Andolana originals

ಸದ್ಯಕ್ಕೆ ಶಿಕ್ಷಕರೇ ವಾರ್ಡನ್

ವಾರ್ಡನ್ನೇ ಇಲ್ಲದ ವಸತಿ ಶಾಲೆ: ವರದಿ ಹಿನ್ನೆಲೆ

ಅಧಿಕಾರಿಗಳ ಪರಿಶೀಲನೆ: ೧೨ರವರೆಗೆ ಶಿಕ್ಷಕರಿಗೆ ರಾತ್ರಿ ಪಾಳಿ ನಿಯೋಜನೆ

ನಂಜನಗೂಡು: ನಗರದಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ವಾರ್ಡನ್ ಇಲ್ಲದಿರುವ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಂಡಿರುವ ಶಿಕ್ಷಣ ಇಲಾಖೆ, ಸದ್ಯಕ್ಕೆ ಶಿಕ್ಷಕರಿಗೇ ವಾರ್ಡನ್ ಜವಾಬ್ದಾರಿಯನ್ನೂ ವಹಿಸಿದ್ದು, ಪ್ರತಿದಿನ ಒಬ್ಬ ಶಿಕ್ಷಕರನ್ನು ರಾತ್ರಿ ಪಾಳಿ ಯಲ್ಲಿ ವಾರ್ಡನ್ ಆಗಿ ಕಾರ್ಯ ನಿರ್ವಹಿಸಲು ಸೂಚನೆ ನೀಡಿದೆ.

‘ವಾರ್ಡನ್ನೇ ಇಲ್ಲದ ವಸತಿ ಶಾಲೆ!’ ಎಂಬ ಶೀರ್ಷಿಕೆಯಡಿ ‘ಆಂದೋಲನ’ ದಿನಪತ್ರಿಕೆ ಶುಕ್ರ ವಾರದ ಸಂಚಿಕೆಯ ಮುಖಪುಟದಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಡಿಡಿಪಿಐ ಜವರೇಗೌಡ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ವೆಂಕಟಾ ಚಲಯ್ಯನವರ ನೇತೃತ್ವದಲ್ಲಿ ಅಧಿಕಾರಿಗಳನ್ನು ವಸತಿ ಶಾಲೆಗೆ ಕಳುಹಿಸಿ ವರದಿ ತರಿಸಿಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಹಾಗೂ ಬಿಆರ್‌ಪಿ ಪ್ರಭಾವತಿ ಅವರ ಸಮ್ಮುಖದಲ್ಲಿ ವಸತಿ ಶಾಲೆಯಲ್ಲಿ ಸಭೆ ನಡೆಯಿತು.

ಅಧಿಕಾರಿಗಳು, ಶಾಸಕರು ಈ ಸಮಸ್ಯೆಗೆ ಪರಿಹಾರ ರೂಪಿಸುವವರೆಗೆ ಬಿಇಒ ಹೇಳಿದ ಅಡುಗೆ ಸಿಬ್ಬಂದಿಗಳ ಬದಲಿಗೆ ದಿನಕ್ಕೊಬ್ಬ ಶಿಕ್ಷಕರು ಸರದಿಯಂತೆ ವಾರ್ಡನ್ ಕೆಲಸ ನಿರ್ವಸಬೇಕು ಎಂದು ಸೂಚಿಸಿದರು. ಇದನ್ನು ಕೇಳಿದ ಶಿಕ್ಷಕರು ಕಂಗಾಲಾಗಿ, ನಾವೇನು ಶಿಕ್ಷಕರೋ ವಾರ್ಡನ್ನುಗಳೋ ಎಂದು ಉದ್ಗರಿಸಿದರು. ಇದಕ್ಕೆ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟು ಹೋದರು.

ಆಂದೋಲನ ಡೆಸ್ಕ್

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

56 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

59 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

2 hours ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

2 hours ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

2 hours ago