Andolana originals

ತರಾಹೇವಾರಿ ಮಳಿಗೆಗಳ ಮಿಳಿತ; ಕಾರಂಜಿಯ ಸೆಳೆತ

ಕೆ.ಪಿ.ಮದನ್

ದಸರಾ ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 

ಮೈಸೂರು: ಬಣ್ಣದ ಬೆಳಕಿನಲ್ಲಿ ಕಾರಂಜಿಯ ರಂಗು, ದೀಪಾಲಂಕಾರದ ಮೆರುಗು, ಇದರ ನಡುವೆ ತರಾಹೇವಾರಿ ಮಳಿಗೆಗಳು ವಸ್ತು ಪ್ರದರ್ಶನ ಆವರಣಕ್ಕೆ ಜನರನ್ನು ಕೈಬೀಸಿ ಕರೆಯುತ್ತಿದ್ದವು. ವಸ್ತು ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಳ್ಳಬೇಕಿದ್ದ ದಸರಾ ವಸ್ತು ಪ್ರದರ್ಶನದ ಆವರಣ ಜನರಿಂದ ಕಿಕ್ಕಿರಿದು ತುಂಬಿತ್ತು. ಸಿಎಂ ಸಿದ್ದರಾಮಯ್ಯ ಅವರು ವಸ್ತುಪ್ರದರ್ಶನದ ಆವರಣಕ್ಕೆ ಆಗಮಿಸುತ್ತಿದಂತೆ ವಿವಿಧ ಕಲಾ ತಂಡಗಳ ಮೂಲಕ ಸ್ವಾಗತಿಸಲಾಯಿತು.

ಭಾರತೀಯ ನೌಕಪಡೆಯ ಐಎನ್‌ಎಸ್ ಕದಂಬ ಸೇನಾ ಸಿಬ್ಬಂದಿ ಬ್ಯಾಂಡ್ ನುಡಿಸುವ ಮೂಲಕ ಮುಖ್ಯಮಂತ್ರಿಗಳಿಗೆ ವಿಶೇಷ ಗೌರವ ಸಲ್ಲಿಸಿದರು. ನಂತರ ವಸ್ತುಪ್ರದರ್ಶನದ ಒಳ ಆವರಣ ಪ್ರವೇಶಿಸಿದ ಸಿಎಂ ೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ೪೨೫ ಅಡಿ ಉದ್ದ ಹಾಗೂ ೪೫ ಅಡಿ ಅಗಲದ ಬೃಹತ್ ಸಂಗೀತ ಕಾರಂಜಿಗೆ ಚಾಲನೆ ನೀಡಿದರು. ನಂತರ ಬೇಲೂರು-ಹಳೆಬೀಡು ಶೈಲಿಯಲ್ಲಿ ನಿರ್ಮಾಣ ಮಾಡಿರುವ ಮಳಿಗೆ ಇದರೊಂದಿಗೆ ಸ್ಥಾಪಿಸಿರುವ ೧೫೩ ಮಳಿಗೆಗಳನ್ನು ಮುಖ್ಯಮಂತ್ರಿಗಳು ಟೇಪ್ ಕತ್ತರಿಸುವ ಮೂಲಕ ಉದ್ಘಾಟನೆ ಮಾಡಿದರು. ನಂತರ ಮುಖ್ಯ ಮಂತ್ರಿಗಳು ಸಚಿವರು ಹಾಗೂ ರಾಜಕೀಯ ಗಣ್ಯರೊಂದಿಗೆ ಬ್ಯಾಟರಿ ಚಾಲಿತ ವಾಹನದಲ್ಲಿ ಕುಳಿತು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಹೆಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಅನಿಲ್ ಚಿಕ್ಕಮಾದು, ಎ.ಆರ್.ಕೃಷ್ಣಮೂರ್ತಿ, ಸಂಸದ ರಾದ ಸುನಿಲ್ ಬೋಸ್, ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್ ಇನ್ನಿತರರು ಹಾಜರಿದ್ದರು. ಮೊದಲ ದಿನವೇ ಸಾವಿರಾರು ಮಂದಿ ವಸ್ತು ಪ್ರದರ್ಶನವನ್ನು ಕಣ್ತುಂಬಿಕೊಂಡರು.

ಒಳ ಆವರಣದಲ್ಲಿ ವಿಶೇಷ ಆಕರ್ಷಣೆ: 

ಮೈಸೂರು: ಈ ಬಾರಿಯ ವಸ್ತುಪ್ರದರ್ಶನದಲ್ಲಿ ೧೫೩ ವಾಣಿಜ್ಯ ಮಳಿಗೆಗಳು, ೪೦ ಆಹಾರ ಮಳಿಗೆಗಳು ಹಾಗೂ ೪೫ ವಿವಿಧ ರೀತಿಯ ಅಮ್ಯೂಸ್‌ಮೆಂಟ್ ಆಟಿಕೆಗಳು. ದಸರಾ ವಸ್ತುಪ್ರದರ್ಶನದಲ್ಲಿ ಮೊದಲ ಬಾರಿಗೆ ಭಾರತೀಯ ವಾಯು ಸೇನೆ, ಭಾರತೀಯ ನೌಕಾಪಡೆ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ಥಾಪಿಸಿರುವ ಮಳಿಗೆಗಳು ಪ್ರವಾಸಿಗರನ್ನು ಸೆಳೆಯುತ್ತಿದೆ. ಅಲ್ಲದೇ ವಸ್ತುಪ್ರದರ್ಶನದ ಒಳ ಆವರಣದಲ್ಲಿ ವೈಫೈ ಆಳವಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

7 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

7 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

8 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

8 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

8 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

9 hours ago