Andolana originals

ಧ್ರುವನಾರಾಯಣರನ್ನು ಇಂದಿಗೂ ಸ್ಮರಿಸುವ ಕೋಟೆಯ ಜನತೆ

ಮಂಜು ಕೋಟೆ

ಎಚ್.ಡಿ.ಕೋಟೆ: ಕ್ಷೇತ್ರದ ಜನಪ್ರತಿನಿಧಿಗಳು, ಜನಸಾಮಾನ್ಯರು ಹಾಗೂ ಕ್ಷೇತ್ರದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸಿದ್ದ ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ಅವರನ್ನು ಕಾರ್ಯಕರ್ತರು, ಮುಖಂಡರು, ಜನತೆ ಇಂದಿಗೂ ನೆನಪಿಸಿಕೊಳ್ಳುತ್ತಿದ್ದಾರೆ.

ಜು.೩೧ರಂದು ಧ್ರುವನಾರಾಯಣ ಅವರ ಜನ್ಮದಿನ. ೧೦ ವರ್ಷಗಳ ಕಾಲ ಸಂಸದರಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ಪಕ್ಷದ ಸಂಘಟನೆ, ಹಿಂದುಳಿ ತಾಲ್ಲೂಕಿನ ಅಭಿವೃದ್ಧಿಗೆ ಒತ್ತು ನೀಡಿದ್ದ ಧ್ರುವ ಅವರು ಕ್ಷೇತ್ರದಲ್ಲಿ ಪ್ರತಿಯೊಬ್ಬರಿಗೂ ಚಿರಪರಿಚಿತರಾಗಿದ್ದರು. ಹೀಗಾಗಿ ಜನರು ಇಂದಿಗೂ ಅವರನ್ನು ಸ್ಮರಿಸುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಸಂಸದರಾಗಿ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದ ಧ್ರುವರವರು ಗಿರಿಜನರ, ದಲಿತರ, ಬಡವರ, ರೈತರ ಅಭಿವೃದ್ಧಿಗಾಗಿ ಅತೀ ಹೆಚ್ಚು ಅನುದಾನ ನೀಡಿ, ಹೊಸ ಯೋಜನೆಗಳನ್ನು ನೀಡಿ ಶಾಶ್ವತವಾದ ಕೆಲಸಗಳನ್ನು ಮಾಡಿದ್ದರಿಂದ ಜನಸಾಮಾನ್ಯರು ಪ್ರತಿವರ್ಷ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಆಡಳಿತ ಮತ್ತು ಕೆಲಸ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಅವರ ಪ್ರತಿ ಹುಟ್ಟುಹಬ್ಬಕ್ಕೂ ಕಾರ್ಯಕರ್ತರು ಮುಖಂಡರು, ಜನರು ಶುಭಾಶಯ ಕೋರಲು ಮತ್ತು ಆಚರಣೆ ಮಾಡಲು ಮುಂದಾದರೂ ಅವರು ಅದ್ಧೂರಿ ಆಚರಣೆಗೆ ಆದ್ಯತೆ ನೀಡದೆ, ದೇವಸ್ಥಾನ ಮತ್ತು ಅವರ ಜಮೀನಿಗೆ ತೆರಳಿ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದರು. ಹೊಸ ವರ್ಷದಲ್ಲಿ ತಾಲ್ಲೂಕಿಗೆ ಆಗಮಿಸಿ ಗಿರಿಜನರ ಹಾಡಿಗಳಿಗೆ ಭೇಟಿ ನೀಡಿ, ಅವರಿಗೆ ನೀಡಲಾಗಿದ್ದ ಶಾಲು, ಹಾರ, ಇನ್ನಿತರ ವಸ್ತುಗಳನ್ನು ಅವರಿಗೆ ನೀಡುತ್ತಿದ್ದರು. ನಂತರ ಅವರ ಜೊತೆ ಕೂತು ಊಟ ಮಾಡಿ ಹೊಸ ವರ್ಷ ಆಚರಣೆ ಮಾಡುತ್ತಿದ್ದರು ಇದು ಅವರ ನಡವಳಿಕೆ ಮತ್ತು ಸರಳತೆಗೆ ಸಾಕ್ಷಿಯಾಗಿತ್ತಲ್ಲದೆ, ಇತರ ರಾಜಕಾರಣಿಗಳಿಗೆ ಮಾದರಿಯಾಗಿತ್ತು.

ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಿ ಅತಿ ಕಿರಿಯ ವಯಸ್ಸಿನ ಅನಿಲ್ ಚಿಕ್ಕಮಾದು ಅವರನ್ನು ಶಾಸಕರನ್ನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈಗಲೂ ಅನಿಲ್ ಚಿಕ್ಕಮಾದು ಅವರು ತಮಗೆ ಮಾರ್ಗದರ್ಶನ ನೀಡಿದ ಧ್ರುವನಾರಾಯಣ ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಾರೆ

ನಂಜನಗೂಡಿನಲ್ಲೂ ಈಗ ಶಾಸಕರಾಗಿರುವ ದರ್ಶನ್ ಧ್ರುವನಾರಾಯಣ ಅವರಿಗೆ ಕ್ಷೇತ್ರದ ಜನತೆ ಮತ್ತು ಕಾರ್ಯಕರ್ತರು, ಮುಖಂಡರು ಅವರ ತಂದೆಗೆ ನೀಡುತ್ತಿದ್ದ ಎಲ್ಲಾ ಗೌರವ, ಅಭಿಮಾನ ನೀಡುತ್ತಿದ್ದಾರೆ. ಒಟ್ಟಿನಲ್ಲಿ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಮಾಡಿದ ಕೆಲಸ ಕಾರ್ಯಗಳು, ಸರಳ ವ್ಯಕ್ತಿತ್ವದಿಂದಾಗಿ ಜನರು ಇಂದಿಗೂ ಅವರನ್ನು ಸ್ಮರಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

12 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago