Andolana originals

ಕುಸಿದ ಕಬಿನಿ ಉಪನಾಲೆ ದುರಸ್ತಿ ಕಾರ್ಯ ಶುರು

೨ ದಿನದಲ್ಲಿ ನಾಲೆಗೆ ನೀರು: ಇಂಜಿನಿಯರ್ ದರ್ಶನ್

ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಹುಲ್ಲಹಳ್ಳಿ ನಾಲೆಗೆ ಕುಸಿದು ಬಿದ್ದು, ಎರಡೂ ನಾಲೆಗಳಲ್ಲಿ ನೀರಿಲ್ಲದ ಸುದ್ದಿ ಮಂಗಳವಾರ ‘ಆಂದೋಲನ’ ದಿನಪತ್ರಿಕೆ ಯಲ್ಲಿ ಬಿತ್ತರವಾಗಿದ್ದನ್ನು ಗಮಿಸಿದ ಅಧಿಕಾರಿಗಳು, ಮಂಗಳವಾರ ಬೆಳಿಗ್ಗೆಯಿಂದಲೇ ದುರಸ್ತಿ ಕೆಲಸ ಆರಂಭಿಸಿದ್ದಾರೆ.

ಮಂಗಳವಾರ ಕೊರೆಹುಂಡಿ ಸಮೀಪದಲ್ಲಿ ನಾಲೆ ಕುಸಿದ ಸ್ಥಳದಲ್ಲಿ ದುರಸ್ತಿ ಕಾರ್ಯ ನಡೆಸುತ್ತಿರುವ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಾದ ಹಾಲಪ್ಪ ಹಾಗೂ ದರ್ಶನ್ ಪತ್ರಿಕೆಯೊಂದಿಗೆ ಮಾತನಾಡಿ, ಈ ಕಿರುನಾಲೆ ಶಿಥಿಲವಾಗಿದ್ದನ್ನು ಗಮನಿಸಿ ೨ ತಿಂಗಳ ಹಿಂದೆ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದು ನಿಜ. ಆದರೆ ಮಳೆಯಿಂದಾಗಿ ಹೆಚ್ಚಿನ ನೀರು ಹರಿದ ಪರಿಣಾಮ ನಾಲೆ ಕುಸಿದಿದೆ

ಇನ್ನೆರಡು ದಿನಗಳಲ್ಲಿ ಹುಲ್ಲಹಳ್ಳಿ ನಾಲೆಯಲ್ಲಿ ನೀರು ಹರಿಸಲಾಗುವುದು ಎಂದರು. ಈಗ ತಾತ್ಕಾಲಿಕವಾಗಿ ಕಬ್ಬಿಣದ ಬೃಹತ್ ಗಾರ್ಡ್ ಬಳಸಿ ಕಿರುನಾಲೆಯಲ್ಲಿ ನೀರು ಹರಿಸಲು ಕ್ರಮ ಜುರುಗಿಸಲು ಸಿದ್ಧತೆ ನಡೆದಿದೆ. ಹದಿನೈದು ದಿನಗಳಲ್ಲಿ ಕಿರುನಾಲೆಯಲ್ಲಿ ನೀರು ಹರಿಸಲಾಗುತ್ತದೆ. ಈ ನಾಲೆಯ  ದುರಸ್ತಿಗಾಗಿ ೧ ಕೋಟಿ ೯೦ ಲಕ್ಷ ರೂ. ವೆಚ್ಚದ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳಿಸಲಾಗಿದೆ. ಅದು ಮಂಜೂರಾಗಿ ಬರುವವರಿಗೆ ನೀರು ಹರಿಸಲು ಈಗ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುವುದು ಎಂದರು.

” ಹುಲ್ಲಹಳ್ಳಿ ನಾಲೆಯಲ್ಲಿ ಬಿದ್ದ ಕಿರುನಾಲೆಯ ಮಣ್ಣು ಕಬ್ಬಿಣ ಸೇರಿದಂತೆ ಇನ್ನಿತರ ಅವಶೇಷಗಳನ್ನು ೨ ದಿನಗಳಲ್ಲಿ ಹೊರ ಸಾಗಿಸಿ ಶುಕ್ರವಾರದೊಳಗಾಗಿ ನಾಲೆಯಲ್ಲಿ ನೀರು ಹರಿಸಲಾಗುವುದು. ಇದರಿಂದ ಬಿಳಿಗರೆ ಹೋಬಳಿಯ ಹುಲ್ಲಹಳ್ಳಿ ನಾಲೆಯ ೭,೨೦೦ ಎಕರೆ ಪ್ರದೇಶದ ಅಚ್ಚುಕಟ್ಟುದಾರರ ನೀರಿನ ಬವಣೆ ನಿವಾರಣೆಯಾಗಲಿದೆ.”

-ದರ್ಶನ್, ಇಂಜಿನಿಯರ್ , ಕಾವೇರಿ ನೀರಾವರಿ ನಿಗಮ

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago