ಎಸ್.ಎಸ್.ಭಟ್
ನಂಜನಗೂಡು: ಪ್ರತಿ ವರ್ಷ ಸುತ್ತೂರು ಜಾತ್ರೆಯಲ್ಲಿ ಹೊಸದನ್ನು ಪರಿಚಯಿಸುವ ಸುತ್ತೂರು ಶ್ರೀ ಗಳು ಈ ಬಾರಿ ಶಿವರಾತ್ರೀಶ್ವರ ಜಯಂತಿ ಮಹೋತ್ಸವದ ತೆಪ್ಪೋತ್ಸವಕ್ಕೆಂದು ಅತ್ಯಾಕರ್ಷಕವಾದ ವಿನೂತನ ತೆಪ್ಪವನ್ನು ಸಿದ್ಧಪಡಿಸಿದ್ದು, ಸೋಮವಾರ ಜನಸಾಗರದ ಮಧ್ಯೆ ಈ ವಿನೂತನ ತೆಪ್ಪ ಕಪಿಲಾ ನದಿಯಲ್ಲಿ ಸಂಚರಿಸಲಿದೆ.
ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಸೂಚನೆಯ ಮೇರೆಗೆ ಈ ತೆಪ್ಪವನ್ನು ಉತ್ತರ ಕನ್ನಡದ ಮುರುಡೇಶ್ವರದ ಶಿಲ್ಪಿ ಗಂಗಾಧರ ಸಿದ್ಧಪಡಿಸಿದ್ದು ಅದು ಸೋಮವಾರ ಕಪಿಲೆಯಲ್ಲಿ ತೇಲುವ ಮೂಲಕ ಪ್ರೇಕ್ಷಕರ ಕಣ್ತುಂಬಲಿದೆ.
೨೫ ಎಚ್ಪಿ ಮೋಟಾರ್ನಿಂದ ಚಾಲನೆಗೊಳ್ಳುವ ಈ ತೆಪ್ಪದ ನಾಲ್ಕು ದಿಕ್ಕುಗಳಲ್ಲಿನ ಶಿಲ್ಪಕಲಾ ಕೆತ್ತನೆಗಳಿಂದ ಅತ್ಯಾಕರ್ಷಕ ವಾಗಿದೆ. ಈ ಸುಂದರವಾದ ಈ ತೆಪ್ಪದಲ್ಲಿ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ತಲಾ ನಾಲ್ಕರಂತೆ ಹದಿನಾರು ನಂದಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಶಿವರಾತ್ರೀಶ್ವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ತೆಪ್ಪೋತ್ಸವ ನಡೆಸುವ ಈ ತೇಲುವ ದೇವಾಲಯದಲ್ಲಿ ಸುಮಾರು ೨೦ ಜನರು ನಿಂತುಕೊಳ್ಳಲು ಸ್ಥಳಾವಕಾಶವಿದೆ.
” ೧೭ ಅಡಿ ಎತ್ತರದ ೨೦+೧೮ ಅಡಿ ಅಗಲದ ಈ ತೆಪ್ಪವನ್ನು ೨೫ಕ್ಕೂ ಹೆಚ್ಚು ಅಶ್ವಶಕ್ತಿಯ ಮೋಟಾರ್ ನಿರ್ವಹಿಸುತ್ತಿದ್ದು, ಸುತ್ತೂರು ಜಾತ್ರೆಯ ಅತ್ಯಂತ ಜನಾಕರ್ಷಣೆಯ ತೆಪ್ಪವಾಗಿ ಕಂಗೊಳಿಸಲಿದೆ.”
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…