Andolana originals

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು

ಕೆ.ಎಸ್.ಚಂದ್ರಶೇಖರ್ ಮೂರ್ತಿ

ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರ ಕ್ರೀಡಾಂಗಣ ನಿರ್ಮಿಸಲು ಮುಂದಾಗಿರುವುದನ್ನು ಸ್ವಾಗತಿಸುವ ತಿ.ನರಸೀಪುರ ತಾಲ್ಲೂಕಿನ ಜನತೆ. ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್‌ಐಸಿ) ಆವರಣದ ಜಾಗವನ್ನೇ ಆಯ್ಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜಾಗದ ವಿಚಾರ ವಾಗಿ ಪರ- ವಿರೋಧ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಸಾರ್ವಜನಿಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

” ವಿವೇಚನಾ ರಹಿತ ಕ್ರಮ ತಿ.ನರಸೀಪುರದಲ್ಲಿ ಕ್ರೀಡಾಂಗಣ ನಿರ್ಮಿಸಲು ಮುಂದಾಗಿರುವುದು ಸಂತೋಷದ ವಿಷಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊಡ್ಡ ವಿಷನ್ ಇದೆ. ಆದರೆ, ಕ್ರೀಡಾಂಗಣವನ್ನು ನೂರಾರು ಜನರು ಕೆಲಸ ಮಾಡುತ್ತಿರುವ ಕರ್ನಾಟಕ ರೇಷ್ಮೆ ನೂಲು ತೆಗೆಯುವ ಘಟಕದ ಆವರಣದಲ್ಲಿಯೇ ನಿರ್ಮಿಸಲು ಹೊರಟಿರುವುದು ವಿವೇಚನಾ ರಹಿತ ಕ್ರಮ.”

-ನಾಗೇಂದ್ರ ಸ್ವಾಮಿ, ನಿವಾಸಿ

ಕ್ರೀಡಾಂಗಣ ಬೇಡ, ಕಾರ್ಖಾನೆ ಮಾಡಿ:  ಕ್ರೀಡಾಂಗಣ ನಿರ್ಮಿಸಲು ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕದ ಆವರಣ ಆಯ್ಕೆ ಮಾಡಿರುವುದು ಸರಿಯಲ್ಲ. ಅಲ್ಲಿನ ಪರಿಸರ ಹಾಳಾಗುತ್ತದೆ. ಕ್ರೀಡಾಂಗಣಕ್ಕಾಗಿ ೬ ಕೋಟಿ ರೂ. ಖರ್ಚು ಮಾಡುವ ಬದಲು ಅಲ್ಲಿಯೇ ಇನ್ನೊಂದು ಕಾರ್ಖಾನೆ ಮಾಡಿ ಉದ್ಯೋಗ ಸೃಷ್ಟಿ ಮಾಡಬೇಕು. ಕ್ರೀಡಾಂಗಣಕ್ಕೆ ತಿ.ನರಸೀಪುರದಲ್ಲಿ ಬೇರೆ ಜಾಗ ಹುಡುಕಲಿ.

-ಮಹದೇವಸ್ವಾಮಿ, ತಿ.ನರಸೀಪುರ

ಸಿಎಂಗೆ ಮನವಿ ಸಲ್ಲಿಸಿದ್ದೇವೆ:  ತಿ.ನರಸೀಪುರಕ್ಕೆ ಕ್ರೀಡಾಂಗಣ ಬೇಕು. ಆದರೆ, ಎಚ್ ಟಿಎಂಎ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕ ಇರುವ ಸ್ಥಳದಲ್ಲಿ ಕ್ರೀಡಾಂಗಣ ಮಾಡುವುದಕ್ಕೆ ಆಗಲ್ಲ. ನಾವು ಈ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾನೇ ಬಂದು ಸ್ಥಳ ನೋಡಿ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

-ಪ್ರಸಾದ್ ನಾಯ್ಕ್, ತಿ.ನರಸೀಪುರ ರೈತ

ಕೆಎಸ್‌ಐಸಿ ಜಾಗದಲ್ಲಿ ಕ್ರೀಡಾಂಗಣ ಸರಿಯಲ್ಲ:  ನಮ್ಮೂರಿಗೆ ಸರ್ಕಾರ ಕ್ರೀಡಾಂಗಣ ಕೊಡುತ್ತಿರುವುದು ತುಂಬಾ ಖುಷಿಯ ವಿಚಾರ. ಆದರೆ, ಕ್ರೀಡಾಂಗಣ ಮಾಡಲು ಸೂಕ್ತವಾದ ಜಾಗ ಗುರುತು ಮಾಡುವುದರಲ್ಲಿ ಜನಪ್ರತಿನಿಽಗಳು ವಿಫಲರಾಗಿದ್ದಾರೆ. ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕಕ್ಕೆ ಇತಿಹಾಸವಿದೆ. ಇಲ್ಲಿ ಸಾವಿರಾರು ಮರಗಳಿವೆ. ಇಂತಹ ಪ್ರದೇಶದಲ್ಲಿ ಕ್ರೀಡಾಂಗಣ ಮಾಡುವುದು ಸೂಕ್ತವಲ್ಲ.

-ಮೋಹನ್ ಕುಮಾರ್, ಸ್ಥಳೀಯ

ಕೆಎಸ್‌ಐಸಿ ಜಾಗದಲ್ಲಿ ಕ್ರೀಡಾಂಗಣ ಬೇಡ: 

ಕ್ರೀಡಾಂಗಣಕ್ಕೆ ಯಾರ ವಿರೋಧವೂ ಇಲ್ಲ, ಕ್ರೀಡಾಂಗಣ ಬೇಕು. ಆದರೆ, ಕ್ರೀಡಾಂಗಣಕ್ಕೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕ ಇರುವ ಜಾಗವೇ ಯಾಕೆ ಬೇಕು? ಇಲ್ಲಿ ಸಾಕಷ್ಟು ಮರಗಳಿವೆ. ಮೈಸೂರು ರೇಷ್ಮೆ ಸೀರೆಗೆ ಸರತಿ ಸಾಲಿನಲ್ಲಿ ನಿಂತು ಖರೀದಿಸುವಷ್ಟು ಬೇಡಿಕೆ ಇರುವಾಗ ಇಂತಹ ಮೈಸೂರು ರೇಷ್ಮೆ ನೂಲು ತೆಗೆಯುವ ಕಾರ್ಖಾನೆಗೆ ತೊಂದರೆ ಮಾಡುವುದು ಬೇಡ.

-ಬಡಗಲಪುರ ನಾಗೇಂದ್ರ, ರಾಜ್ಯಾಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ

” ಬೇರೆ ಜಾಗದಲ್ಲಿ ಕ್ರೀಡಾಂಗಣ ಮಾಡಲಿ ತಿ.ನರಸೀಪುರ ತಾಲ್ಲೂಕಿಗೆ ಕ್ರೀಡಾಂಗಣ ಅಗತ್ಯವಿದೆ. ಆದರೆ, ಕ್ರೀಡಾಂಗಣವನ್ನು ನೂರಾರು ಜನರು ಕೆಲಸ ಮಾಡುತ್ತಿರುವ ರೇಷ್ಮೆ ನೂಲು ತೆಗೆಯುವ ಘಟಕದಲ್ಲಿ ಮಾಡುವುದು ಬೇಡ. ಆ ಜನರ ಹೊಟ್ಟೆ ಮೇಲೆ ಹೊಡೆದು ಕ್ರೀಡಾಂಗಣ ಮಾಡುವ ಅಗತ್ಯ ಇಲ್ಲ. ರೇಷ್ಮೆ ನೂಲು ತೆಗೆಯುವ ಘಟಕದ ಜಾಗ ಬಿಟ್ಟು ಬೇರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಿ.”

-ಎನ್.ಮಹದೇವಸ್ವಾಮಿ, ಆಟೋ ಚಾಲಕ

 

 

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

3 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

6 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

6 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago