Andolana originals

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ 

ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮಕ್ಕಳ ಅಸುರಕ್ಷತೆ ಹೆಚ್ಚುತ್ತಿರುವ ಆತಂಕಕಾರಿ ಚಿತ್ರಣ ಹೊರಬಿದ್ದಿದೆ. ಸಹಾಯವಾಣಿ ಘಟಕವು ಸಾಕಷ್ಟು ಪ್ರಕರಣಗಳನ್ನು ವಿಲೇವಾರಿ ಮಾಡಿರುವುದು ಸ್ವಲ್ಪ ಸಮಾಧಾನಕರ ಸಂಗತಿ.

ಕೇಂದ್ರ ಸರ್ಕಾರದ ಶೇ.೧೦೦ರಷ್ಟು ಆರ್ಥಿಕ ನೆರವಿ ನೊಂದಿಗೆ ರಾಜ್ಯ ಸರ್ಕಾರವು ೨೦೨೩ರ ಸೆಪ್ಟೆಂಬರ್‌ನಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲೂ ಮಕ್ಕಳ ಸಹಾಯವಾಣಿ ಘಟಕ ಆರಂಭಿಸಿತು. ಮೈಸೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಘಟಕಕ್ಕೆ ಆರಂಭಿಕ ವರ್ಷದಲ್ಲಿ ಕಡಿಮೆ ಪ್ರಮಾಣದಲ್ಲಿ ಕರೆಗಳು ಬಂದಿದ್ದರೂ, ಬಳಿಕ ದೂರುಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ಒಟ್ಟು ೨,೪೭೧ ಕರೆಗಳು ಬಂದಿದ್ದು, ಈ ಪೈಕಿ ೨,೩೨೧ ಕರೆಗಳಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಸಮಸ್ಯೆಗಳನ್ನು ಪರಿಹರಿಸಿದ್ದಾರೆ.

ಬಾಲ್ಯವಿವಾಹಗಳೇ ಹೆಚ್ಚು: ಸಹಾಯವಾಣಿಗೆ ಬಂದಿರುವ ಕರೆಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಪಟ್ಟಿದ್ದವೇ ಹೆಚ್ಚು ಎನ್ನುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ೬೯೧ ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಶೇ.೯೮ರಷ್ಟು ಪ್ರಕರಣಗಳಲ್ಲಿ ಬಾಲಕಿಯರೇ ಅಪ್ರಾಪ್ತ ವಯಸ್ಸಿನಲ್ಲಿ ವಿವಾಹದ ಬಂಧನಕ್ಕೆ ಒಳಗಾಗಿರುವುದು ಆತಂಕ ಮೂಡಿಸಿದೆ.

ಹೆಣ್ಣುಮಕ್ಕಳಿಗೆ ೧೮ ವರ್ಷ ಹಾಗೂ ಗಂಡುಮಕ್ಕಳಿಗೆ ೨೧ ವರ್ಷ ಪೂರ್ಣಗೊಳ್ಳುವ ಮೊದಲು ವಿವಾಹವಾಡುವುದು ಕಾನೂನುಬಾಹಿರವಾಗಿದ್ದರೂ, ಗ್ರಾಮೀಣ ಭಾಗಗಳಲ್ಲಿ ಈ ಪದ್ಧತಿ ಸಂಪೂರ್ಣವಾಗಿ ನಿಂತಿಲ್ಲ.

ಭಿಕ್ಷಾಟನೆ, ನಾಪತ್ತೆ ಪ್ರಕರಣಗಳಲ್ಲೂ ಹೆಚ್ಚಳ: ಮಕ್ಕಳ ಸಹಾಯವಾಣಿಯ ಮೂಲಕ ಕಳೆದ ಮೂರು ವರ್ಷಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ೧೬೮ ಮಕ್ಕಳನ್ನು ರಕ್ಷಿಸಲಾಗಿದೆ. ಇದೇ ಅವಽಯಲ್ಲಿ ನಾಪತ್ತೆಯಾಗಿದ್ದ ೧೧೪ ಮಕ್ಕಳನ್ನು ಪತ್ತೆ ಮಾಡಿ ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಮಾತ್ರ ೧೧೮ ಭಿಕ್ಷಾಟನೆ ಪ್ರಕರಣಗಳು ಹಾಗೂ ೬೮ ಮಕ್ಕಳ ಪತ್ತೆ ಪ್ರಕರಣಗಳು ದಾಖಲಾಗಿವೆ.

ಕರೆ ಬಂದ ತಕ್ಷಣ ರಕ್ಷಣಾ ಕಾರ್ಯ: ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳು ೧೦೯೮ ಸಹಾಯವಾಣಿಗೆ ಕರೆ ಮಾಡಬಹುದು. ಇದು ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸುತ್ತದೆ. ಮಾಹಿತಿ ಬಂದ ತಕ್ಷಣ ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಾರೆ. ರಕ್ಷಿಸಲ್ಪಟ್ಟ ಮಕ್ಕಳಿಗೆ ಆಶ್ರಯ, ಪುನರ್ವಸತಿ ಹಾಗೂ ಅಗತ್ಯ ಸಲಹಾ ಸೇವೆಗಳನ್ನೂ ಒದಗಿಸಲಾಗುತ್ತಿದೆ. ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗಾಗಿ ವಸತಿ ಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿದೆ.

” ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಯ ಕುರಿತು ಜಾಗೃತಿ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಹೀಗಾಗಿ ಮಕ್ಕಳ ಸಹಾಯವಾಣಿಗೆ ಹೆಚ್ಚಿನ ಕರೆಗಳು ಬರುತ್ತಿವೆ. ಸರ್ಕಾರ ಸುತ್ತೋಲೆಯ ಪ್ರಕಾರ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು, ಕಟ್ಟಡಗಳಲ್ಲಿ ಮಕ್ಕಳ ಸಹಾಯವಾಣಿಯ ಸಂಖ್ಯೆ ಹಾಕಲಾಗಿದೆ. ಇದು ಮಕ್ಕಳಿಗೆ ತಲುಪಿದೆ. ಇದರಿಂದ ಹೆಚ್ಚಿನ ಕರೆಗಳು ಬರುತ್ತಿದ್ದು, ೨೪ ಗಂಟೆಯೊಳಗೆ ಕರೆಗಳಿಗೆ ಸ್ಪಂದಿಸುವ ಕೆಲಸವಾಗುತ್ತಿದೆ.”

– ಎನ್.ಟಿ.ಯೋಗೇಶ್, ಮಕ್ಕಳ ರಕ್ಷಣಾಧಿಕಾರಿ, ಮೈಸೂರು ಜಿಲ್ಲೆ 

” ರಜೆ ಅವಧಿಯಲ್ಲಿ ಬಾಲಕಾರ್ಮಿಕತೆ ಸವಾಲು ಪರೀಕ್ಷೆಗಳು ಮುಗಿದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಪ್ರಾಪ್ತರನ್ನು ಕೆಲಸಕ್ಕೆ ಬಳಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಬಡ ಕುಟುಂಬಗಳ ಮಕ್ಕಳು ಹೆತ್ತವರಿಗೆ ನೆರವಾಗಲು ಕೆಲಸ ಮಾಡುತ್ತಿರುವುದೂ ಉಂಟು. ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸುವುದು ಹಾಗೂ ೧೪ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವುದು ಕಾನೂನುಬಾಹಿರ. ಆದರೂ, ಪಾಲಕರ ಅರಿವಿನ ಕೊರತೆ ಮತ್ತು ಬಡತನದ ಕಾರಣದಿಂದ ಬಾಲಕಾರ್ಮಿಕ ವಿರೋಧಿ ಕಾನೂನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದು ಕಷ್ಟಸಾಧ್ಯವಾಗಿದೆ”

ಮಕ್ಕಳ ರಕ್ಷಣೆಗೆ ವಿವಿಧ ಕ್ರಮ: ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಶಿಕ್ಷಣ, ಪೊಲೀಸ್, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಸೇರಿದಂತೆ ಹಲವು ಇಲಾಖೆಗಳ ಸಮನ್ವಯದಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನಗೊಳಿಸಲಾಗಿದೆ. ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್‌ಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಕಡ್ಡಾಯಗೊಳಿಸಲಾಗಿದೆ. ದಾಖಲಾಗುವ ದೂರುಗಳನ್ನು ಮಕ್ಕಳ ಸುರಕ್ಷತಾ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕ ಮಾಡುವಾಗ ಪೊಲೀಸ್ ಪರಿಶೀಲನಾ ವರದಿ ಕಡ್ಡಾಯಗೊಳಿಸಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

24 mins ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

41 mins ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

1 hour ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

3 hours ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

4 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

9 hours ago