Andolana originals

ಧ್ರುವನಾರಾಯಣರನ್ನು ಇಂದಿಗೂ ಸ್ಮರಿಸುವ ಕೋಟೆಯ ಜನತೆ

ಮಂಜು ಕೋಟೆ

ಎಚ್.ಡಿ.ಕೋಟೆ: ಕ್ಷೇತ್ರದ ಜನಪ್ರತಿನಿಧಿಗಳು, ಜನಸಾಮಾನ್ಯರು ಹಾಗೂ ಕ್ಷೇತ್ರದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸಿದ್ದ ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ಅವರನ್ನು ಕಾರ್ಯಕರ್ತರು, ಮುಖಂಡರು, ಜನತೆ ಇಂದಿಗೂ ನೆನಪಿಸಿಕೊಳ್ಳುತ್ತಿದ್ದಾರೆ.

ಜು.೩೧ರಂದು ಧ್ರುವನಾರಾಯಣ ಅವರ ಜನ್ಮದಿನ. ೧೦ ವರ್ಷಗಳ ಕಾಲ ಸಂಸದರಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನೆ, ಹಿಂದುಳಿ ತಾಲ್ಲೂಕಿನ ಅಭಿವೃದ್ಧಿಗೆ ಒತ್ತು ನೀಡಿದ್ದ ಧ್ರುವ ಅವರು ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಚಿರಪರಿಚಿತರಾಗಿದ್ದರು. ಹೀಗಾಗಿ ಜನರು ಇಂದಿಗೂ ಅವರನ್ನು ಸ್ಮರಿಸುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಸಂಸದರಾಗಿ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದ ಧ್ರುವರವರು ಗಿರಿಜನರ, ದಲಿತರ, ಬಡವರ, ರೈತರ ಅಭಿವೃದ್ಧಿಗಾಗಿ ಅತೀ ಹೆಚ್ಚು ಅನುದಾನ ನೀಡಿ, ಹೊಸ ಯೋಜನೆಗಳನ್ನು ನೀಡಿ ಶಾಶ್ವತವಾದ ಕೆಲಸಗಳನ್ನು ಮಾಡಿದ್ದರಿಂದ ಜನಸಾಮಾನ್ಯರು ಪ್ರತಿವರ್ಷ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಆಡಳಿತ ಮತ್ತು ಕೆಲಸ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಅವರ ಪ್ರತಿ ಹುಟ್ಟುಹಬ್ಬಕ್ಕೂ ಕಾರ್ಯಕರ್ತರು ಮುಖಂಡರು, ಜನರು ಶುಭಾಶಯ ಕೋರಲು ಮತ್ತು ಆಚರಣೆ ಮಾಡಲು ಮುಂದಾದರೂ ಅವರು ಅದ್ಧೂರಿ ಆಚರಣೆಗೆ ಆದ್ಯತೆ ನೀಡದೆ, ದೇವಸ್ಥಾನ ಮತ್ತು ಅವರ ಜಮೀನಿಗೆ ತೆರಳಿ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದರು. ಹೊಸ ವರ್ಷದಲ್ಲಿ ತಾಲ್ಲೂಕಿಗೆ ಆಗಮಿಸಿ ಗಿರಿಜನರ ಹಾಡಿಗಳಿಗೆ ಭೇಟಿ ನೀಡಿ, ಅವರಿಗೆ ನೀಡಲಾಗಿದ್ದ ಶಾಲು, ಹಾರ, ಇನ್ನಿತರ ವಸ್ತುಗಳನ್ನು ಅವರಿಗೆ ನೀಡುತ್ತಿದ್ದರು. ನಂತರ ಅವರ ಜೊತೆ ಕೂತು ಊಟ ಮಾಡಿ ಹೊಸ ವರ್ಷ ಆಚರಣೆ ಮಾಡುತ್ತಿದ್ದರು ಇದು ಅವರ ನಡವಳಿಕೆ ಮತ್ತು ಸರಳತೆಗೆ ಸಾಕ್ಷಿಯಾಗಿತ್ತಲ್ಲದೆ, ಇತರ ರಾಜಕಾರಣಿಗಳಿಗೆ ಮಾದರಿಯಾಗಿತ್ತು.

ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಿ ಅತಿ ಕಿರಿಯ ವಯಸ್ಸಿನ ಅನಿಲ್ ಚಿಕ್ಕಮಾದು ಅವರನ್ನು ಶಾಸಕರನ್ನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈಗಲೂ ಅನಿಲ್ ಚಿಕ್ಕಮಾದು ಅವರು ತಮಗೆ ಮಾರ್ಗದರ್ಶನ ನೀಡಿದ ಧ್ರುವನಾರಾಯಣ ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಾರೆ

ನಂಜನಗೂಡಿನಲ್ಲೂ ಈಗ ಶಾಸಕರಾಗಿರುವ ದರ್ಶನ್ ಧ್ರುವನಾರಾಯಣ ಅವರಿಗೆ ಕ್ಷೇತ್ರದ ಜನತೆ ಮತ್ತು ಕಾರ್ಯಕರ್ತರು, ಮುಖಂಡರು ಅವರ ತಂದೆಗೆ ನೀಡುತ್ತಿದ್ದ ಎಲ್ಲಾ ಗೌರವ, ಅಭಿಮಾನ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಮಾಡಿದ ಕೆಲಸ ಕಾರ್ಯಗಳು, ಸರಳ ವ್ಯಕ್ತಿತ್ವದಿಂದಾಗಿ ಜನರು ಇಂದಿಗೂ ಅವರನ್ನು ಸ್ಮರಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

5 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

5 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

6 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

6 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

6 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

6 hours ago