Andolana originals

ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಇಂಬು

ವಿ. ಪಿ. ನಿರಂಜನಾರಾಧ್ಯ, ಅಭಿವೃದ್ಧಿ ಶಿಕ್ಷಣ ತಜ್ಞ
ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಸಾಧಿಸುವತ್ತ ದಮನಿತ ಸಮುದಾಯ ಗಳಿಗೆ ನ್ಯಾಯೋಚಿತ ಅವಕಾಶ ಒದಗಿಸಬಲ್ಲ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲವರ್ಧನೆ ಗೊಳಿಸಲು ಇಂದಿನ ಬಜೆಟ್ ಮತ್ತೊಮ್ಮೆ ಭರವಸೆಯನ್ನು ಮೂಡಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಶಾಲಾ ಶಿಕ್ಷಣದ ಪಾಲಿಗೆ ಹಲವು ಒಳಿತುಗಳನ್ನು ಒಳಗೊಂಡಿದೆ.

ಮೊದಲಿಗೆ , ಈ ಬಾರಿಯ ಬಜೆಟ್ ಗಾತ್ರ ೪,೦೯,೫೪೯ ಕೋಟಿ ರೂ. ಅದರಲ್ಲಿ ಶಾಲಾ ಶಿಕ್ಷಣದ ಪಾಲು ೪೫,೨೮೬ ಕೋಟಿ. ಶೇಕಡಾವಾರು ಲೆಕ್ಕದಲ್ಲಿ ಶಿಕ್ಷಣಕ್ಕೆ ಸುಮಾರು ೧೦% ದೊರೆತಿದೆ. ಇದು ಕಳೆದ ಬಾರಿಗಿಂತ ಶೇಕಡಾ ಎರಡರಷ್ಟು ಕಡಿಮೆಯಾದರೂ, ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣ ಕಳೆದ ಬಾರಿಗೆ ಹೋಲಿಸಿದರೆ ೮೬೪ ಕೋಟಿ ರೂ. ಹೆಚ್ಚಳವಾಗಿದೆ.

ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮತ್ತು ಬಿಸಿಯೂಟದ ನೌಕರರರಿಗೆ ನೀಡುತ್ತಿರುವ ಗೌರವಧನವನ್ನು ಕ್ರಮವಾಗಿ ೨,೦೦೦ ಮತ್ತು ೧,೦೦೦ ರೂಗಳನ್ನು ಹೆಚ್ಚಿಸಿರುವುದು ಮಾನವೀಯತೆ ಹಾಗೂ ಶಾಲೆಗಳ ಕಾರ್ಯಕ್ಷಮತೆ ದೃಷ್ಟಿಯಿಂದ ಒಳಿತಿನ ನಡೆಯಾಗಿದೆ.

ಇದೇ ರೀತಿ ೧೦೦ ಅರ್ಹ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಮತ್ತು ಅರ್ಹ ೫೦ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೇರಿಸುವ ಕ್ರಮ ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ದಾಖಲಾತಿ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ.

ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ನೀಗಿಸಲು ಹೆಚ್ಚುವರಿ ತರಗತಿ ಕೋಣೆ, ಶೌಚಾಲಯ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ೭೨೫ ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಕ್ಕೆ ೫೦ ಕೋಟಿ ರೂ. ; ೪೬ ಕೋಟಿ ರೂ. ಅನುದಾನದ ಮೂಲಕ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಅಡಿಯಲ್ಲಿ ೧೬,೩೪೭ ಶಾಲೆಗಳಲ್ಲಿ ಆಧುನಿಕ ಅಡುಗೆ ಕೋಣೆ ಹಾಗೂ ಪಾತ್ರೆಗಳನ್ನು ಒದಗಿಸುವ ಕಾರ್ಯ; ಕಲ್ಯಾಣ ಕರ್ನಾಟಕದ ಭಾಗದಲ್ಲಿ ೨೦೦ ಕೋಟಿ ರೂ. ವೆಚ್ಚದೊಂದಿಗೆ ೫೦ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸುವುದು.

ಆಂದೋಲನ ಡೆಸ್ಕ್

Recent Posts

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

6 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

50 mins ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

59 mins ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

1 hour ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

1 hour ago

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

2 hours ago