ಪ್ರಶಾಂತ್ ಎಸ್.
ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ ಬಡಾವಣೆ, ಎಂಸಿಡಿಸಿಸಿ ಬ್ಯಾಂಕ್ ನೌಕರರ ಬಡಾವಣೆ, ಬೆಮೆಲ್ ನಗರ, ಎಂ. ಜಿ. ಮಾರುಕಟ್ಟೆ(ಮಹಾತ್ಮ ಗಾಂಧಿರಸ್ತೆ) ಸಮೀಪದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ವಾಹನ ಚಲಾ ಯಿಸುತ್ತಿದ್ದರೆ, ಮತ್ತೊಂದೆಡೆ ರಸ್ತೆಗಳನ್ನು ಅಗೆಯುತ್ತಿರುವುದರಿಂದ ನಿವಾಸಿಗಳಿಗೂ ಸಮಸ್ಯೆ ಎದುರಾಗಿದೆ.
ಬೃಹತ್ ಗುಂಡಿ ನಿರ್ಮಾಣ
ಪೈಪ್ಲೇನ್ ಅಳವಡಿಕೆಗಾಗಿ ರಸ್ತೆ ಅಗೆದು ಹಾಗೆಯೇ ಬಿಡಲಾಗಿದೆ. ಎಲ್ಲೆಂದರಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ಯಾವುದೇ ಸುರಕ್ಷತಾ ಕ್ರಮದ ಫಲಕವೂ ಇಲ್ಲ. ಕಾಮಗಾರಿಯ ಬಗ್ಗೆ ಮಾಹಿತಿ ನೀಡುವ ಒಂದೇ ಒಂದು ಸೂಚನಾ ಫಲಕವನ್ನೂ ಇಲ್ಲಿ ಅಳವಡಿಸಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಣ್ಣು ಹಾಕಿ ಅವಾಂತರ
ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಪಂಚಾಯಿತಿ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ವಾರಕ್ಕೊಮ್ಮೆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲು ಜೆಸಿಬಿಗಳಿಗೆ ಭಾರೀ ಹಣ ವ್ಯಯಿಸಲಾಗುತ್ತಿದೆ. ಟ್ರಾಕ್ಟರ್ ಮೂಲಕ ರಾಶಿ ರಾಶಿ ಮಣ್ಣನ್ನು ತಂದು ರಸ್ತೆಗೆ ಸುರಿಯಲಾಗುತ್ತಿದೆ. ಇದರಿಂದ ಕೇವಲ ಮಣ್ಣು ಮಾತ್ರವಲ್ಲದೆ ಅದರೊಂದಿಗೆ ಕಲ್ಲುಗಳೂ ಸೇರಿ ದ್ವಿಚಕ್ರ ವಾಹನ ಸವಾರರು ಬೀಳುವ ಅಪಾಯವನ್ನು ತಂದೊಡ್ಡಿದೆ. ಈ ಮಧ್ಯೆ ಕೆಲವು ಕಾಮಗಾರಿಗೆ ತೋಡಿದ್ದ ಗುಂಡಿಗಳನ್ನು ಸರಿಯಾಗಿ ಮುಚ್ಚದಿರುವುದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆ ಬಂದರೆ ಈ ರಸ್ತೆಯಲ್ಲಿನ ಭಾರೀ ಗುಂಡಿಗಳಲ್ಲಿ ನೀರು ತುಂಬಿ ಕೊಳ್ಳುವುದರಿಂದ ವಾಹನ ಸವಾರರು, ಸಾರ್ವಜನಿಕರು, ಹಿರಿಯ ನಾಗರಿಕರ ಓಡಾಟಕ್ಕೆ ತೊಂದರೆಯಾಗುತ್ತದೆ ಎಂಬ ದೂರುಗಳು ಕೇಳಿಬಂದಿವೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…