Andolana originals

ರೈತರಲ್ಲಿ ಕಾಣಿಸದ ಸಂಕ್ರಾಂತಿ ಹಬ್ಬದ ಸಡಗರ

ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ದೊರೆಯದ ಉತ್ತಮ ಬೆಲೆ

ಮಂಜು ಕೋಟೆ

ಎಚ್.ಡಿ.ಕೋಟೆ : ಈ ಬಾರಿ ಬೆಳೆದ ಬೆಳೆ ಅನೇಕ ರೋಗಗಳು ಮತ್ತು ಕೀಟಬಾಧೆಗೆ ಗುರಿಯಾಗಿದ್ದು, ಅಲ್ಪಸ್ವಲ್ಪ ಬಂದ ಬೆಳೆಗೂ ಉತ್ತಮ ಬೆಲೆ ಇಲ್ಲದೆ ಸಂಕಷ್ಟದಲ್ಲಿರುವ ರೈತಾಪಿ ವರ್ಗದವರಲ್ಲಿ ಸುಗ್ಗಿಯ ಹಬ್ಬ ಸಂಕ್ರಾಂತಿ ಸಡಗರ ಗೋಚರಿಸುತ್ತಿಲ್ಲ.

ಮೈಸೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಜಲಾಶಯ ಗಳು ಇದ್ದರೂ ಮಳೆ ಆಶ್ರಿತ ಪ್ರದೇಶವನ್ನೇ ಅವಲಂಬಿಸಿರುವ ಎಚ್. ಡಿ. ಕೋಟೆ ತಾಲ್ಲೂಕಿನ ರೈತ ಕುಟುಂಬದವರಿಗೆ ಸಂಕ್ರಾಂತಿ ಹಬ್ಬ ಪ್ರಮುಖವಾಗಿದೆ. ಪ್ರತಿ ಸಾಲಿನಲ್ಲೂ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ರೈತರು ಕುಟುಂಬ ಸಮೇತ ತಮ್ಮ ಜಮೀನುಗಳನ್ನು ಹದ ಮಾಡಿಕೊಂಡು ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿ, ಡಿಸೆಂಬರ್ ಮತ್ತು ಜನವರಿ ತಿಂಗಳಿನಲ್ಲಿ ಬೆಳೆಗಳನ್ನು ಸಂಪೂರ್ಣವಾಗಿ ಕಟಾವು ಮತ್ತು ಒಕ್ಕಣೆ ಮಾಡಿ, ಮಾರಾಟ ಮಾಡಿ, ಬಂದ ಹಣದಲ್ಲಿ ಹೊಸ ಬಟ್ಟೆ ಧರಿಸಿ, ಮನೆಗಳಿಗೆ ಹೊಸ ಪದಾರ್ಥಗಳನ್ನು ತರುವ ಮೂಲಕ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸುವುದು ವಾಡಿಕೆಯಾಗಿದೆ.

ಆದರೆ ಈ ಬಾರಿ ತಾಲ್ಲೂಕಿನ ಬಹುತೇಕ ರೈತ ಕುಟುಂಬದವರು ತಮ್ಮ ಜಮೀನುಗಳಲ್ಲಿ ಸಾಲ ಮಾಡಿ ಆರ್ಥಿಕ ಬೆಳೆಗಳಾದ ಶುಂಠಿ ಮತ್ತು ಮುಸುಕಿನ ಜೋಳ, ಭತ್ತ, ಹೊಗೆಸೊಪ್ಪು ಬೆಳೆಯನ್ನು ಬೆಳೆದರೂ ರೋಗ ಮತ್ತು ಕೀಟ ಬಾಧೆಯಿಂದ ಇಳುವರಿ ಕಡಿಮೆಯಾಗಿದೆ. ಬಂದಂತಹ ಬೆಳೆಗ ಳಿಗೂ ಬೆಲೆ ಕುಸಿತವಾಗಿದ್ದು, ಕಂಗಾಲಾಗಿದ್ದಾರೆ.

ಹಿಂಗಾರಿನಲ್ಲಿ ಬೆಳೆಯುವ ಹುರುಳಿ, ತೊಗರಿ, ರಾಗಿ ಬೆಳೆಗಳಿಗೂ ಕಳೆದ ಸಾಲಿನಲ್ಲಿ ದೊರೆತಿದ್ದ ಅರ್ಧದಷ್ಟು ಬೆಲೆಯೂ ಈ ಬಾರಿ ಇಲ್ಲದಂತಾಗಿದೆ. ಹೀಗಾಗಿ ಈ ಭಾಗದ ರೈತರಿಗೆ ಭಾರೀ ಹೊಡೆತ ಬಿದ್ದಿದೆ. ವರ್ಷವಿಡೀ ತಮ್ಮ ಜಮೀನುಗಳಲ್ಲಿ ಕುಟುಂಬ ಸಮೇತರಾಗಿ ಕಷ ಪಟ್ಟು ಕೃಷಿ ಚಟುವಟಿಕೆಯಲ್ಲಿ ತೊಡಗಿದರೂ ಒಮ್ಮೆ ಬೆಲೆ ಸಿಕ್ಕಿದರೆ, ಒಮ್ಮೆ ಬೆಳೆ ಉತ ಮವಾಗಿ ಬರುವುದಿಲ್ಲ. ಬೆಳೆ ಚೆನ್ನಾಗಿ ಬಂದರೂ ಉತ ಮ ಬೆಲೆ ಸಿಗುವುದಿಲ್ಲ. ಬೆಳೆದ ಬೆಳೆಗಳು ದಲ್ಲಾಳಿಗಳ ಹಾವಳಿಯಿಂದಾಗಿ ಸೂಕ ವಾದ ಮಾರುಕಟೆ ಸೌಲಭ್ಯವಿಲ್ಲದೆ ನಷ ವಾಗುತ್ತಿದೆ. ಈ ಹಿನೆ ಲೆಯಲ್ಲಿ ಸುಗ್ಗಿ ಹಬ್ಬವನ್ನು ಸಂಪೂರ್ಣ ಸಡಗರ ದಿಂದ ಆಚರಿಸುವುದೇ ಅಸಾಧ್ಯ ಎಂಬಂತಾಗಿದೆ.

ಹೀಗಿದ್ದರೂ ಸಂಪ್ರದಾಯದಂತೆ ರೈತ ಕುಟುಂಬಗಳವರು ಸಂಕ್ರಾಂತಿಯ ಸುಗ್ಗಿ ಹಬ್ಬವನ್ನು ತಾವು ಬೆಳೆದ ಬೆಳೆಗಳಿಗೆ ಪೂಜೆ ಸಲ್ಲಿಸಿ, ದನ-ಕರುಗಳನ್ನು ತೊಳೆದು, ಅಲಂಕರಿಸಿ ಪೂಜೆ ಮಾಡಿ ಪ್ರಸಾದವನ್ನು ನೀಡುತ್ತಾರೆ.

ರೈತರು ಸಂತಸದಿಂದ ಯಾವುದೇ ಹಬ್ಬಗಳನ್ನು ಆಚರಿಸಬೇಕಾದರೆ ಜನಪ್ರತಿನಿಽಗಳು ಮತ್ತು ಅಽಕಾರಿವರ್ಗದವರು ಕಾಳಜಿ ವಹಿಸಿ ರೈತರಿಗೆ ಸ್ಪಂದಿಸಿ, ಎಪಿಎಂಸಿ ಮಾರುಕಟ್ಟೆಯನ್ನು ಸಕ್ರಿಯ ವಾಗಿಸಿ, ರೈತರಿಗೆ ಉತ್ತಮ ಬೆಲೆ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಕ್ರಾಂತಿ ಸಂಭ್ರಮ | ನಾಡಿನ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ, ಖರ್ಗೆ, ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ…

1 hour ago

ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಹೃದಯಘಾತದಿಂದ ಸಾವು

ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ…

1 hour ago

ಓದುಗರ ಪತ್ರ | ಸುಗ್ಗಿಯ ಹಬ್ಬ ಸಂಕ್ರಾಂತಿ

ಮನೆ ಮಂದಿ ಮಕ್ಕಳು ಕೂಡಿ ಕಣ ಹೊಕ್ಕಿ, ಹೊಲ ಗದ್ದೆಯೆಲ್ಲಾ ಬೆಳೆದ ಬೆಳೆ ಕೈಗೆ ಬಂದೈತಿ ನಗುವಿಂದ ಮಿಂದು ಸುಗ್ಗಿಯ…

1 hour ago

ಓದುಗರ ಪತ್ರ | ವನರಂಗದ ಬಯಲು ಮಂದಿರದ ಮೇಲ್ಭಾಗ ಮುಚ್ಚಲಿ

ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬಹುರೂಪಿ ನಾಟಕೋತ್ಸವ ನಡೆಯುತ್ತಿದೆ. ಸಿನಿಮಾ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಹಾಗೂ…

1 hour ago

ಓದುಗರ ಪತ್ರ | ಟೀಸರ್, ಟ್ರೇಲರ್‌ಗಳಿಗೂ ನಿಯಂತ್ರಣ ಅಗತ್ಯ

ಚಿತ್ರ ನಟ ಯಶ್ ಅಭಿನಯದ ಟ್ಯಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆಯಾದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಆಕ್ಷೇಪಾರ್ಹ…

1 hour ago

ರಾಮನಗುಡ್ಡ ಜಲಾಶಯಕ್ಕೆ ಕೊನೆಗೂ ನೀರು

ನನೆಗುದಿಗೆ ಬಿದ್ದಿದ್ದ ನೀರು ತುಂಬಿಸುವ ಕಾರ್ಯಕ್ಕೆ ನಾಳೆ ಶಾಸಕ ಮಂಜುನಾಥ್ ಅವರಿಂದ ಚಾಲನೆ; ರೈತರಲ್ಲಿ ಸಂತಸ ಮಹಾದೇಶ್‌ ಎಂ ಗೌಡ…

1 hour ago