ಮೈಸೂರು: ನಗರದ ಕೆಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಚಿಕ್ಕ ಮಕ್ಕಳು ಭಯದಲ್ಲೇ ಓಡಾಡಿದರೆ, ಎಲ್ಲೆಂದರಲ್ಲಿ ಅಡ್ಡಾಡುವ ಬಿಡಾಡಿ ದನಗಳಿಂದ ವಾಹನ ಸವಾರರು ಮತ್ತು ಪಾದಚಾರಿಗಳ ಪ್ರಾಣಕ್ಕೆ ಕಂಟಕ ಎದುರಾಗುತ್ತಿದೆ.
ಮೈಸೂರು ವಿಶಾಲ ರಸ್ತೆಗಳನ್ನು ಹೊಂದಿರುವ ಸ್ವಚ್ಛನಗರಿ ಎಂಬ ಖ್ಯಾತಿ ಹೊಂದಿದೆ. ಇಲ್ಲಿನ ರಸ್ತೆ ಪಕ್ಕದಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ನೋಡುತ್ತಾ ವಾಹನಗಳಲ್ಲಿ ಹೋಗುವುದೇ ಒಂದು ಸುಂದರ ಅನುಭವ. ಹೀಗೆ ವಾಹನ ಚಾಲನೆ ಮಾಡುತ್ತಲೇ ಕೊಂಚ ಮೈಮರೆತರೆ ಅಪಘಾತ ತಪ್ಪಿದ್ದಲ್ಲ. ಇದಕ್ಕೆ ಬಿಡಾಡಿ ದನಗಳು ಕಾರಣವಾಗಿವೆ. ರಸ್ತೆ ಮಧ್ಯದಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುವುದು, ಮಲಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಅನೇಕ ಸಾವು-ನೋವುಗಳು ಕೂಡ ಸಂಭವಿಸಿವೆ. ಎಷ್ಟೋ ಜನ ಬೈಕ್ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.
೧೧ ಸಾವಿರ ಹಸುಗಳು: ನಗರದಲ್ಲಿ ಸುಮಾರು ೧೧ ಸಾವಿರ ಹಸುಗಳಿದ್ದು, ಕೆಲವರಿಗೆ ಹಸುಗಳನ್ನು ಸಾಕಲು ಸ್ಥಳವಿಲ್ಲ. ಇನ್ನು ಕೆಲವರಿಗೆ ದಿನವಿಡೀ ಅವುಗಳಿಗೆ ಮೇವು ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹಸುಗಳನ್ನು ಹಾಲು ಕರೆದ ನಂತರ ರಸ್ತೆಗಳಿಗೆ ಬಿಡುತ್ತಾರೆ. ಇದರ ಬಗ್ಗೆ ನಗರಪಾಲಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಿಡಾಡಿ ದನಗಳ ಹಾವಳಿ: ನಗರದ ಹಣ್ಣು ಹಾಗೂ ತರಕಾರಿ ಮಾರುಕಟ್ಟೆಗಳ ಬಳಿ ಈ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಮುಖ್ಯವಾಗಿ ಹಳ್ಳಿ ಪ್ರದೇಶದಲ್ಲಿ ಗಂಡು ಕರುಗಳನ್ನು ೫೦೦ ರೂಪಾಯಿಗೋ ಅಥವಾ ಸಣ್ಣಪುಟ್ಟ ಹಣಕ್ಕೋ ತಂದು ಈ ಕರುಗಳನ್ನು ಪ್ರಮುಖ ಮಾರುಕಟ್ಟೆ ಹಾಗೂ ಅಂಗಡಿ ಪ್ರದೇಶಗಳಲ್ಲಿ ಬಿಡುತ್ತಾರೆ. ಈ ಕರುಗಳು ಒಂದು ವರ್ಷಕ್ಕೆ ಸುಮಾರು ೨೫ ಸಾವಿರ ರೂಪಾಯಿ ಬೆಲೆ ಬಾಳುತ್ತವೆ. ಅದನ್ನು ಬೇರೆ ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಇದೊಂದು ದಂಧೆಯೂ ಆಗಿದೆ ಎಂಬುದು ಕೆಲವರ ಆರೋಪವಾಗಿದೆ.
ಅಷ್ಟೇ ಅಲ್ಲದೇ, ಎಷ್ಟೋ ಗಂಡು ಕರುಗಳು ರಸ್ತೆಯ ಅಕ್ಕ-ಪಕ್ಕ, ಮಧ್ಯ ಹಾಗೂ ಮಾರುಕಟ್ಟೆ ಗಳಲ್ಲಿ ಜನರ ಮೇಲೆ ದಾಳಿ ಮಾಡಿರುವ ಉದಾಹರಣೆಗಳಿವೆ. ಇದರಿಂದಲೇ ಕಳೆದ ಎರಡು ತಿಂಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಗರಪಾಲಿಕೆ ಮಾಜಿ ಸದಸ್ಯ ರಂಗಸ್ವಾಮಿ ತಮ್ಮ ತಿಲಕ್ನಗರದ ಉದಾ ಹರಣೆಯನ್ನು ನೀಡುತ್ತಾರೆ.
ಹಸುಗಳನ್ನು ರಸ್ತೆಗೆ ಬಿಡದಂತೆ ಆಯಾ ಹಸುವಿನ ಮಾಲೀಕರಿಗೆ ಪಾಲಿಕೆಯ ಆರೋಗ್ಯ ನಿರೀಕ್ಷಕರ ಮೂಲಕ ಎಚ್ಚರಿಕೆ ನೀಡಲಾಗಿದೆ. ಆದರೂ ರಸ್ತೆಗಳಿಗೆ ಹಸುವನ್ನು ಬಿಡುತ್ತಿರುವ ಮಾಹಿತಿ ಲಭ್ಯವಾಗಿದೆ. ಇದೇ ರೀತಿ ಮುಂದುವರಿದರೆ ಎರಡು ಬಾರಿ ದಂಡ ಹಾಕಲಾಗುತ್ತದೆ. ಮತ್ತೆ ಮುಂದುವರಿದರೆ ಹಸುಗಳನ್ನು ವಶಕ್ಕೆಪಡೆದು ಹರಾಜು ಹಾಕಲಾಗುವುದು ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಎಚ್ಚರಿಸಿದ್ದಾರೆ.
” ಮಾಲೀಕರಿಗೆ ಎಷ್ಟು ಹೇಳಿದರೂ ದನಗಳನ್ನು ರಸ್ತೆಯಲ್ಲಿ ಬಿಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಪರಿಶೀಲಿಸಿ ತಕ್ಷಣ ಪಾಲಿಕೆ ತಂಡ ಜಾನುವಾರುಗಳನ್ನು ಸಾಗಿಸಿ ದೊಡ್ಡಿಯಲ್ಲಿ ಬಿಡುತ್ತಾರೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು.”
-ಡಾ.ವೆಂಕಟೇಶ್, ಆರೋಗ್ಯಾಧಿಕಾರಿ
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ…
ಕೇರಳ: ಕೇರಳ ಮತ್ತು ತಮಿಳುನಾಡು ಚುನಾವಣೆಗೆ ದಿನಾಂಕ ಘೋಷಣೆಯಾಗಲು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಮಾರ್ಚ್.11ರಂದು ಪ್ರಧಾನಿ…
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…