Andolana originals

ತರಾಹೇವಾರಿ ಮಳಿಗೆಗಳ ಮಿಳಿತ; ಕಾರಂಜಿಯ ಸೆಳೆತ

ಕೆ.ಪಿ.ಮದನ್

ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಬೇಕಿದ್ದ ದಸರಾ ವಸ್ತು ಪ್ರದರ್ಶನದ ಆವರಣ ಜನರಿಂದ ಕಿಕ್ಕಿರಿದು ತುಂಬಿತ್ತು. ಸಿಎಂ ಸಿದ್ದರಾಮಯ್ಯ ಅವರು ವಸ್ತುಪ್ರದರ್ಶನದ ಆವರಣಕ್ಕೆ ಆಗಮಿಸುತ್ತಿದಂತೆ ವಿವಿಧ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು.

ಭಾರತೀಯ ನೌಕಪಡೆಯ ಐಎನ್‌ಎಸ್ ಕದಂಬ ಸೇನಾ ಸಿಬ್ಬಂದಿ ಬ್ಯಾಂಡ್ ನುಡಿಸುವ ಮೂಲಕ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಲ್ಲಿಸಿದರು. ನಂತರ ವಸ್ತುಪ್ರದರ್ಶನದ ಒಳ ಆವರಣ ಪ್ರವೇಶಿಸಿದ ಸಿಎಂ ೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೪೨೫ ಅಡಿ ಉದ್ದ ಹಾಗೂ ೪೫ ಅಡಿ ಅಗಲದ ಬೃಹತ್ ಸಂಗೀತ ಕಾರಂಜಿಗೆ ಚಾಲನೆ ನೀಡಿದರು. ನಂತರ ಬೇಲೂರು-ಹಳೆಬೀಡು ಶೈಲಿಯಲ್ಲಿ ನಿರ್ಮಾಣ ಮಾಡಿರುವ ಮಳಿಗೆ ಇದರೊಂದಿಗೆ ಸ್ಥಾಪಿಸಿರುವ ೧೫೩ ಮಳಿಗೆಗಳನ್ನು ಮುಖ್ಯಮಂತ್ರಿಗಳು ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಮುಖ್ಯ ಮಂತ್ರಿಗಳು ಸಚಿವರು ಹಾಗೂ ರಾಜಕೀಯ ಗಣ್ಯರೊಂದಿಗೆ ಬ್ಯಾಟರಿ ಚಾಲಿತ ವಾಹನದಲ್ಲಿ ಕುಳಿತು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಸಂಸದ ರಾದ ಸುನಿಲ್ ಬೋಸ್, ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಇನ್ನಿತರರು ಹಾಜರಿದ್ದರು. ಮೊದಲ ದಿನವೇ ಸಾವಿರಾರು ಮಂದಿ ವಸ್ತು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಒಳ ಆವರಣದಲ್ಲಿ ವಿಶೇಷ ಆಕರ್ಷಣೆ: 

ಮೈಸೂರು: ಈ ಬಾರಿಯ ವಸ್ತುಪ್ರದರ್ಶನದಲ್ಲಿ ೧೫೩ ವಾಣಿಜ್ಯ ಮಳಿಗೆಗಳು, ೪೦ ಆಹಾರ ಮಳಿಗೆಗಳು ಹಾಗೂ ೪೫ ವಿವಿಧ ರೀತಿಯ ಅಮ್ಯೂಸ್‌ಮೆಂಟ್ ಆಟಿಕೆಗಳು. ದಸರಾ ವಸ್ತುಪ್ರದರ್ಶನದಲ್ಲಿ ಮೊದಲ ಬಾರಿಗೆ ಭಾರತೀಯ ವಾಯು ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪಿಸಿರುವ ಮಳಿಗೆಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಅಲ್ಲದೇ ವಸ್ತುಪ್ರದರ್ಶನದ ಒಳ ಆವರಣದಲ್ಲಿ ವೈಫೈ ಆಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

20 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

20 hours ago