ವಾರ್ಡನ್ನೇ ಇಲ್ಲದ ವಸತಿ ಶಾಲೆ: ವರದಿ ಹಿನ್ನೆಲೆ
ಅಧಿಕಾರಿಗಳ ಪರಿಶೀಲನೆ: ೧೨ರವರೆಗೆ ಶಿಕ್ಷಕರಿಗೆ ರಾತ್ರಿ ಪಾಳಿ ನಿಯೋಜನೆ
ನಂಜನಗೂಡು: ನಗರದಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ವಾರ್ಡನ್ ಇಲ್ಲದಿರುವ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಂಡಿರುವ ಶಿಕ್ಷಣ ಇಲಾಖೆ, ಸದ್ಯಕ್ಕೆ ಶಿಕ್ಷಕರಿಗೇ ವಾರ್ಡನ್ ಜವಾಬ್ದಾರಿಯನ್ನೂ ವಹಿಸಿದ್ದು, ಪ್ರತಿದಿನ ಒಬ್ಬ ಶಿಕ್ಷಕರನ್ನು ರಾತ್ರಿ ಪಾಳಿ ಯಲ್ಲಿ ವಾರ್ಡನ್ ಆಗಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದೆ.
‘ವಾರ್ಡನ್ನೇ ಇಲ್ಲದ ವಸತಿ ಶಾಲೆ!’ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆ ಶುಕ್ರ ವಾರದ ಸಂಚಿಕೆಯ ಮುಖಪುಟದಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಡಿಡಿಪಿಐ ಜವರೇಗೌಡ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ವೆಂಕಟಾ ಚಲಯ್ಯನವರ ನೇತೃತ್ವದಲ್ಲಿ ಅಧಿಕಾರಿಗಳನ್ನು ವಸತಿ ಶಾಲೆಗೆ ಕಳುಹಿಸಿ ವರದಿ ತರಿಸಿಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಹಾಗೂ ಬಿಆರ್ಪಿ ಪ್ರಭಾವತಿ ಅವರ ಸಮ್ಮುಖದಲ್ಲಿ ವಸತಿ ಶಾಲೆಯಲ್ಲಿ ಸಭೆ ನಡೆಯಿತು.
ಅಧಿಕಾರಿಗಳು, ಶಾಸಕರು ಈ ಸಮಸ್ಯೆಗೆ ಪರಿಹಾರ ರೂಪಿಸುವವರೆಗೆ ಬಿಇಒ ಹೇಳಿದ ಅಡುಗೆ ಸಿಬ್ಬಂದಿಗಳ ಬದಲಿಗೆ ದಿನಕ್ಕೊಬ್ಬ ಶಿಕ್ಷಕರು ಸರದಿಯಂತೆ ವಾರ್ಡನ್ ಕೆಲಸ ನಿರ್ವಸಬೇಕು ಎಂದು ಸೂಚಿಸಿದರು. ಇದನ್ನು ಕೇಳಿದ ಶಿಕ್ಷಕರು ಕಂಗಾಲಾಗಿ, ನಾವೇನು ಶಿಕ್ಷಕರೋ ವಾರ್ಡನ್ನುಗಳೋ ಎಂದು ಉದ್ಗರಿಸಿದರು. ಇದಕ್ಕೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…