Andolana originals

ಕುಸಿದ ಕಬಿನಿ ಉಪನಾಲೆ ದುರಸ್ತಿ ಕಾರ್ಯ ಶುರು

೨ ದಿನದಲ್ಲಿ ನಾಲೆಗೆ ನೀರು: ಇಂಜಿನಿಯರ್ ದರ್ಶನ್

ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಹುಲ್ಲಹಳ್ಳಿ ನಾಲೆಗೆ ಕುಸಿದು ಬಿದ್ದು, ಎರಡೂ ನಾಲೆಗಳಲ್ಲಿ ನೀರಿಲ್ಲದ ಸುದ್ದಿ ಮಂಗಳವಾರ ‘ಆಂದೋಲನ’ ದಿನಪತ್ರಿಕೆ ಯಲ್ಲಿ ಬಿತ್ತರವಾಗಿದ್ದನ್ನು ಗಮಿಸಿದ ಅಧಿಕಾರಿಗಳು, ಮಂಗಳವಾರ ಬೆಳಿಗ್ಗೆಯಿಂದಲೇ ದುರಸ್ತಿ ಕೆಲಸ ಆರಂಭಿಸಿದ್ದಾರೆ.

ಮಂಗಳವಾರ ಕೊರೆಹುಂಡಿ ಸಮೀಪದಲ್ಲಿ ನಾಲೆ ಕುಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಸುತ್ತಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಾದ ಹಾಲಪ್ಪ ಹಾಗೂ ದರ್ಶನ್ ಪತ್ರಿಕೆಯೊಂದಿಗೆ ಮಾತನಾಡಿ, ಈ ಕಿರುನಾಲೆ ಶಿಥಿಲವಾಗಿದ್ದನ್ನು ಗಮನಿಸಿ ೨ ತಿಂಗಳ ಹಿಂದೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದು ನಿಜ. ಆದರೆ ಮಳೆಯಿಂದಾಗಿ ಹೆಚ್ಚಿನ ನೀರು ಹರಿದ ಪರಿಣಾಮ ನಾಲೆ ಕುಸಿದಿದೆ

ಇನ್ನೆರಡು ದಿನಗಳಲ್ಲಿ ಹುಲ್ಲಹಳ್ಳಿ ನಾಲೆಯಲ್ಲಿ ನೀರು ಹರಿಸಲಾಗುವುದು ಎಂದರು. ಈಗ ತಾತ್ಕಾಲಿಕವಾಗಿ ಕಬ್ಬಿಣದ ಬೃಹತ್ ಗಾರ್ಡ್ ಬಳಸಿ ಕಿರುನಾಲೆಯಲ್ಲಿ ನೀರು ಹರಿಸಲು ಕ್ರಮ ಜುರುಗಿಸಲು ಸಿದ್ಧತೆ ನಡೆದಿದೆ. ಹದಿನೈದು ದಿನಗಳಲ್ಲಿ ಕಿರುನಾಲೆಯಲ್ಲಿ ನೀರು ಹರಿಸಲಾಗುತ್ತದೆ. ಈ ನಾಲೆಯ  ದುರಸ್ತಿಗಾಗಿ ೧ ಕೋಟಿ ೯೦ ಲಕ್ಷ ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳಿಸಲಾಗಿದೆ. ಅದು ಮಂಜೂರಾಗಿ ಬರುವವರಿಗೆ ನೀರು ಹರಿಸಲು ಈಗ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುವುದು ಎಂದರು.

” ಹುಲ್ಲಹಳ್ಳಿ ನಾಲೆಯಲ್ಲಿ ಬಿದ್ದ ಕಿರುನಾಲೆಯ ಮಣ್ಣು ಕಬ್ಬಿಣ ಸೇರಿದಂತೆ ಇನ್ನಿತರ ಅವಶೇಷಗಳನ್ನು ೨ ದಿನಗಳಲ್ಲಿ ಹೊರ ಸಾಗಿಸಿ ಶುಕ್ರವಾರದೊಳಗಾಗಿ ನಾಲೆಯಲ್ಲಿ ನೀರು ಹರಿಸಲಾಗುವುದು. ಇದರಿಂದ ಬಿಳಿಗರೆ ಹೋಬಳಿಯ ಹುಲ್ಲಹಳ್ಳಿ ನಾಲೆಯ ೭,೨೦೦ ಎಕರೆ ಪ್ರದೇಶದ ಅಚ್ಚುಕಟ್ಟುದಾರರ ನೀರಿನ ಬವಣೆ ನಿವಾರಣೆಯಾಗಲಿದೆ.”

-ದರ್ಶನ್, ಇಂಜಿನಿಯರ್ , ಕಾವೇರಿ ನೀರಾವರಿ ನಿಗಮ

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago