Andolana originals

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್.

ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ ಬಡಾವಣೆ, ಎಂಸಿಡಿಸಿಸಿ ಬ್ಯಾಂಕ್ ನೌಕರರ ಬಡಾವಣೆ, ಬೆಮೆಲ್ ನಗರ, ಎಂ. ಜಿ. ಮಾರುಕಟ್ಟೆ(ಮಹಾತ್ಮ ಗಾಂಧಿರಸ್ತೆ) ಸಮೀಪದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ವಾಹನ ಚಲಾ ಯಿಸುತ್ತಿದ್ದರೆ, ಮತ್ತೊಂದೆಡೆ ರಸ್ತೆಗಳನ್ನು ಅಗೆಯುತ್ತಿರುವುದರಿಂದ ನಿವಾಸಿಗಳಿಗೂ ಸಮಸ್ಯೆ ಎದುರಾಗಿದೆ.

ಬೃಹತ್ ಗುಂಡಿ ನಿರ್ಮಾಣ
ಪೈಪ್‌ಲೇನ್ ಅಳವಡಿಕೆಗಾಗಿ ರಸ್ತೆ ಅಗೆದು ಹಾಗೆಯೇ ಬಿಡಲಾಗಿದೆ. ಎಲ್ಲೆಂದರಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ಯಾವುದೇ ಸುರಕ್ಷತಾ ಕ್ರಮದ ಫಲಕವೂ ಇಲ್ಲ. ಕಾಮಗಾರಿಯ ಬಗ್ಗೆ ಮಾಹಿತಿ ನೀಡುವ ಒಂದೇ ಒಂದು ಸೂಚನಾ ಫಲಕವನ್ನೂ ಇಲ್ಲಿ ಅಳವಡಿಸಿಲ್ಲ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಣ್ಣು ಹಾಕಿ ಅವಾಂತರ
ರಸ್ತೆ ಗುಂಡಿಗಳನ್ನು ಮಣ್ಣಿನಿಂದ ಮುಚ್ಚುವ ಪಂಚಾಯಿತಿ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ವಾರಕ್ಕೊಮ್ಮೆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲು ಜೆಸಿಬಿಗಳಿಗೆ ಭಾರೀ ಹಣ ವ್ಯಯಿಸಲಾಗುತ್ತಿದೆ. ಟ್ರಾಕ್ಟರ್ ಮೂಲಕ ರಾಶಿ ರಾಶಿ ಮಣ್ಣನ್ನು ತಂದು ರಸ್ತೆಗೆ ಸುರಿಯಲಾಗುತ್ತಿದೆ. ಇದರಿಂದ ಕೇವಲ ಮಣ್ಣು ಮಾತ್ರವಲ್ಲದೆ ಅದರೊಂದಿಗೆ ಕಲ್ಲುಗಳೂ ಸೇರಿ ದ್ವಿಚಕ್ರ ವಾಹನ ಸವಾರರು ಬೀಳುವ ಅಪಾಯವನ್ನು ತಂದೊಡ್ಡಿದೆ. ಈ ಮಧ್ಯೆ ಕೆಲವು ಕಾಮಗಾರಿಗೆ ತೋಡಿದ್ದ ಗುಂಡಿಗಳನ್ನು ಸರಿಯಾಗಿ ಮುಚ್ಚದಿರುವುದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆ ಬಂದರೆ ಈ ರಸ್ತೆಯಲ್ಲಿನ ಭಾರೀ ಗುಂಡಿಗಳಲ್ಲಿ ನೀರು ತುಂಬಿ ಕೊಳ್ಳುವುದರಿಂದ ವಾಹನ ಸವಾರರು, ಸಾರ್ವಜನಿಕರು, ಹಿರಿಯ ನಾಗರಿಕರ ಓಡಾಟಕ್ಕೆ ತೊಂದರೆಯಾಗುತ್ತದೆ ಎಂಬ ದೂರುಗಳು ಕೇಳಿಬಂದಿವೆ.

ಆಂದೋಲನ ಡೆಸ್ಕ್

Recent Posts

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 mins ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

7 mins ago

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

14 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

14 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

16 hours ago