Andolana originals

ಓದುಗರ ಪತ್ರ: ರಸ್ತೆ ದುರಸ್ತಿ  ಮಾಡಿ

ಮೈಸೂರಿನ  ಕುವೆಂಪು ನಗರದ  ಕಾಂಪ್ಲೆಕ್ಸ್‌ನಿಂದ  ಕೆಎಸ್‌ಆರ್‌ಟಿಸಿ ಡಿಪೋವರೆಗಿನ  ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು  ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ.

ಸಾರ್ವಜನಿಕರಿಂದ ದೂರು ಬಂದಾಗ ಮಹಾನಗರ ಪಾಲಿಕೆಯವರು ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚುತ್ತಾರೆ,  ಆದರೆ ಒಂದು ತಿಂಗಳೊಳಗೆ ಮತ್ತೆ  ಗುಂಡಿಗಳು ನಿರ್ಮಾಣವಾಗುತ್ತಿವೆ,  ಇದರಿಂದಾಗಿ  ವಾಹನ ಸವಾರರು ಬಿದ್ದು ಗಾಯಗೊಂಡಿರುವ ಘಟನೆಗಳು ನಡೆದಿವೆ.

ಈ ರಸ್ತೆಯ ಫುಟ್‌ಪಾತ್ ಅನ್ನು  ತರಕಾರಿ ಮತ್ತು ಹಣ್ಣು ಮಾರುವವರು ಆಕ್ರಮಿಸಿ ಕೊಂಡಿರುವುದರಿಂದ ವಾಹನ ಸಂಚಾರಕ್ಕೆ  ತೊಂದರೆಯಾಗುತ್ತಿದೆ. ಹೆಚ್ಚಿನ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟವರು ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಹಾಗೂ ಫುಟ್‌ಪಾತ್ ಒತ್ತುವರಿ ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಬೂಕನಕೆರೆ ವಿಜೇಂದ್ರ,   ಕುವೆಂಪು ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

8 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

8 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago