ಎಂ.ಬಿ.ರಂಗಸ್ವಾಮಿ
ಮೂಗೂರು: ೩ ವರ್ಷಗಳಿಂದ ಸ್ಥಗಿತಗೊಂಡಿರುವ ತೆಪ್ಪೋತ್ಸವ
ಮೂಗೂರು: ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದಲ್ಲಿ ಕೋಟ್ಯಂತರ ರೂ. ವ್ಯಯಿಸಿ ನೂತನ ಕಲ್ಯಾಣಿ ನಿರ್ಮಾಣ ಮಾಡಿದ್ದರೂ ೩ ವರ್ಷಗಳಿಂದ ತೆಪ್ಪೋತ್ಸವ ನಡೆಯದೆ ಭಕ್ತರಲ್ಲಿ ನಿರಾಸೆ ಉಂಟಾಗಿದೆ.
ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮನವರ ದೇವಾಲಯದ ಕಲ್ಯಾಣಿಯು ಪುರಾತನ ಕಾಲದಲ್ಲಿ ನಿರ್ಮಿಸಲ್ಪಟ್ಟಿದ್ದು, ಅನಾದಿ ಕಾಲದಿಂದಲೂ ಜಾತ್ರಾ ಮಹೋತ್ಸವದ ವೇಳೆ ಅಮ್ಮನವರ ತೆಪ್ಪೋತ್ಸವವನ್ನು ಬಹಳ ಸಡಗರ ಸಂಭ್ರಮ ದಿಂದ ನಡೆಸಿಕೊಂಡು ಬರಲಾಗುತ್ತಿತ್ತು.
ನಂತರದ ದಿನಗಳಲ್ಲಿ ಕೊಳದ ಅಂದವನ್ನು ಹೆಚ್ಚಿಸುವ ಸಲುವಾಗಿ ಹಳೆಯ ಕೊಳವನ್ನು ತೆರವುಗೊಳಿಸಿ ವಿನೂತನ ರೀತಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ನೂತನ ಕಲ್ಯಾ ಣಿಯ ಕಾಮಗಾರಿಯನ್ನು ಕೈಗೊಳ್ಳಲಾಯಿತು. ಆದರೆ, ಕಲ್ಯಾಣಿ ಪರಿಪೂರ್ಣತೆ ಕಾಣದೇ ೩ ವರ್ಷಗಳಿಂದ ತೆಪ್ಪೋತ್ಸವ ನಡೆಯದೆ ಸ್ಥಗಿತಗೊಂಡಿರುವುದು ಭಕ್ತರಲ್ಲಿ ಅಸಮಾಧಾನ ಮೂಡಿಸಿದೆ. ಜತೆಗೆ ಈ ಬಾರಿಯೂ ಜಾತ್ರೆಯಲ್ಲಿ ತೆಪ್ಪೋತ್ಸವ ನಡೆಯುವ ಬಗ್ಗೆ ಅನುಮಾನ ಮೂಡಿಸಿದೆ.
ಈಗ ನಿರ್ಮಿಸಿರುವ ಕೊಳ ಆಳವಾಗಿದ್ದು, ತೆಪ್ಪ ಓಡಿಸಲು ಅನುಕೂಲವಾಗಿಲ್ಲ ಮತ್ತು ಜನರ ಸುರಕ್ಷತೆ ದೃಷ್ಟಿಯಿಂದ ತೆಪ್ಪೋತ್ಸವ ನಡೆಯುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ.
ಜಾತ್ರಾ ಮಹೋತ್ಸವದ ಸರದಿಯಲ್ಲಿ ಪಾಲ್ಗೊಳ್ಳುವ ಸಮುದಾಯದ ಮುಖ್ಯಸ್ಥ ರಲ್ಲಿ ಸಮನ್ವಯತೆ ಇಲ್ಲದಿರುವುದು ಮತ್ತು ಗ್ರಾಮದ ಮುಖಂಡರಲ್ಲಿನ ಇಚ್ಛಾಶಕ್ತಿಯ ಕೊರತೆಯೂ ಕೂಡ ತೆಪ್ಪೋತ್ಸವದ ಸ್ಥಗಿತಕ್ಕೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಇನ್ನಾದರೂ ದೇಗುಲದ ನೂತನ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನಡೆಯಲು ತಾಲ್ಲೂಕು ಆಡಳಿತ, ಮುಜರಾಯಿ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕೆಂಬುದು ಗ್ರಾಮಸ್ಥರ ಮನವಿಯಾಗಿದೆ.
” ನುರಿತ ತೆಪ್ಪ ಓಡಿಸುವವರನ್ನು ಸ್ಥಳಕ್ಕೆ ಕರೆಸಿ ಅವರ ಸಲಹೆಯಂತೆ ಗ್ರಾಮದ ಮುಖಂಡರು, ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿ ತೆಪ್ಪೋತ್ಸವ ನಡೆಸುವ ಬಗ್ಗೆ ಜಾತ್ರೆಗೂ ಮುನ್ನವೇ ತೀರ್ಮಾನ ಮಾಡಲಾಗುವುದು.”
-ಎಂ.ಬಿ.ಸಾಗರ್, ದೇವಾಲಯದ ಪಾರುಪತ್ತೆಗಾರ್, ಮೂಗೂರು.
” ಶ್ರೀ ತ್ರಿಪುರ ಸುಂದರಿ ಅಮ್ಮನವರ ಕಲ್ಯಾಣಿ ಬಗ್ಗೆ ಪೂರ್ಣ ಮಾಹಿತಿ ಲಭ್ಯವಿಲ್ಲ. ಕಚೇರಿಯ ಗುಮಾಸ್ತರಿಂದ ಮಾಹಿತಿ ಪಡೆದು ಗ್ರಾಮಸ್ಥರ ಸಮ್ಮುಖದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.”
-ಸುರೇಶಾಚಾರ್, ತಹಸಿಲ್ದಾರ್, ತಿ.ನರಸೀಪುರ.
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…