Andolana originals

ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಪಾಲಿಕೆ!!

ದಿನೇಶ್‌ಕುಮಾರ್ ಹೆಚ್.ಎಸ್.

ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು

ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ಗಾದೆ ನಗರಪಾಲಿಕೆಯ ಅಧಿಕಾರಿಗಳಿಗೆ ಅಕ್ಷರಶಃ ಅನ್ವಯಿಸುತ್ತದೆ. ಏಕೆಂದರೆ, ಉದ್ಯಾನವನ ನಿರ್ಮಾಣಕ್ಕೂ ಮುಂಚಿತವಾಗಿ ವ್ಯಾಯಾಮ ಪರಿಕರಗಳನ್ನು ಅಳವಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸಿದ್ದಾರೆ.

ಇದು ನಗರಪಾಲಿಕೆಯ ವಲಯ ಕಚೇರಿ ಇಂಜಿನಿಯರುಗಳ ಬುದ್ಧಿವತಿಂತಿಕೆಯ ಪ್ರದರ್ಶನ ಎಂದೇ ಹೇಳಬಹುದು. ಉದ್ಯಾನವನ ನಿರ್ಮಾಣವಾಗಿ ವರ್ಷಾನುಗಟ್ಟಲೆ ಕಾದರೂ ವ್ಯಾಯಾಮ ಪರಿಕರಗಳನ್ನು ಅಳವಡಿಸಲು ಜನರನ್ನು ಕಾಯಿಸುವ ಅಧಿಕಾರಿಗಳು ಇಲ್ಲಿ ಮಾತ್ರ ಹಾಳುಬಿದ್ದ ಜಾಗದಲ್ಲಿ ಪರಿಕರಗಳನ್ನು ಅಳವಡಿಸಿ ಅವುಗಳನ್ನು ತುಕ್ಕು ಹಿಡಿಸುತ್ತಿದ್ದಾರೆ.

ನಾವೀಗ ಹೇಳ ಹೊರಟಿರುವುದು ನಗರದ ಅಗ್ರಹಾರದ ತ್ಯಾಗರಾಜ ರಸ್ತೆಯಲ್ಲಿ ಇರುವ ಅಕ್ಕನ ಬಳಗ ಶಾಲೆ ಎದುರಿಗಿರುವ ಉದ್ಯಾನವನದ ಕಥೆ. ಆ ಜಾಗದಲ್ಲಿ ಈ ಹಿಂದೆ ವಲಯ ಕಚೇರಿ-೧ ಕಾರ್ಯ ನಿರ್ವಹಿಸುತ್ತಿತ್ತು.

ನಂತರ ಅಂದಿನ ನಗರಪಾಲಿಕೆ ಸದಸ್ಯರಾಗಿದ್ದ ಬಿ.ವಿ.ಮಂಜುನಾಥ್ ಅವರ ಆಸಕ್ತಿಯಿಂದಾಗಿ ಖಾಲಿ ಇದ್ದ ನಗರಪಾಲಿಕೆ ನಿವೇಶನದಲ್ಲಿ ಹೊಸದಾಗಿ ವಲಯ ಕಚೇರಿ ನಿರ್ಮಾಣವಾಯಿತು. ನಂತರ ಮೂರು ವರ್ಷಗಳ ಹಿಂದೆ ಅಲ್ಲಿದ್ದ ಕಚೇರಿಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿತ್ತು.

ಈ ಮೊದಲು ಉದ್ಯಾನವನಕ್ಕೆಂದು ಮೀಸಲಾಗಿದ್ದ ಜಾಗದಲ್ಲಿ ಕಚೇರಿ ಕಟ್ಟಡ ಕಟ್ಟಿದ್ದರಿಂದ ಅಧಿಕಾರಿಗಳು ಅಲ್ಲಿ ಉದ್ಯಾನವನ ನಿರ್ಮಾಣಕ್ಕೆ ಮುಂದಾದರು. ಸುಮಾರು ೫೦ ಲಕ್ಷ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣಕ್ಕೆ ತೀರ್ಮಾನಿಸಿ ಟೆಂಡರ್ ನೀಡಲಾಯಿತು. ಮೊದಮೊದಲು ಉದ್ಯಾನವನ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯಿತಾದರೂ, ನಂತರ ಅಲ್ಲಿನ ಕಾಮಗಾರಿ ನಿಂತೇ ಹೋಯಿತು. ಇದೀಗ ಅದು ಪಾಳುಬಿದ್ದ ಜಾಗವಾಗಿದೆ. ಜನರು ಅಲ್ಲಿ ಬೇಡದ ವಸ್ತುಗಳು ಹಾಗೂ ಕಸವನ್ನು ತಂದು ಸುರಿಯುತ್ತಿದ್ದಾರೆ.

ಇಷ್ಟಲ್ಲಾ ಆದರೂ ಅಧಿಕಾರಿಗಳು ಮಾತ್ರ ಅತ್ತ ತಿರುಗಿಯೂ ನೋಡಿಲ್ಲ. ನಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಹಾಳು ಬಿದ್ದ ಜಾಗದ ಸುತ್ತಲೂ ಇರುವ ಮನೆಯವರು ದಿನಬೆಳಗಾದರೆ, ಕಸ ಸುರಿಯುವವರನ್ನು ಎಚ್ಚರಿಸುವುದನ್ನೇ ಕಾಯಕ ಮಾಡಿಕೊಂಡು ಸುಸ್ತಾಗಿದ್ದಾರೆ. ಇದು ಒಂದೆಡೆಯಾದಲ್ಲಿ ಉದ್ಯಾನವನ ನಿರ್ಮಾಣ ಮಾಡದೆ ಅಲ್ಲಿ ವ್ಯಾಯಾಮ ಪರಿಕರಗಳನ್ನು ತಂದು ಅಳವಡಿಸಿದ್ದಾರೆ. ಇದು ನಿಜಕ್ಕೂ ನಗೆಪಾಟಲಿನ ವಿಚಾರ. ಓಡಾಡಲೂ ಆಗದ ಸ್ಥಳದಲ್ಲಿ ವ್ಯಾಯಾಮ ಪರಿಕರ ಗಳನ್ನು ಅಳವಡಿಸಿದಲ್ಲಿ ಜನರು ಅಲ್ಲಿಗೆ ಹೋಗಿ ವ್ಯಾಯಾಮ ಮಾಡುವುದುಂಟೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈಗಲಾದರೂ ನಗರಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಜನರ ತೆರಿಗೆ ಹಣವನ್ನು ಹೇಗೆಂದರೆ ಹಾಗೆ ದುರ್ಬಳಕೆ ಮಾಡಿಕೊಳ್ಳಬಹುದು ಎಂಬ ಮನೋಭಾವವನ್ನು ಬಿಡಬೇಕಿದೆ. ಆದಷ್ಟು ಶೀಘ್ರವಾಗಿ ಉದ್ಯಾನವನ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

” ಕೆಲ ತಾಂತ್ರಿಕ ಕಾರಣಗಳಿಂದಾಗಿ ಉದ್ಯಾನವನ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ. ಆದಷ್ಟು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು. ಅಲ್ಲಿಯವರೆಗೆ ವ್ಯಾಯಾಮ ಪರಿಕರಗಳು ಹಾಳಾಗದಂತೆ ಕ್ರಮ ವಹಿಸಲಾಗುವುದು.”

-ಎಸ್.ಎನ್.ಚೇತನ, ಅಭಿವೃದ್ಧಿ ಅಧಿಕಾರಿ ವಲಯ ಕಚೇರಿ ೧

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

4 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

7 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

7 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

8 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

11 hours ago