Andolana originals

ಬಿಡಾಡಿ ದನಗಳ ಕಾಟ; ಶ್ರೀಸಾಮಾನ್ಯರಿಗೆ ಸಂಕಷ್ಟ

ಮೈಸೂರು: ನಗರದ ಕೆಲವು ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಚಿಕ್ಕ ಮಕ್ಕಳು ಭಯದಲ್ಲೇ ಓಡಾಡಿದರೆ, ಎಲ್ಲೆಂದರಲ್ಲಿ ಅಡ್ಡಾಡುವ ಬಿಡಾಡಿ ದನಗಳಿಂದ ವಾಹನ ಸವಾರರು ಮತ್ತು ಪಾದಚಾರಿಗಳ ಪ್ರಾಣಕ್ಕೆ ಕಂಟಕ ಎದುರಾಗುತ್ತಿದೆ.

ಮೈಸೂರು ವಿಶಾಲ ರಸ್ತೆಗಳನ್ನು ಹೊಂದಿರುವ ಸ್ವಚ್ಛನಗರಿ ಎಂಬ ಖ್ಯಾತಿ ಹೊಂದಿದೆ. ಇಲ್ಲಿನ ರಸ್ತೆ ಪಕ್ಕದಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ನೋಡುತ್ತಾ ವಾಹನಗಳಲ್ಲಿ ಹೋಗುವುದೇ ಒಂದು ಸುಂದರ ಅನುಭವ. ಹೀಗೆ ವಾಹನ ಚಾಲನೆ ಮಾಡುತ್ತಲೇ ಕೊಂಚ ಮೈಮರೆತರೆ ಅಪಘಾತ ತಪ್ಪಿದ್ದಲ್ಲ. ಇದಕ್ಕೆ ಬಿಡಾಡಿ ದನಗಳು ಕಾರಣವಾಗಿವೆ. ರಸ್ತೆ ಮಧ್ಯದಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುವುದು, ಮಲಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿದ್ದು, ಅನೇಕ ಸಾವು-ನೋವುಗಳು ಕೂಡ ಸಂಭವಿಸಿವೆ. ಎಷ್ಟೋ ಜನ ಬೈಕ್ ಸವಾರರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಕೆಲವರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

೧೧ ಸಾವಿರ ಹಸುಗಳು: ನಗರದಲ್ಲಿ ಸುಮಾರು ೧೧ ಸಾವಿರ ಹಸುಗಳಿದ್ದು, ಕೆಲವರಿಗೆ ಹಸುಗಳನ್ನು ಸಾಕಲು ಸ್ಥಳವಿಲ್ಲ. ಇನ್ನು ಕೆಲವರಿಗೆ ದಿನವಿಡೀ ಅವುಗಳಿಗೆ ಮೇವು ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹಸುಗಳನ್ನು ಹಾಲು ಕರೆದ ನಂತರ ರಸ್ತೆಗಳಿಗೆ ಬಿಡುತ್ತಾರೆ. ಇದರ ಬಗ್ಗೆ ನಗರಪಾಲಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಿಡಾಡಿ ದನಗಳ ಹಾವಳಿ: ನಗರದ ಹಣ್ಣು ಹಾಗೂ ತರಕಾರಿ ಮಾರುಕಟ್ಟೆಗಳ ಬಳಿ ಈ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಮುಖ್ಯವಾಗಿ ಹಳ್ಳಿ ಪ್ರದೇಶದಲ್ಲಿ ಗಂಡು ಕರುಗಳನ್ನು ೫೦೦ ರೂಪಾಯಿಗೋ ಅಥವಾ ಸಣ್ಣಪುಟ್ಟ ಹಣಕ್ಕೋ ತಂದು ಈ ಕರುಗಳನ್ನು ಪ್ರಮುಖ ಮಾರುಕಟ್ಟೆ ಹಾಗೂ ಅಂಗಡಿ ಪ್ರದೇಶಗಳಲ್ಲಿ ಬಿಡುತ್ತಾರೆ. ಈ ಕರುಗಳು ಒಂದು ವರ್ಷಕ್ಕೆ ಸುಮಾರು ೨೫ ಸಾವಿರ ರೂಪಾಯಿ ಬೆಲೆ ಬಾಳುತ್ತವೆ. ಅದನ್ನು ಬೇರೆ ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಇದೊಂದು ದಂಧೆಯೂ ಆಗಿದೆ ಎಂಬುದು ಕೆಲವರ ಆರೋಪವಾಗಿದೆ.

ಅಷ್ಟೇ ಅಲ್ಲದೇ, ಎಷ್ಟೋ ಗಂಡು ಕರುಗಳು ರಸ್ತೆಯ ಅಕ್ಕ-ಪಕ್ಕ, ಮಧ್ಯ ಹಾಗೂ ಮಾರುಕಟ್ಟೆ ಗಳಲ್ಲಿ ಜನರ ಮೇಲೆ ದಾಳಿ ಮಾಡಿರುವ ಉದಾಹರಣೆಗಳಿವೆ. ಇದರಿಂದಲೇ ಕಳೆದ ಎರಡು ತಿಂಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ನಗರಪಾಲಿಕೆ ಮಾಜಿ ಸದಸ್ಯ ರಂಗಸ್ವಾಮಿ ತಮ್ಮ ತಿಲಕ್‌ನಗರದ ಉದಾ ಹರಣೆಯನ್ನು ನೀಡುತ್ತಾರೆ.

ಹಸುಗಳನ್ನು ರಸ್ತೆಗೆ ಬಿಡದಂತೆ ಆಯಾ ಹಸುವಿನ ಮಾಲೀಕರಿಗೆ ಪಾಲಿಕೆಯ ಆರೋಗ್ಯ ನಿರೀಕ್ಷಕರ ಮೂಲಕ ಎಚ್ಚರಿಕೆ ನೀಡಲಾಗಿದೆ. ಆದರೂ ರಸ್ತೆಗಳಿಗೆ ಹಸುವನ್ನು ಬಿಡುತ್ತಿರುವ ಮಾಹಿತಿ ಲಭ್ಯವಾಗಿದೆ. ಇದೇ ರೀತಿ ಮುಂದುವರಿದರೆ ಎರಡು ಬಾರಿ ದಂಡ ಹಾಕಲಾಗುತ್ತದೆ. ಮತ್ತೆ ಮುಂದುವರಿದರೆ ಹಸುಗಳನ್ನು ವಶಕ್ಕೆಪಡೆದು ಹರಾಜು ಹಾಕಲಾಗುವುದು ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್‌ ಎಚ್ಚರಿಸಿದ್ದಾರೆ.

” ಮಾಲೀಕರಿಗೆ ಎಷ್ಟು ಹೇಳಿದರೂ ದನಗಳನ್ನು ರಸ್ತೆಯಲ್ಲಿ ಬಿಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಪರಿಶೀಲಿಸಿ ತಕ್ಷಣ ಪಾಲಿಕೆ ತಂಡ ಜಾನುವಾರುಗಳನ್ನು ಸಾಗಿಸಿ ದೊಡ್ಡಿಯಲ್ಲಿ ಬಿಡುತ್ತಾರೆ. ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು.”

-ಡಾ.ವೆಂಕಟೇಶ್, ಆರೋಗ್ಯಾಧಿಕಾರಿ

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

11 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

12 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

13 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

18 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

18 hours ago