Andolana originals

ಬಿಸಿಲ ಝಳ; ಜನರ ಚಿತ್ತ ಸೆಳೆಯುತ್ತಿರುವ ಈಜುಕೊಳ

ಚಿರಂಜೀವಿ ಸಿ. ಹುಲ್ಲಹಳ್ಳಿ

ಬೇಸಿಗೆಯಲ್ಲಿ ಈಜು ಕಲಿಕಾ ಶಿಬಿರ ಆಯೋಜನೆಗೆ ಸಿದ್ಧತೆ

ಮೈಸೂರು ವಿವಿ ವ್ಯಾಪ್ತಿಯ ಸರಸ್ವತಿಪುರಂ ಈಜುಕೊಳದಲ್ಲಿ ೬ ತಂಡಗಳಿಗೆ ತರಬೇತಿ

ಮಾ.೨೦ರಿಂದ ಜೆ.ಪಿ.ನಗರ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದಲ್ಲಿ ಬೇಸಿಗೆ ಶಿಬಿರ

ಮೈಸೂರು: ಕೆಂಡದಂತೆ ಸುಡುವ ಬಿಸಿಲಿನ ತಾಪದಿಂದ ಪಾರಾಗಲು ಜನರು ವಿವಿಧ ದಾರಿಗಳನ್ನು ಹುಡುಕುತ್ತಿದ್ದಾರೆ. ಕೆಲವರು ತಂಪು ಪಾನೀಯಗಳ ಮೊರೆ ಹೋದರೆ, ಹಲವರು ಈಜುಕೊಳಗಳತ್ತ ಮುಖ ಮಾಡುತ್ತಿದ್ದಾರೆ.

ಹಾಗಾಗಿ ನಗರದ ಈಜು ಕೊಳಗಳಲ್ಲಿ ಸಡಗರದ ವಾತಾವರಣ ಮೂಡಿದೆ.

ಕೆಲವೇ ದಿನಗಳಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಬೇಸಿಗೆ ರಜೆಯೂ ಆರಂಭವಾಗಲಿದೆ. ಮಕ್ಕಳಿಗೆ ಈಜು ಕಲಿಕಾ ಶಿಬಿರಗಳೂ ಶುರುವಾಗುವ ಸಾಧ್ಯತೆಗಳಿವೆ. ಇನ್ನು ಯುವ ಜನರು, ಮಧ್ಯವಯಸ್ಕರು ಕೂಡ ಈಜುಕೊಳಗಳಿಗೆ ಇಳಿಯುತ್ತಿದ್ದಾರೆ. ಬೇಡಿಕೆ ಹೆಚ್ಚಾಗುತ್ತಿದ್ದಂತೆ ಈಜುಕೊಳದ ಶುಲ್ಕದಲ್ಲೂ ಏರಿಕೆಯಾಗಿದೆ.

ನಗರದ ಸರಸ್ವತಿಪುರಂನಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯದ ಈಜುಕೊಳ, ಚಾಮುಂಡಿ ವಿಹಾರ ಕ್ರೀಡಾಂಗಣ ಆವರಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ಈಜುಕೊಳ ಮತ್ತು ಜೆ.ಪಿ.ನಗರದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳಕ್ಕೆ ಬೇಡಿಕೆ ಹೆಚ್ಚಿದೆ. ಹೀಗಾಗಿ ಈಜುಕೊಳದಶುಲ್ಕಗಳನ್ನೂ ಏರಿಕೆ ಮಾಡಲಾಗಿದೆ.

ಹೆಚ್ಚಾಗಿ ಪೋಷಕರು ಚಿಕ್ಕ ಮಕ್ಕಳನ್ನು ಈಜುಕೊಳಕ್ಕೆ ಕರೆತರುತ್ತಿದ್ದಾರೆ. ಅಲ್ಲದೇ, ಬೇಸಿಗೆ ವೇಳೆ ಈಜುಕೊಳಕ್ಕೆ ಹೆಚ್ಚು ಜನರು ಬರುವುದರಿಂದ ಸರಸ್ವತಿಪುರಂ ಈಜುಕೊಳದಲ್ಲಿ ೭ ವರ್ಷ ಮೇಲ್ಪಟ್ಟವರಿಗೆ ಪ್ರತಿ ಗಂಟೆಗೆ ೭೦ ರೂ. ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಿಗೆ ೪೦ ರೂ. ದರವಿದೆ. ಈ ಹಿಂದಿನ ವರ್ಷಗಳಲ್ಲಿ ೭ ವರ್ಷ ಮೇಲ್ಪಟ್ಟವರಿಗೆ ೫೦ ರೂ. ಇತ್ತು. ವಿದ್ಯಾರ್ಥಿಗಳಿಗೆ ೩೦ ರೂ. ನಿಗದಿಪಡಿಸಲಾಗಿತ್ತು. ಈಗ ಶುಲ್ಕ ಹೆಚ್ಚಾಗಿದೆ.

ಬೇಸಿಗೆ ಶಿಬಿರವನ್ನು ಏಪ್ರಿಲ್ ಮೊದಲ ವಾರದಲ್ಲಿ ಆರಂಭಿಸುವುದು ವಾಡಿಕೆ. ಈ ಬಗ್ಗೆ ಮೇಲಾಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ. ೬ ತಂಡಗಳಲ್ಲಿ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಇನ್ನೂ ಪರೀಕ್ಷೆ ನಡೆಯುತ್ತಿದ್ದು, ಮಾರ್ಚ್ ಕೊನೆಯ ವಾರದಲ್ಲಿ ಈಜು ಕೊಳಗಳು ಭರ್ತಿ ಆಗಲಿವೆ. ಹೀಗಾಗಿ ಪ್ರಮುಖ ಈಜುಕೊಳಗಳಲ್ಲದೆ, ತರಬೇತಿ ನೀಡುತ್ತಿರುವ ಖಾಸಗಿ ಈಜುಕೊಳಗಳಿಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ ಎಂದು ಈಜು ತರಬೇತುದಾರ ಜಯಕುಮಾರ್ ತಿಳಿಸಿದ್ದಾರೆ.

ಸರಸ್ವತಿಪುರಂ ಈಜುಕೊಳದಲ್ಲಿ ಬೇಸಿಗೆ ಶಿಬಿರ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ೬ ತಂಡಗಳಲ್ಲಿ ಈಜಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ತಂಡದಲ್ಲಿ ೭೦ ರಿಂದ ೧೦೦ ಜನರಿಗೆ ಅವಕಾಶವಿರಲಿದೆ. ದಿನದ ಟಿಕೆಟ್ ದರ ೭೦ ರೂ., ತಿಂಗಳ ಶುಲ್ಕ ೧,೨೦೦ ರೂ. ನಿಗದಿಪಡಿಸಲಾಗಿದೆ.

ಸರಸ್ವತಿಪುರಂ ಈಜುಕೊಳದಲ್ಲಿ ಬೇಸಿಗೆ ಶಿಬಿರದ ಶುಲ್ಕ ೪,೩೮೦ ರೂ. ನಿಗದಿಯಾಗುವ ಸಾಧ್ಯತೆ ಇದೆ. ಆದರೆ, ಜೆ.ಪಿ.ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದಲ್ಲಿ ಮಾ.೨೦ರಿಂದ ಬೇಸಿಗೆ ಶಿಬಿರ ಆರಂಭವಾಗಲಿರುವ ೨ ತಿಂಗಳ ಬೇಸಿಗೆ ಶಿಬಿರಕ್ಕೆ ೪,೫೦೦ ರೂ.ಶುಲ್ಕ ನಿಗದಿಪಡಿಸಲಾಗಿದೆ. ಈ ಬಾರಿ ಪೋಷಕರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚಿನ ಮಕ್ಕಳು, ಯುವಕರು ಬರುವ ನಿರೀಕ್ಷೆಯಿದೆ ಎಂದು ಈಜು ತರಬೇತುದಾರ ಪವನ್ ‘ಆಂದೋಲನ’ ದಿನಪತ್ರಿಕೆಗೆ ತಿಳಿಸಿದರು.

” ಪ್ರತಿ ತಂಡದಲ್ಲಿ ೨೦ ಮಂದಿಗೆ ಅವಕಾಶವಿದ್ದು, ೬ ತಂಡಗಳು ಇರಲಿವೆ. ಈಜು ಕೊಳದ ನಿರ್ವಹಣೆಗೆ ಹೆಚ್ಚು ಹಣ ವ್ಯಯಿಸಬೇಕಿದೆ.”

ಪವನ್, ಈಜು ತರಬೇತುದಾರ, ಸರಸ್ವತಿಪುರಂ ಈಜುಕೊಳ 

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

2 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

4 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

4 hours ago