Andolana originals

ತರಾಹೇವಾರಿ ಮಳಿಗೆಗಳ ಮಿಳಿತ; ಕಾರಂಜಿಯ ಸೆಳೆತ

ಕೆ.ಪಿ.ಮದನ್

ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಬೇಕಿದ್ದ ದಸರಾ ವಸ್ತು ಪ್ರದರ್ಶನದ ಆವರಣ ಜನರಿಂದ ಕಿಕ್ಕಿರಿದು ತುಂಬಿತ್ತು. ಸಿಎಂ ಸಿದ್ದರಾಮಯ್ಯ ಅವರು ವಸ್ತುಪ್ರದರ್ಶನದ ಆವರಣಕ್ಕೆ ಆಗಮಿಸುತ್ತಿದಂತೆ ವಿವಿಧ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು.

ಭಾರತೀಯ ನೌಕಪಡೆಯ ಐಎನ್‌ಎಸ್ ಕದಂಬ ಸೇನಾ ಸಿಬ್ಬಂದಿ ಬ್ಯಾಂಡ್ ನುಡಿಸುವ ಮೂಲಕ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಲ್ಲಿಸಿದರು. ನಂತರ ವಸ್ತುಪ್ರದರ್ಶನದ ಒಳ ಆವರಣ ಪ್ರವೇಶಿಸಿದ ಸಿಎಂ ೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೪೨೫ ಅಡಿ ಉದ್ದ ಹಾಗೂ ೪೫ ಅಡಿ ಅಗಲದ ಬೃಹತ್ ಸಂಗೀತ ಕಾರಂಜಿಗೆ ಚಾಲನೆ ನೀಡಿದರು. ನಂತರ ಬೇಲೂರು-ಹಳೆಬೀಡು ಶೈಲಿಯಲ್ಲಿ ನಿರ್ಮಾಣ ಮಾಡಿರುವ ಮಳಿಗೆ ಇದರೊಂದಿಗೆ ಸ್ಥಾಪಿಸಿರುವ ೧೫೩ ಮಳಿಗೆಗಳನ್ನು ಮುಖ್ಯಮಂತ್ರಿಗಳು ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಮುಖ್ಯ ಮಂತ್ರಿಗಳು ಸಚಿವರು ಹಾಗೂ ರಾಜಕೀಯ ಗಣ್ಯರೊಂದಿಗೆ ಬ್ಯಾಟರಿ ಚಾಲಿತ ವಾಹನದಲ್ಲಿ ಕುಳಿತು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಸಂಸದ ರಾದ ಸುನಿಲ್ ಬೋಸ್, ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಇನ್ನಿತರರು ಹಾಜರಿದ್ದರು. ಮೊದಲ ದಿನವೇ ಸಾವಿರಾರು ಮಂದಿ ವಸ್ತು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಒಳ ಆವರಣದಲ್ಲಿ ವಿಶೇಷ ಆಕರ್ಷಣೆ: 

ಮೈಸೂರು: ಈ ಬಾರಿಯ ವಸ್ತುಪ್ರದರ್ಶನದಲ್ಲಿ ೧೫೩ ವಾಣಿಜ್ಯ ಮಳಿಗೆಗಳು, ೪೦ ಆಹಾರ ಮಳಿಗೆಗಳು ಹಾಗೂ ೪೫ ವಿವಿಧ ರೀತಿಯ ಅಮ್ಯೂಸ್‌ಮೆಂಟ್ ಆಟಿಕೆಗಳು. ದಸರಾ ವಸ್ತುಪ್ರದರ್ಶನದಲ್ಲಿ ಮೊದಲ ಬಾರಿಗೆ ಭಾರತೀಯ ವಾಯು ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪಿಸಿರುವ ಮಳಿಗೆಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಅಲ್ಲದೇ ವಸ್ತುಪ್ರದರ್ಶನದ ಒಳ ಆವರಣದಲ್ಲಿ ವೈಫೈ ಆಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

30 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

40 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

1 hour ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

1 hour ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

2 hours ago