Andolana originals

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ

ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ 

ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ ಬೇರೂರಿರುವ ಜೀತಪದ್ಧ್ದತಿ ಕೊಡಗು ಜಿಲ್ಲೆಯಲ್ಲಿ ಇನ್ನೂ ಜೀವಂತವಾಗಿರುವ ಆರೋಪ ಕೇಳಿ ಬಂದಿದ್ದು, ದಕ್ಷಿಣ ಕೊಡಗಿನಲ್ಲಿ ದೌರ್ಜನ್ಯಕ್ಕೆ ತುತ್ತಾಗಿದ್ದರು ಎನ್ನಲಾದ ೮ ಕುಟುಂಬಗಳ ೨೬ ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಆದರೆ, ಪ್ರಕರಣದಲ್ಲಿ ಕನಿಷ್ಠ ವೇತನ ನೀಡದಿರುವುದನ್ನು ಹೊರತು ಪಡಿಸಿದರೆ ಉಳಿದ ಯಾವುದೇ ದೌರ್ಜನ್ಯ ನಡೆದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

೮ ಕುಟುಂಬಗಳು ಕಾಫಿ ತೋಟದಲ್ಲಿ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ಅವರಿಗೆ ಮಾಹಿತಿ ದೊರೆತಿತ್ತು. ಅಲ್ಲಿನ ಕಾರ್ಮಿಕರನ್ನು ರಕ್ಷಣೆ ಮಾಡುವಂತೆ ಗಾಯತ್ರಿ ಅವರು ಮೈಸೂರು ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಪವಿಭಾಗಾಧಿಕಾರಿ ಕಚೇರಿಗೆ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ವಿವಿಧ ಇಲಾಖೆಗಳ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಮಾಲೀಕರ ಕಪಿಮುಷ್ಟಿಯಲ್ಲಿ ಇದ್ದ ೮ ಕುಟುಂಬಗಳ ೨೬ ಮಂದಿಯನ್ನು ಕರೆತಂದು ಸಾಂತ್ವನ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗಿದೆ.

ದಕ್ಷಿಣ ಕೊಡಗಿನ ಗ್ರಾಮವೊಂದರ ತೋಟದ ಲೈನ್‌ಮನೆಯಲ್ಲಿ ಕಳೆದ ಐದು ವರ್ಷಗಳಿಂದ ಕುಟುಂಬಗಳು ಶೋಷಣೆ ಅನುಭವಿಸುತ್ತಾ ಬದುಕು ನಡೆಸುತ್ತಿದ್ದವು ಎನ್ನಲಾಗಿದೆ. ಹಿಂದೆ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕುಟುಂಬಗಳು ೨೫,೦೦೦ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಆ ೨೫,೦೦೦ ರೂ. ಸಾಲವನ್ನು ಈಗಿನ ಮಾಲೀಕ ಪಾವತಿಸಿ, ಈ ಕುಟುಂಬಗಳಿಗೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿ ಕಾರ್ಮಿಕರನ್ನು ತಮ್ಮ ಲೈನ್ ಮನೆಗೆ ಕರೆತಂದಿದ್ದರು ಎನ್ನಲಾಗಿದೆ.ಆದರೆ ಬಳಿಕ ಕನಿಷ್ಠ ವೇತನವನ್ನೂ ನೀಡದೆ ದುಡಿಸಿ ಕೊಂಡಿದ್ದಾರೆ ಎಂದು ಸಂತ್ರಸ್ತ ಕಾರ್ಮಿಕರು ಆರೋಪಿಸಿದ್ದಾರೆ.

ಸದ್ಯ ಕಾರ್ಮಿಕರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಅಸಲಿಗೆ ಮಾಲೀಕರು ಎಷ್ಟು ವೇತನ ನೀಡುತ್ತಿದ್ದರು? ಹಿಂದಿನ ಮಾಲೀಕರಿಗೆ ಪಾವತಿಸಿದ ಹಣ ಎಷ್ಟು? ಕಾರ್ಮಿಕರು ಯಾವ ರೀತಿ ದೌರ್ಜನ್ಯ ಕ್ಕೊಳಗಾಗಿದ್ದರು ಎಂಬಿತ್ಯಾದಿ ವಿಚಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

” ದೂರು ಬಂದ ಹಿನ್ನೆಲೆಯಲ್ಲಿ ಪೊನ್ನಂಪೇಟೆ ತಹಸಿಲ್ದಾರ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ೮ ಕುಟುಂಬಗಳ ೨೬ ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಪ್ರಕರಣ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕಾರ್ಮಿಕರು ಹಾಗೂ ಮಾಲೀಕರ ಹೇಳಿಕೆಗಳನ್ನು ಪಡೆಯಲಾಗಿದೆ. ಕನಿಷ್ಠ ವೇತನ ಪಾವತಿಸದಿರುವುದನ್ನು ಹೊರತುಪಡಿಸಿದರೆ ಇತರೆ ಕಾನೂನು ಉಲ್ಲಂಘನೆಯಾಗದಿರುವುದರಿಂದ ಇದನ್ನು ಜೀತ ಪದ್ಧತಿ ಎನ್ನಲಾಗುವುದಿಲ್ಲ. ಪ್ರಕರಣವನ್ನು ಲೇಬರ್ ಕೋರ್ಟ್‌ಗೆ ವರ್ಗಾಯಿಸಲಾಗಿದ್ದು, ಅಲ್ಲಿ ತನಿಖೆ ನಡೆಯಲಿದೆ.”

-ನಿತಿನ್ ಚಕ್ಕಿ, ಮಡಿಕೇರಿ ಉಪವಿಭಾಗಾಧಿಕಾರಿ

” ತಂದೆ ಆಸ್ತಮಾ ರೋಗಿಯಾಗಿದ್ದರೂ ಕೆಲಸ ಮಾಡಿಸುತ್ತಿದ್ದರು. ಸೂಕ್ತ ಚಿಕಿತ್ಸೆಗೆ ಹಣ ನೀಡುತ್ತಿರಲಿಲ್ಲ. ಅನಾರೋಗ್ಯ ಪೀಡಿತರಾಗಿದ್ದ ತಂದೆ ನಿಧನ ಹೊಂದಿದರು. ಅಂತ್ಯ ಸಂಸ್ಕಾ ರಕ್ಕೂ ಮಾಲೀಕರು ಹಣ ನೀಡಲಿಲ್ಲ.”

-ಪೊನ್ನಕ್ಕಿ. ಸಂತ್ರಸ್ಥ ಮಹಿಳೆ

” ಕಳೆದ ೩೫ ದಿನಗಳಿಂದ ಬಡಪಾಯಿಗಳನ್ನು ಸಾಂತ್ವನ ಕೇಂದ್ರದಲ್ಲಿ ಉಳಿಸಿಕೊಂಡಿದ್ದು, ಕೆಲಸಕ್ಕೂ ಹೋಗಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂಬಂಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾರ್ಮಿಕರಿಗೆ ನ್ಯಾಯ ಒದಗಿಸಬೇಕಿದೆ.”

-ಗಾಯತ್ರಿ, ದಸಂಸ ಕೊಡಗು ಜಿಲ್ಲಾ ಸಂಚಾಲಕಿ, ದೂರುದಾರರು

” ಈ ಹಿಂದಿನ ಮಾಲೀಕರಿಂದ ನಮ್ಮ ತಂದೆ ೨೫ ಸಾವಿರ ರೂ. ಸಾಲ ಪಡೆದು ಉಳಿಸಿ ಕೊಂಡಿದ್ದರು. ೫ ವರ್ಷಗಳ ಹಿಂದೆ ಈಗಿನ ಮಾಲೀಕರು ಆ ಸಾಲವನ್ನು ತೀರಿಸಿ, ಒಟ್ಟಾರೆ ೮ ಕುಟುಂಬಗಳನು ತಮ್ಮ ತೋಟಕ್ಕೆ ಕರೆತಂದಿದ್ದು, ಸಾಲದ ಮೊತ್ತವನ್ನು ಹೆಚ್ಚಾಗಿ ತೋರಿಸಿ ಬೇರೆ ಕಡೆ ಕೆಲಸಕ್ಕೆ ಹೋಗಲೂ ಬಿಡದೆ ಬಂಧಿಗಳನ್ನಾಗಿ ಮಾಡಿದ್ದಾರೆ.”

-ದಿನೇಶ್, ಶೋಷಣೆಗೊಳಗಾದ ಕಾರ್ಮಿಕ

 

 

 

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

5 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

5 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

5 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

6 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

7 hours ago