Andolana originals

ಕಪಿಲೆಯಲ್ಲಿ ತೇಲುವ ತೆಪ್ಪ ಅತ್ಯಾಕರ್ಷಕ ವಿನೂತನ

ಎಸ್.ಎಸ್.ಭಟ್

ನಂಜನಗೂಡು: ಪ್ರತಿ ವರ್ಷ ಸುತ್ತೂರು ಜಾತ್ರೆಯಲ್ಲಿ ಹೊಸದನ್ನು ಪರಿಚಯಿಸುವ ಸುತ್ತೂರು ಶ್ರೀ ಗಳು ಈ ಬಾರಿ ಶಿವರಾತ್ರೀಶ್ವರ ಜಯಂತಿ ಮಹೋತ್ಸವದ ತೆಪ್ಪೋತ್ಸವಕ್ಕೆಂದು ಅತ್ಯಾಕರ್ಷಕವಾದ ವಿನೂತನ ತೆಪ್ಪವನ್ನು ಸಿದ್ಧಪಡಿಸಿದ್ದು, ಸೋಮವಾರ ಜನಸಾಗರದ ಮಧ್ಯೆ ಈ ವಿನೂತನ ತೆಪ್ಪ ಕಪಿಲಾ ನದಿಯಲ್ಲಿ ಸಂಚರಿಸಲಿದೆ.

ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಸೂಚನೆಯ ಮೇರೆಗೆ ಈ ತೆಪ್ಪವನ್ನು ಉತ್ತರ ಕನ್ನಡದ ಮುರುಡೇಶ್ವರದ ಶಿಲ್ಪಿ ಗಂಗಾಧರ ಸಿದ್ಧಪಡಿಸಿದ್ದು ಅದು ಸೋಮವಾರ ಕಪಿಲೆಯಲ್ಲಿ ತೇಲುವ ಮೂಲಕ ಪ್ರೇಕ್ಷಕರ ಕಣ್ತುಂಬಲಿದೆ.

೨೫ ಎಚ್‌ಪಿ ಮೋಟಾರ್‌ನಿಂದ ಚಾಲನೆಗೊಳ್ಳುವ ಈ ತೆಪ್ಪದ ನಾಲ್ಕು ದಿಕ್ಕುಗಳಲ್ಲಿನ ಶಿಲ್ಪಕಲಾ ಕೆತ್ತನೆಗಳಿಂದ ಅತ್ಯಾಕರ್ಷಕ ವಾಗಿದೆ. ಈ ಸುಂದರವಾದ ಈ ತೆಪ್ಪದಲ್ಲಿ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ತಲಾ ನಾಲ್ಕರಂತೆ ಹದಿನಾರು ನಂದಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಶಿವರಾತ್ರೀಶ್ವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ತೆಪ್ಪೋತ್ಸವ ನಡೆಸುವ ಈ ತೇಲುವ ದೇವಾಲಯದಲ್ಲಿ ಸುಮಾರು ೨೦ ಜನರು ನಿಂತುಕೊಳ್ಳಲು ಸ್ಥಳಾವಕಾಶವಿದೆ.

” ೧೭ ಅಡಿ ಎತ್ತರದ ೨೦+೧೮ ಅಡಿ ಅಗಲದ ಈ ತೆಪ್ಪವನ್ನು ೨೫ಕ್ಕೂ ಹೆಚ್ಚು ಅಶ್ವಶಕ್ತಿಯ ಮೋಟಾರ್ ನಿರ್ವಹಿಸುತ್ತಿದ್ದು, ಸುತ್ತೂರು  ಜಾತ್ರೆಯ ಅತ್ಯಂತ ಜನಾಕರ್ಷಣೆಯ ತೆಪ್ಪವಾಗಿ ಕಂಗೊಳಿಸಲಿದೆ.”

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago