Andolana originals

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ, ಕನ್ನಡ ಜಾನಪದ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವು ಪುಸ್ತಕ ಪ್ರಿಯರನ್ನು ಆಕರ್ಷಿಸುತ್ತಿದೆ.

ಮೈಸೂರು ವಿವಿ ಪ್ರಸಾರಾಂಗದ ವತಿಯಿಂದ ಆಯೋಜಿಸಿರುವ ‘ಪ್ರಸಾರಾಂಗ ಪುಸ್ತಕೋತ್ಸವ-೨೦೨೫’ ವಿಶೇಷ ರಿಯಾಯಿತಿ ಪುಸ್ತಕ ಮಾರಾಟ ಮೇಳದಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಪುಸ್ತಕಗಳು ಮಾರಾ ಟವಾಗುತ್ತಿದ್ದು, ಸಾಹಿತ್ಯ ಪ್ರಿಯರನ್ನು ಕೈ ಬೀಸಿ ಕರೆಯುತ್ತಿದೆ. ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ, ಕನ್ನಡ ಜಾನಪದ ಪುಸ್ತಕಗಳು, ಕನ್ನಡ ವಿಶ್ವಕೋಶ, ಪಠ್ಯಕ್ರಮ ಮುಗಿದು ಹೋಗಿರುವ ಹಳೆಯ ಪದವಿ ಪೂರ್ವ ಹಾಗೂ ಪದವಿ ಪಠ್ಯ ಪುಸ್ತಕಗಳು, ಪ್ರಕಟಣೆಗೊಂಡು ೪೦ ವರ್ಷ ಮೀರಿದ ಪ್ರಸಾರಾಂಗದಲ್ಲಿ ಮಾರಾಟವಾಗುವ ಎಲ್ಲ ಪ್ರಕಟಣೆಗಳನ್ನು ಮಾರಾಟ ಮಾಡಲಾಗುತ್ತಿದೆ.

ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಹಳೆಯ ಪ್ರಕಟಣೆಗಳು, ಕನ್ನಡ ವಿಶ್ವಕೋಶ, ವಿಷಯ ವಿಶ್ವಕೋಶ ಹಾಗೂ ಎಪಿಗ್ರಾಫಿಯ ಕರ್ನಾಟಕದ ಎಲ್ಲ ಸಂಪುಟಗಳು, ಪ್ರಸಾರಾಂಗದ ದಾಸ್ತಾನಿನಲ್ಲಿರುವ ಎಲ್ಲ ಸಾಮಾನ್ಯ ಶೀರ್ಷಿಕೆಯ ಪುಸ್ತಕಗಳು, ಪ್ರಚಾರೋಪ ನ್ಯಾಸ ಮಾಲೆಯ ಪುಸ್ತಕಗಳು ಲಭ್ಯವಿದ್ದು, ಶೇ.೧೦ರಿಂದ ೭೫ರಷ್ಟು ರಿಯಾಯಿತಿ ದರದಲ್ಲಿ ದೊರೆಯಲಿವೆ. ಪ್ರಬುದ್ಧ ಕರ್ನಾಟಕ ತ್ರೈಮಾಸಿಕ ಪತ್ರಿಕೆಯ ಶತಮಾನೋತ್ಸವ ಸಂಚಿಕೆಗೆ ಮಾತ್ರ ಪ್ರಸಾರಾಂಗದಿಂದ ಪ್ರಕಟಗೊಂಡಿರುವ ಹಳೆಯ ನಿಯತಕಾಲಿಕೆಗಳಿಗೆ ವಿಶೇಷ ರಿಯಾಯಿತಿ ದೊರೆಯು ತ್ತಿವೆ. ಇದರೊಂದಿಗೆ ೮೭೦ ಶೀರ್ಷಿಕೆಯ ೯ ಲಕ್ಷಕ್ಕೂ ಹೆಚ್ಚು ವೈವಿಧ್ಯಮಯವಾದ ಪುಸ್ತಕಗಳನ್ನು ಭಾರೀ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ.

೫೦ ಸಾವಿರ ರೂ.ಗಳಿಗೆ ಪ್ರಸಾರಾಂಗದ ಎಲ್ಲ ಕೃತಿಗಳನ್ನು ಖರೀದಿಸಬಹುದಾಗಿದ್ದು, ರಿಯಾಯಿತಿ ಮಾರಾಟದಿಂದ ೨೫ಲಕ್ಷ ರೂ. ವ್ಯಾಪಾರದ ನಿರೀಕ್ಷೆಯನ್ನು ಪ್ರಸಾರಾಂಗ ಹೊಂದಿದೆ. ವಿಶ್ವಕೋಶಕ್ಕೆ ಶೇ.೫೦ ರಿಯಾಯಿತಿ: ಇದೇ ಮೊದಲ ಬಾರಿಗೆ ಕನ್ನಡ ವಿಶ್ವಕೋಶಕ್ಕೆ ಶೇ.೫೦ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ಶೇ.೧೦, ೨೫ಕ್ಕಿಂತ ಹೆಚ್ಚು ರಿಯಾಯಿತಿ ನೀಡಿರಲಿಲ್ಲ. ಇಂಗ್ಲಿಷ್-ಕನ್ನಡ ನಿಘಂಟು ಶೇ.೨೫, ಪ್ರಚಾರೋಪನ್ಯಾಸ ಮಾಲೆ ಶೇ.೧೦, ಪ್ರಬುದ್ಧ ಕರ್ನಾಟಕ ತ್ರೈಮಾಸಿಕ ಪತ್ರಿಕೆಯ ಶತಮಾನೋತ್ಸವ ಸಂಚಿಕೆಗೆ ಶೇ.೫೦ ರಿಯಾಯಿತಿ ನೀಡಲಾಗಿದೆ. ಪದವಿಪೂರ್ವ, ಪದವಿ ಹಳೆಯ ಪಠ್ಯ ಪುಸ್ತಕಗಳಿಗೆ ಶೇ.೭೫, ೪೦ ವರ್ಷ ಮೀರಿದ ಪ್ರಸಾರಾಂಗದಲ್ಲಿ ಮಾರಾಟವಾಗುವ ಎಲ್ಲ ಪ್ರಕಟಣೆಗಳಿಗೆ ಶೇ.೭೫, ಪ್ರಾಚ್ಯವಿದ್ಯಾ ಸಂಶೋಧನಾಲಯದ ಹಳೆಯ ಪ್ರಕಟಣೆ ಗಳಿಗೆ ಶೇ.೭೦, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಹಳೆಯ ಪ್ರಕಟಣೆಗಳಿಗೆ ಶೇ.೬೦, ಸಾಮಾನ್ಯ ಶೀರ್ಷಿಕೆಯ ಪುಸ್ತಕಗಳಿಗೆ ಶೇ.೫೦ ರಿಯಾಯಿತಿ ಇದೆ.

” ಡಿ.೧೫ ಮತ್ತು ೧೬ರಂದು ಪ್ರಸಾರಾಂಗದ ಆವರಣದಲ್ಲಿ ಪುಸ್ತಕೋತ್ಸವ ಹಮ್ಮಿಕೊಂಡಿದ್ದೇವೆ. ಮೌಲಿಕವಾದ ೮ರಿಂದ ೧೦ ಕೃತಿಗಳ ಕುರಿತು ವಿದ್ವಾಂಸರು ವಿಮರ್ಶೆ ಭಾಷಣ ಮಾಡಲಿದ್ದಾರೆ. ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದವ ರನ್ನು ಗೌರವಿಸಲಾಗುತ್ತದೆ. ಮೈಸೂರು ವಿವಿಗೆ ವರಮಾನ ತಂದುಕೊಡುವ ಏಕೈಕ ಸಂಸ್ಥೆ ಪ್ರಾಸಾರಾಂಗ. ವಾರ್ಷಿಕ ೬೦ರಿಂದ ೭೦ ಲಕ್ಷ ರೂ. ವಹಿವಾಟು ನಡೆಯುತ್ತದೆ.”

-ಪ್ರೊ.ನಂಜಯ್ಯ ಎಂ.ಹೊಂಗನೂರು, ನಿರ್ದೇಶಕರು, ಮೈಸೂರು ವಿವಿ ಪ್ರಸಾರಾಂಗ

ಡಿ.೩೧ ರವರೆಗೂ ಪುಸ್ತಕ ಮೇಳ ‘ಪ್ರಸಾರಾಂಗ:  ಪುಸ್ತಕೋತ್ಸವ-೨೦೨೫’ ವಿಶೇಷ ರಿಯಾಯಿತಿ ಪುಸ್ತಕ ಮಾರಾಟ ಮೇಳವು ಡಿ.೩೧ರವರೆಗೆ ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆವರೆಗೆ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

7 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

8 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

8 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

8 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

8 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

9 hours ago