Andolana originals

‘ಮುಟ್ಟು’ ಎಂಬ ಜಗದ ಶಕ್ತಿ

• ಶಭಾನ ಮೈಸೂರು

ಹೆಣ್ಣಿನ ದೇಹದಲ್ಲಿ ಅತ್ಯಂತ ಸಹಜವಾಗಿ ನಡೆಯುವ ಮುಟ್ಟಿನ ಕ್ರಿಯೆಯನ್ನು ಕೀಳುಗೊಳಿಸಿ, ಆಕೆಯನ್ನು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಬಂಧಿಸಿಡುವ ಪ್ರಯತ್ನ ಶತಮಾನಗಳಿಂದಲೂ ನಡೆದುಬಂದಿದೆ. ಮುಟ್ಟಿನ ಕಾರಣಕ್ಕೆ ಆಕೆಯನ್ನು ಮನೆ ಊರಿನಿಂದ ದೂರವಿರಿಸುವ ಅಮಾನವೀಯ ಪದ್ಧತಿ ಬುಡಕಟ್ಟು ಜನಾಂಗಗಳಲ್ಲಿ ಇಂದಿಗೂ ಜೀವಂತವಿರುವುದು ಆತಂಕ ಸೃಷ್ಟಿಸುತ್ತದೆ.

ಆಧುನೀಕರಣಗೊಂಡ ಇಂದಿನ ಜಗತ್ತು ಇಂತಹ ಆಚರಣೆಗಳಿಂದೇನೂ ಹೊರತಲ್ಲ. ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ಮುಟ್ಟಾದ ಹೆಣ್ಣನ್ನು ಅಸ್ಪೃಶ್ಯರಂತೆ ಕಾಣುವ, ಧಾರ್ಮಿಕ ವಿಧಿವಿಧಾನಗಳಿಂದ ಅವಳನ್ನು ದೂರವಿರಿಸುವ ಸರ್ವ ಪ್ರಯತ್ನಗಳೂ ನಡೆದಿವೆ. ಅಷ್ಟೆಯಲ್ಲ ತಿಂಗಳ ಋತುಚಕ್ರದ ನೆಪವೊಡ್ಡಿ, ಹೆಣ್ಣಿಗೆ ಸಿಗಬೇಕಾದ ಅಧಿಕಾರವನ್ನು ಕಸಿಯುವ ಗಂಡಿನ ಹುನ್ನಾರವೂ ಇಲ್ಲಿ ಅಡಗಿದೆ. ಇದನ್ನು ಲಿಂಗರಾಜಕಾರಣದ ಭಾಗವಾಗಿ ಅರ್ಥೈಸಿಕೊಳ್ಳಬಹುದು.

ಎಮಿಲಿ ಡರ್ಕೀ೦ ‘ಮನುಷ್ಯರಲ್ಲಿ ಧರ್ಮ ಹುಟ್ಟಿದ್ದೇ ಮುಟ್ಟಿನ ದಿಸೆಯಿಂದ ಎನ್ನುತ್ತಾನೆ. ಆದರಿಂದು ಅದೇ ಮುಟ್ಟಿನ ಕಾರಣಕ್ಕೆ ಹೆಣ್ಣು ಪ್ರತಿಯೊಂದು ಹಂತದಲ್ಲೂ ನಿಯಂತ್ರಣಕ್ಕೊಳಪಡುತ್ತಿದ್ದಾಳೆ. ಇದನ್ನು ವಚನಕಾರರಾದಿಯಾಗಿ ಅನೇಕ ತತ್ವ ಪದಕಾರರು ವಿರೋಧಿಸಿದರು. ಮುಟ್ಟು ಹೆಣ್ಣಿನ ಶಕ್ತಿಕೇಂದ್ರವೆಂದು ಪ್ರತಿಪಾದಿಸಿದರು. ಮುಟ್ಟು ದೈಹಿಕ ಕ್ರಿಯೆಗಳಲ್ಲೊಂದು ಎಂದು ಹೆಣ್ಣೆ ಸ್ವತಃ ಅರಿತ ಪಯಣಕ್ಕೆ ಶತಮಾನಗಳವರೆಗಿನ ಹೆಜ್ಜೆ ಗುರುತಿದೆ. ತನ್ನ ಸುತ್ತಲಿನವರಿಗೂ ‘ಆ’ ಅರಿವನ್ನು ದಾಟಿಸುವುದಕ್ಕೆ ಇಂದು ಅನೇಕ ದಾರಿಗಳನ್ನು ಆಕೆ ಕಂಡುಕೊಳ್ಳುತ್ತಿದ್ದಾಳೆ. ಕೇಳು ಕಿಶೋರಿ’ ಶಿಬಿರಗಳಂತಹ ಸಾಮಾಜಿಕ ಮಾದರಿ ಒಂದು ಕಡೆಯಾದರೆ, ಕಾವ್ಯ, ಕಥೆಯಂತಹ ಸಾಹಿತ್ಯಕ ಮಾದರಿ ಇನ್ನೊಂದು ಬಗೆಯದ್ದು. ತಿಂಗಳ ಯಾತನೆಯನ್ನು ಹೇಳಿಕೊಳ್ಳುವುದಕ್ಕೆ ಮುಜುಗರಪಡುತ್ತಿದ್ದ ಕಾಲ ಸರಿದು, ಜಗತ್ತಿಗೆ ಕೂಗಿ ಹೇಳುವಷ್ಟರ ಮಟ್ಟಿಗೆ ಬದಲಾಗಿದೆ. ಈ ಭಾವ ಅಭಿವ್ಯಕ್ತಗೊಳಿಸುವುದಕ್ಕೆ ಹೆಣ್ಣು ಮಾತ್ರವಲ್ಲದೆ ಮುಟ್ಟಿನ ನೋವನ್ನು ಕಂಡು, ಬರೆದ ಹೆಣ್ಣನದ ಮನಸ್ಸುಗಳೂ ಜೊತೆಯಾಗಿವೆ.

‘ನಾನು ಮುಟ್ಟಾದ ದಿನ’ ಕವಿತೆಯಲ್ಲಿ ತೊಡೆಯ ಸಂಧಿಯಲಿಷ್ಟು ಬಟ್ಟೆ ತುರುಕಿ ಶಾಲೆಗೆ ಓಡಿದವಳ ಕುಂಟುನಡಿಗೆ’ಯ ಅನುಭವವನ್ನು ಕಟ್ಟಿಕೊಡುವ ಸುಧಾ ಆಡುಕಳ ಅವರು ‘ಮುಟ್ಟಾಗುವವರ ಮುಟ್ಟೆನೆಂದ ದೇವರ ಮೇಲೆ ಸಿಟ್ಟುಗೊಳ್ಳುತ್ತಾರೆ. ಅದೇ ಮುಟ್ಟಿನ ಬಿಲಕ್ಕೆ ದುರ್ಬೀನು ಇಡುವ ಕ್ರೌರ್ಯವನ್ನು ಸಹಿಸದ ಕವಯಿತ್ರಿ, ಮುಟ್ಟಿಲ್ಲದೇ ಹುಟ್ಟಿಲ್ಲವೆಂದರಿಯದ ಮುಗ್ದಾಳರನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ.

ಸಮಕಾಲೀನ ಕವಯಿತ್ರಿ ಸಾಕಮ್ಮ ಕರಿಗದ್ದೆ, ಋತುಸ್ರಾವದಲ್ಲಿ ಬಳಲಿ, ನೊಂದಾಗ ಮುಟ್ಟು ಮುಟ್ಟೆಂದು ಹೀಯಾಳಿಸುವವರನ್ನು ‘ಗಂಡಿಗೆ ಸೋರುವ ವೀರ್ಯ ಏಕೆ ಮುಟ್ಟಾಗಲಿಲ್ಲ..?’ ಎಂದು ತೀಕ್ಷವಾಗಿ ಪ್ರಶ್ನಿಸುತ್ತಾರೆ. ತಮ್ಮ ನೆತ್ತರ ಕಥೆಯನ್ನು ಆಪ್ತವಾಗಿ ಬಿಚ್ಚಿಡುವ ಜಾಹಿಧಾ ಕೊಡಗು ಅವರಿಗೆ ಮುಟ್ಟು.. ಗರ್ಭದ ಬೆವರು..’ ಎಂಜಲು ನಾಲಿಗೆಯ ಬೆವರಿದ್ದ ಹಾಗೆ, ಮಳೆ ಇಳೆಗೆ ತಂಪು ಬೆವರಿದ್ದಂತೆ.

“ಅಮ್ಮನೆಂಬ ಶಕ್ತಿ’ಯನ್ನು ನೆನೆಯುವ ಎಚ್.ಎಸ್.ಅನುಪಮಾ ಅವಳ ಮುಟ್ಟು ನಿಲ್ಲಿಸಿದ್ದೇ ಆಗಿಬಿಟ್ಟೆ ನಾನು’ ಎನ್ನುತ್ತಾ ತಾಯಿಯ ಮುಟ್ಟಿನ ಮಹತ್ವವನ್ನು ತಿಳಿಸುತ್ತಾರೆ. ‘ಮುಟ್ಟಿಲ್ಲದೇ ಹುಟ್ಟಿದವನೇ!? ಮುಟ್ಟು ನಿಂತವಳ ಬಸಿರ ಬಿಸುಪ ಮುಟ್ಟು ಎಂದು ಸವಾಲಿಡುತ್ತಾರೆ ಸಬಿತಾ ಬನ್ನಾಡಿ. ಇದೇ ಆಕ್ರೋಶ ಭರಿತ ಧ್ವನಿಯಲ್ಲಿ ಕವಿತೆ ಬರೆಯುವ ಯಮುನಾ ಗಾಂವರ್, ….ಉಚ್ಚೆ ಕಕ್ಕಸುಗಳಲ್ಲೇ ಈಜುತ್ತ! ಆ ಮುಟ್ಟು ಹೊರಹೋಗಲು ಬಿಡದೇ ಒಂಬತ್ತು ತಿಂಗಳು ಕಟ್ಟೆ ಕಟ್ಟಿದ್ದಿರಲ್ಲ, ನಂತರವೇ ತಾನೆ ಮುಟ್ಟಿನ ಮನೆಯೊಳಗೆ ಮೊದಲ ಬಾರಿಗೆ ಗೃಹಭಂಗಮಾಡಿ, ಯೋನಿದ್ವಾರವ ಹರಿದು ಹೊರಬಂದಿದ್ದು!?” ಎಂದು ತಮ್ಮ ಹುಟ್ಟಿಗೆ ಕಾರಣವಾದ ಮುಟ್ಟಿನ ಮೇಲೆ ಅರ್ಥಾತ್ ಹೆಣ್ಣಿನ ಮೇಲೆ ಕೇಕೆ ಹಾಕಿ ಕುಪ್ಪಳಿಸುತ್ತಿರುವವರ ಮುಂದೆ ಕವಯಿತ್ರಿ ಈ ಪ್ರಶ್ನೆಯನ್ನಿಡುತ್ತಾರೆ. ಮುಟ್ಟನ್ನು ಪವಿತ್ರವೆನ್ನುತ್ತಾ ಹೆಣ್ಣನಿಗೆ ಜೊತೆಯಾಗುವ ಶ್ರೀನಿವಾಸ ಕಾರ್ಕಳ ಅವರು ‘ಮುಟ್ಟಿನಿಂದಲ್ಲವೇ ನಮ್ಮೆಲ್ಲರ ಹುಟ್ಟು’ ಎಂಬ ಜಗ ಒಪ್ಪಲೇಬೇಕಾದ ಸತ್ಯಸಂಗತಿಯನ್ನು ಮುಂದಿಡುತ್ತಾರೆ. ಮುಟ್ಟು ಕುರಿತು ಮಾತಾಡುವ ಈ ಎಲ್ಲ ದನಿ ಗಳ ಆಶಯ ಹೆಣ್ಣನ್ನು ಜೀವಪರವಾಗಿ ಕಾಣಬೇಕೆಂಬುದೇ ಆಗಿದೆ.
shabhanamys@gmail.com

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago