ಎಸ್.ಎಸ್.ಭಟ್
ನಂಜನಗೂಡು: ಪ್ರತಿ ವರ್ಷ ಸುತ್ತೂರು ಜಾತ್ರೆಯಲ್ಲಿ ಹೊಸದನ್ನು ಪರಿಚಯಿಸುವ ಸುತ್ತೂರು ಶ್ರೀ ಗಳು ಈ ಬಾರಿ ಶಿವರಾತ್ರೀಶ್ವರ ಜಯಂತಿ ಮಹೋತ್ಸವದ ತೆಪ್ಪೋತ್ಸವಕ್ಕೆಂದು ಅತ್ಯಾಕರ್ಷಕವಾದ ವಿನೂತನ ತೆಪ್ಪವನ್ನು ಸಿದ್ಧಪಡಿಸಿದ್ದು, ಸೋಮವಾರ ಜನಸಾಗರದ ಮಧ್ಯೆ ಈ ವಿನೂತನ ತೆಪ್ಪ ಕಪಿಲಾ ನದಿಯಲ್ಲಿ ಸಂಚರಿಸಲಿದೆ.
ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಸೂಚನೆಯ ಮೇರೆಗೆ ಈ ತೆಪ್ಪವನ್ನು ಉತ್ತರ ಕನ್ನಡದ ಮುರುಡೇಶ್ವರದ ಶಿಲ್ಪಿ ಗಂಗಾಧರ ಸಿದ್ಧಪಡಿಸಿದ್ದು ಅದು ಸೋಮವಾರ ಕಪಿಲೆಯಲ್ಲಿ ತೇಲುವ ಮೂಲಕ ಪ್ರೇಕ್ಷಕರ ಕಣ್ತುಂಬಲಿದೆ.
೨೫ ಎಚ್ಪಿ ಮೋಟಾರ್ನಿಂದ ಚಾಲನೆಗೊಳ್ಳುವ ಈ ತೆಪ್ಪದ ನಾಲ್ಕು ದಿಕ್ಕುಗಳಲ್ಲಿನ ಶಿಲ್ಪಕಲಾ ಕೆತ್ತನೆಗಳಿಂದ ಅತ್ಯಾಕರ್ಷಕ ವಾಗಿದೆ. ಈ ಸುಂದರವಾದ ಈ ತೆಪ್ಪದಲ್ಲಿ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ತಲಾ ನಾಲ್ಕರಂತೆ ಹದಿನಾರು ನಂದಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಶಿವರಾತ್ರೀಶ್ವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ತೆಪ್ಪೋತ್ಸವ ನಡೆಸುವ ಈ ತೇಲುವ ದೇವಾಲಯದಲ್ಲಿ ಸುಮಾರು ೨೦ ಜನರು ನಿಂತುಕೊಳ್ಳಲು ಸ್ಥಳಾವಕಾಶವಿದೆ.
” ೧೭ ಅಡಿ ಎತ್ತರದ ೨೦+೧೮ ಅಡಿ ಅಗಲದ ಈ ತೆಪ್ಪವನ್ನು ೨೫ಕ್ಕೂ ಹೆಚ್ಚು ಅಶ್ವಶಕ್ತಿಯ ಮೋಟಾರ್ ನಿರ್ವಹಿಸುತ್ತಿದ್ದು, ಸುತ್ತೂರು ಜಾತ್ರೆಯ ಅತ್ಯಂತ ಜನಾಕರ್ಷಣೆಯ ತೆಪ್ಪವಾಗಿ ಕಂಗೊಳಿಸಲಿದೆ.”
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…