Andolana originals

ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯ ಬಲವರ್ಧನೆಗೆ ಇಂಬು

ವಿ. ಪಿ. ನಿರಂಜನಾರಾಧ್ಯ, ಅಭಿವೃದ್ಧಿ ಶಿಕ್ಷಣ ತಜ್ಞ
ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ಸಾಧಿಸುವತ್ತ ದಮನಿತ ಸಮುದಾಯ ಗಳಿಗೆ ನ್ಯಾಯೋಚಿತ ಅವಕಾಶ ಒದಗಿಸಬಲ್ಲ ಸಾರ್ವಜನಿಕ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಮತ್ತಷ್ಟು ಬಲವರ್ಧನೆ ಗೊಳಿಸಲು ಇಂದಿನ ಬಜೆಟ್ ಮತ್ತೊಮ್ಮೆ ಭರವಸೆಯನ್ನು ಮೂಡಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಶಾಲಾ ಶಿಕ್ಷಣದ ಪಾಲಿಗೆ ಹಲವು ಒಳಿತುಗಳನ್ನು ಒಳಗೊಂಡಿದೆ.

ಮೊದಲಿಗೆ , ಈ ಬಾರಿಯ ಬಜೆಟ್ ಗಾತ್ರ ೪,೦೯,೫೪೯ ಕೋಟಿ ರೂ. ಅದರಲ್ಲಿ ಶಾಲಾ ಶಿಕ್ಷಣದ ಪಾಲು ೪೫,೨೮೬ ಕೋಟಿ. ಶೇಕಡಾವಾರು ಲೆಕ್ಕದಲ್ಲಿ ಶಿಕ್ಷಣಕ್ಕೆ ಸುಮಾರು ೧೦% ದೊರೆತಿದೆ. ಇದು ಕಳೆದ ಬಾರಿಗಿಂತ ಶೇಕಡಾ ಎರಡರಷ್ಟು ಕಡಿಮೆಯಾದರೂ, ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣ ಕಳೆದ ಬಾರಿಗೆ ಹೋಲಿಸಿದರೆ ೮೬೪ ಕೋಟಿ ರೂ. ಹೆಚ್ಚಳವಾಗಿದೆ.

ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಮತ್ತು ಬಿಸಿಯೂಟದ ನೌಕರರರಿಗೆ ನೀಡುತ್ತಿರುವ ಗೌರವಧನವನ್ನು ಕ್ರಮವಾಗಿ ೨,೦೦೦ ಮತ್ತು ೧,೦೦೦ ರೂಗಳನ್ನು ಹೆಚ್ಚಿಸಿರುವುದು ಮಾನವೀಯತೆ ಹಾಗೂ ಶಾಲೆಗಳ ಕಾರ್ಯಕ್ಷಮತೆ ದೃಷ್ಟಿಯಿಂದ ಒಳಿತಿನ ನಡೆಯಾಗಿದೆ.

ಇದೇ ರೀತಿ ೧೦೦ ಅರ್ಹ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಮತ್ತು ಅರ್ಹ ೫೦ ಪ್ರೌಢಶಾಲೆಗಳನ್ನು ಪದವಿಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೇರಿಸುವ ಕ್ರಮ ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ದಾಖಲಾತಿ ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ದೊಡ್ಡ ರೀತಿಯಲ್ಲಿ ಸಹಾಯವಾಗುತ್ತದೆ.

ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ನೀಗಿಸಲು ಹೆಚ್ಚುವರಿ ತರಗತಿ ಕೋಣೆ, ಶೌಚಾಲಯ ಹಾಗೂ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ೭೨೫ ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಕ್ಕೆ ೫೦ ಕೋಟಿ ರೂ. ; ೪೬ ಕೋಟಿ ರೂ. ಅನುದಾನದ ಮೂಲಕ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ ಅಡಿಯಲ್ಲಿ ೧೬,೩೪೭ ಶಾಲೆಗಳಲ್ಲಿ ಆಧುನಿಕ ಅಡುಗೆ ಕೋಣೆ ಹಾಗೂ ಪಾತ್ರೆಗಳನ್ನು ಒದಗಿಸುವ ಕಾರ್ಯ; ಕಲ್ಯಾಣ ಕರ್ನಾಟಕದ ಭಾಗದಲ್ಲಿ ೨೦೦ ಕೋಟಿ ರೂ. ವೆಚ್ಚದೊಂದಿಗೆ ೫೦ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸುವುದು.

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago