Andolana originals

ಕುಸಿದ ಕಬಿನಿ ಉಪನಾಲೆ ದುರಸ್ತಿ ಕಾರ್ಯ ಶುರು

೨ ದಿನದಲ್ಲಿ ನಾಲೆಗೆ ನೀರು: ಇಂಜಿನಿಯರ್ ದರ್ಶನ್

ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಹುಲ್ಲಹಳ್ಳಿ ನಾಲೆಗೆ ಕುಸಿದು ಬಿದ್ದು, ಎರಡೂ ನಾಲೆಗಳಲ್ಲಿ ನೀರಿಲ್ಲದ ಸುದ್ದಿ ಮಂಗಳವಾರ ‘ಆಂದೋಲನ’ ದಿನಪತ್ರಿಕೆ ಯಲ್ಲಿ ಬಿತ್ತರವಾಗಿದ್ದನ್ನು ಗಮಿಸಿದ ಅಧಿಕಾರಿಗಳು, ಮಂಗಳವಾರ ಬೆಳಿಗ್ಗೆಯಿಂದಲೇ ದುರಸ್ತಿ ಕೆಲಸ ಆರಂಭಿಸಿದ್ದಾರೆ.

ಮಂಗಳವಾರ ಕೊರೆಹುಂಡಿ ಸಮೀಪದಲ್ಲಿ ನಾಲೆ ಕುಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಸುತ್ತಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಾದ ಹಾಲಪ್ಪ ಹಾಗೂ ದರ್ಶನ್ ಪತ್ರಿಕೆಯೊಂದಿಗೆ ಮಾತನಾಡಿ, ಈ ಕಿರುನಾಲೆ ಶಿಥಿಲವಾಗಿದ್ದನ್ನು ಗಮನಿಸಿ ೨ ತಿಂಗಳ ಹಿಂದೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದು ನಿಜ. ಆದರೆ ಮಳೆಯಿಂದಾಗಿ ಹೆಚ್ಚಿನ ನೀರು ಹರಿದ ಪರಿಣಾಮ ನಾಲೆ ಕುಸಿದಿದೆ

ಇನ್ನೆರಡು ದಿನಗಳಲ್ಲಿ ಹುಲ್ಲಹಳ್ಳಿ ನಾಲೆಯಲ್ಲಿ ನೀರು ಹರಿಸಲಾಗುವುದು ಎಂದರು. ಈಗ ತಾತ್ಕಾಲಿಕವಾಗಿ ಕಬ್ಬಿಣದ ಬೃಹತ್ ಗಾರ್ಡ್ ಬಳಸಿ ಕಿರುನಾಲೆಯಲ್ಲಿ ನೀರು ಹರಿಸಲು ಕ್ರಮ ಜುರುಗಿಸಲು ಸಿದ್ಧತೆ ನಡೆದಿದೆ. ಹದಿನೈದು ದಿನಗಳಲ್ಲಿ ಕಿರುನಾಲೆಯಲ್ಲಿ ನೀರು ಹರಿಸಲಾಗುತ್ತದೆ. ಈ ನಾಲೆಯ  ದುರಸ್ತಿಗಾಗಿ ೧ ಕೋಟಿ ೯೦ ಲಕ್ಷ ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳಿಸಲಾಗಿದೆ. ಅದು ಮಂಜೂರಾಗಿ ಬರುವವರಿಗೆ ನೀರು ಹರಿಸಲು ಈಗ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುವುದು ಎಂದರು.

” ಹುಲ್ಲಹಳ್ಳಿ ನಾಲೆಯಲ್ಲಿ ಬಿದ್ದ ಕಿರುನಾಲೆಯ ಮಣ್ಣು ಕಬ್ಬಿಣ ಸೇರಿದಂತೆ ಇನ್ನಿತರ ಅವಶೇಷಗಳನ್ನು ೨ ದಿನಗಳಲ್ಲಿ ಹೊರ ಸಾಗಿಸಿ ಶುಕ್ರವಾರದೊಳಗಾಗಿ ನಾಲೆಯಲ್ಲಿ ನೀರು ಹರಿಸಲಾಗುವುದು. ಇದರಿಂದ ಬಿಳಿಗರೆ ಹೋಬಳಿಯ ಹುಲ್ಲಹಳ್ಳಿ ನಾಲೆಯ ೭,೨೦೦ ಎಕರೆ ಪ್ರದೇಶದ ಅಚ್ಚುಕಟ್ಟುದಾರರ ನೀರಿನ ಬವಣೆ ನಿವಾರಣೆಯಾಗಲಿದೆ.”

-ದರ್ಶನ್, ಇಂಜಿನಿಯರ್ , ಕಾವೇರಿ ನೀರಾವರಿ ನಿಗಮ

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

13 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago