ್ತರನ್ನು ಕರೆಸಿ ಸಮಾಲೋಚನೆ ನಡೆಸುತ್ತಲೇ ಎದುರಾಳಿಗಳ ಬೆಂಬಲ, ಸಾಮರ್ಥ್ಯವನ್ನು ಗುರುತಿಸಿ ಹೊಸ ದಾಳ ಗಳನ್ನು ಉರುಳಿ ಸುವ ಕೆಲಸದಲ್ಲಿ ತೊಡಗಿರುವುದು ಕಂಡುಬಂದಿದೆ.
ಡೆಲಿಗೇಟ್ಸ್ಗಳ ಮನವೊಲಿಕೆ: ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿರುವ ಡೆಲಿಗೇಟ್ಸ್ಗಳ ಮನವೊಲಿಕೆಗೆ ಆಕಾಂಕ್ಷಿಗಳು ಮುಂದಾಗಿದ್ದಾರೆ. ನಿರ್ದೇಶಕ ಸ್ಥಾನದ ಮೇಲೆ ಕಣ್ಣಿಟ್ಟು ಸ್ಪರ್ಧೆಗೆ ಅಣಿಯಾಗಿರುವವರು ಪ್ರತಿನಿಧಿಗಳನ್ನು ಭೇಟಿ ಮಾಡುವುದು, ದೂರವಾಣಿ ಮೂಲಕ ಮಾತ ನಾಡುವುದು, ಎದುರಾಳಿಗಳ ಸಂಪರ್ಕಕ್ಕೆ ಸಿಗದ ರೀತಿಯಲ್ಲಿ ಓಲೈಕೆ ಮಾಡುತ್ತಿದ್ದಾರೆ.
ಒಂದು ಸುತ್ತು ಪ್ರಚಾರ ಮುಗಿಸಿರುವ ಆಕಾಂಕ್ಷಿಗಳು ನಾಮಪತ್ರ ಸಲ್ಲಿಕೆ ಕಾರ್ಯ ಮುಗಿದ ಬಳಿಕ ತಮ್ಮ ಪರ ನಿಷ್ಠೆಯುಳ್ಳ ಮತದಾರರನ್ನು ಜೋಪಾನವಾಗಿ ಕಾಯ್ದಿರಿಸಿಕೊಳ್ಳು ವಂತೆ ಮಾಡಲು ಒಂದು ತಂಡವನ್ನೇ ನಿಯೋಜಿಸಿರುವುದು ಗೊತ್ತಾಗಿದೆ.
ಗುಂಪು ಅನುಮಾನ: ಈ ಬಾರಿ ಪರ-ವಿರೋಧದ ಗುಂಪು ಸ್ಪರ್ಧೆ ಮಾಡುವುದಕ್ಕಿಂತಲೂ ವೈಯಕ್ತಿಕವಾಗಿ ಸ್ಪರ್ಧೆ ಮಾಡಲು ಒಲವು ತೋರುತ್ತಿರುವುದು ವಿಶೇಷ. ಹಲವಾರು ವರ್ಷಗಳಿಂದ ಪ್ರತ್ಯೇಕ ಬಣ ಮಾಡಿಕೊಂಡು ಸ್ಪರ್ಧಿಸುತ್ತಿದ್ದರು. ನಂತರ ಒಂದಾಗಿ ಕೆಲಸ ಮಾಡುತ್ತಿದ್ದರು. ಆದರೆ, ಈ ಬಾರಿ ಎಂಸಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಸ್.ಚಂದ್ತಶೇಖರ್ ಅವರು ತಮ್ಮದು ಕಾಂಗ್ರೆಸ್ ಟೀಂ ಎಂದು ಹೇಳಿದರೂ ಎದುರಾಳಿಗಳು ಮಾತ್ರ ಮೌನವಾಗಿಯೇ ಇರುವುದನ್ನು ಗಮನಿಸಬಹುದಾಗಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…