ಪ್ರಶಾಂತ್ ಎಸ್.
ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ ಬಡಾವಣೆ, ಎಂಸಿಡಿಸಿಸಿ ಬ್ಯಾಂಕ್ ನೌಕರರ ಬಡಾವಣೆ, ಬೆಮೆಲ್ ನಗರ, ಎಂ. ಜಿ. ಮಾರುಕಟ್ಟೆ(ಮಹಾತ್ಮ ಗಾಂಧಿರಸ್ತೆ) ಸಮೀಪದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ವಾಹನ ಚಲಾ ಯಿಸುತ್ತಿದ್ದರೆ, ಮತ್ತೊಂದೆಡೆ ರಸ್ತೆಗಳನ್ನು ಅಗೆಯುತ್ತಿರುವುದರಿಂದ ನಿವಾಸಿಗಳಿಗೂ ಸಮಸ್ಯೆ ಎದುರಾಗಿದೆ.
ಬೃಹತ್ ಗುಂಡಿ ನಿರ್ಮಾಣ
ಪೈಪ್ಲೇನ್ ಅಳವಡಿಕೆಗಾಗಿ ರಸ್ತೆ ಅಗೆದು ಹಾಗೆಯೇ ಬಿಡಲಾಗಿದೆ. ಎಲ್ಲೆಂದರಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ಯಾವುದೇ ಸುರಕ್ಷತಾ ಕ್ರಮದ ಫಲಕವೂ ಇಲ್ಲ. ಕಾಮಗಾರಿಯ ಬಗ್ಗೆ ಮಾಹಿತಿ ನೀಡುವ ಒಂದೇ ಒಂದು ಸೂಚನಾ ಫಲಕವನ್ನೂ ಇಲ್ಲಿ ಅಳವಡಿಸಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಣ್ಣು ಹಾಕಿ ಅವಾಂತರ
ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಪಂಚಾಯಿತಿ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ವಾರಕ್ಕೊಮ್ಮೆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲು ಜೆಸಿಬಿಗಳಿಗೆ ಭಾರೀ ಹಣ ವ್ಯಯಿಸಲಾಗುತ್ತಿದೆ. ಟ್ರಾಕ್ಟರ್ ಮೂಲಕ ರಾಶಿ ರಾಶಿ ಮಣ್ಣನ್ನು ತಂದು ರಸ್ತೆಗೆ ಸುರಿಯಲಾಗುತ್ತಿದೆ. ಇದರಿಂದ ಕೇವಲ ಮಣ್ಣು ಮಾತ್ರವಲ್ಲದೆ ಅದರೊಂದಿಗೆ ಕಲ್ಲುಗಳೂ ಸೇರಿ ದ್ವಿಚಕ್ರ ವಾಹನ ಸವಾರರು ಬೀಳುವ ಅಪಾಯವನ್ನು ತಂದೊಡ್ಡಿದೆ. ಈ ಮಧ್ಯೆ ಕೆಲವು ಕಾಮಗಾರಿಗೆ ತೋಡಿದ್ದ ಗುಂಡಿಗಳನ್ನು ಸರಿಯಾಗಿ ಮುಚ್ಚದಿರುವುದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆ ಬಂದರೆ ಈ ರಸ್ತೆಯಲ್ಲಿನ ಭಾರೀ ಗುಂಡಿಗಳಲ್ಲಿ ನೀರು ತುಂಬಿ ಕೊಳ್ಳುವುದರಿಂದ ವಾಹನ ಸವಾರರು, ಸಾರ್ವಜನಿಕರು, ಹಿರಿಯ ನಾಗರಿಕರ ಓಡಾಟಕ್ಕೆ ತೊಂದರೆಯಾಗುತ್ತದೆ ಎಂಬ ದೂರುಗಳು ಕೇಳಿಬಂದಿವೆ.
ವೈಡ್ ಆಂಗಲ್ ನಿರ್ದೇಶಕ ಚೈತನ್ಯ ಇಮ್ಮಡಿ ಪುಲಿಕೇಶಿಯ ಜೀವನ ಯಾನವನ್ನು ಮುಂಬೈ ಮೂಲದ ನಿರ್ಮಾಣ ಸಂಸ್ಥೆಗಾಗಿ ಬೆಳ್ಳಿತೆರೆಗೆ ನಿರ್ದೇಶಿಸಲಿದ್ದಾರೆ. ಅದರ…
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ…
ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…