Andolana originals

ಮಳೆಯ ಅಬ್ಬರದಿಂದ ನಾಲೆ ಒಡೆದು ಜಮೀನುಗಳಿಗೆ ನುಗ್ಗಿದ ನೀರು

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳ ಹಲವೆಡೆ ಬೆಳೆ ನಾಶ; ರೈತರಿಗೆ ಸಂಕಷ್ಟ 

ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳಲ್ಲಿ ಮಳೆಯ ಅಬ್ಬರದಿಂದ ಜಮೀನುಗಳಿಗೆ ನೀರು ನುಗ್ಗಿಅವಾಂತರ ಸೃಷ್ಟಿಯಾಗಿ, ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಜಮೀನುಗಳಿಗೆ ನೀರು ನುಗ್ಗಿ, ಕೆರೆಗಳಂತಾಗಿವೆ. ಇದರಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಮಿರ್ಲೆ ಭಾಗದಲ್ಲಿ ಸರಾಸರಿ ೯೨.೬ ಮಿ.ಮೀ. ಮಳೆಯಾಗಿದ್ದು, ಕಪ್ಪಡಿ ಕ್ಷೇತ್ರಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಂತೆ ಇರುವ ಗಂಧನಹಳ್ಳಿ ಬಳಿ ಹಂಪಾಪುರ ಹಳೇ ನಾಲೆಗೆ ೫ ಕಿ.ಮೀ.ನಿಂದ ೨೧ ಕಿ.ಮೀ.ವರೆಗೆ ನಾಲೆ ಏರಿ ಕುಸಿದಿದೆ ಹಾಗೂ ಹಿರಿನಾಲೆಯ ೯ರಿಂದ ೧೩ ಕಿ.ಮೀ.ನಲ್ಲಿ ನಾಲೆ ಏರಿ ಒಡೆದಿರುವ ಪರಿಣಾಮ ಭತ್ತದ ಬೆಳೆ ಸೇರಿದಂತೆ ಅನೇಕ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ.

ಧಾರಾಕಾರವಾಗಿ ಸುರಿದ ಮಳೆಯ ನೀರು ನುಗ್ಗಿದ ಪರಿಣಾಮ ನಾಲೆಯ ಏರಿ ಒಡೆದು ನೀರು ರೈತರ ಜಮೀನುಗಳಿಗೆ ನುಗ್ಗಿದ ಪರಿಣಾಮದಿಂದಾಗಿ ಭತ್ತದ ಬೆಳೆ, ಬಾಳೆ, ನಾಟಿ ಮಾಡಿದ ಅಡಕೆ, ವಿವಿಧ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ತಹಸಿಲ್ದಾರ್ ಭೇಟಿ: ಗಂಧನಹಳ್ಳಿ ಬಳಿ ಹಂಪಾಪುರ ಹಳೇ ನಾಲೆ ಹಾಗೂ ಏರಿ ಒಡೆದು ಹಿರಿನಾಲೆ ೧೩ ನೇ ಕಿ.ಮೀ. ಬಳಿಯ ರೈತರ ಜಮೀನಿಗೆ ನೀರು ನುಗ್ಗಿ ಅಪಾರ ಬೆಳೆ ನಷ್ಟವಾಗಿದೆ. ಸ್ಥಳಕ್ಕೆ ಕೆ.ಆರ್.ನಗರ ತಾಲ್ಲೂಕಿನ ತಹಸಿಲ್ದಾರ್ ಜಿ.ಸುರೇಂದ್ರಮೂರ್ತಿ, ಹಾರಂಗಿ ನೀರಾವರಿ ನಿಗಮದ ಅಧಿಕ್ಷಕ ಇಂಜಿನಿಯರ್ ಸತೀಶ್, ಸಾಲಿಗ್ರಾಮ ನೀರಾವರಿ ನಿಗಮದ ಇಇ ಕುಶುಕುಮಾರ್ ಭೇಟಿ ನೀಡಿ, ಜಂಟಿ ಸಮೀಕ್ಷೆ ಮಾಡಿದ್ದು, ಬೆಳೆ ನಷ್ಟ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು. ಒಡೆದು ಹೋಗಿರುವ ನಾಲೆ ಏರಿಯನ್ನು ತಾತ್ಕಾಲಿಕವಾಗಿ ಮರಳು ಮೂಟೆಯಿಂದ ಮುಚ್ಚಿಸಿ ಸೂಚಿಸಿದರು. ರಾಜಸ್ವ ನಿರೀಕ್ಷಕ ಪ್ರಕಾಶ್ ಹಾಗೂ ಹಾರಂಗಿ ನೀರಾವರಿ ನಿಗಮದ ಕೆ.ಆರ್.ನಗರ ವಿಭಾಗದ ಎಇಇ ಅಯಾಜ್ ಪಾಷ, ಎಇ ಕಿರಣ್, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲಿಸಿದರು.

ಲೈನಿಂಗ್ ಕಾಮಗಾರಿ ನಡೆಸಲು ಆಗ್ರಹ:  ಅತಿ ಹೆಚ್ಚು ಮಳೆಯಾದಾಗ ಮಿರ್ಲೆ ಶ್ರೇಣಿ ನಾಲೆಗಳಾದ ಹಂಪಾಪುರ ನಾಲೆ, ಹಳೇ ಹೊಸ ನಾಲೆ, ನಾಯಿನಾಲೆ, ಹಿರಿನಾಲೆ ಹಾಗೂ ಗೋವಿನ ನಾಲೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಭಾರಿ ಮಳೆಯಾಗಿ ಹೆಚ್ಚುವರಿ ನೀರು ನಾಲೆಗೆ ಹರಿದು ಬರಲಿದೆ. ನಾಲೆ ಒಡೆದು ಬೆಳೆ ಹಾನಿಯಾದರೆ ರೈತರಿಗೆ ಕಷ್ಟವಾಗಲಿದೆ. ಆದ್ದರಿಂದ ತಾಲ್ಲೂಕಿನ ಇತರೆ ನಾಲೆಗಳಾದ ಚಾಮರಾಜ ಎಡದಂಡೆ ಮತ್ತು ಬಲದಂಡೆ ನಾಲೆಗಳ ಆಧುನೀಕರಣ ಕಾಮಗಾರಿ ಕೈಗೊಂಡಂತೆ ಈ ನಾಲೆಗಳ ಕಾಂಕ್ರೀಟ್ ಲೈನಿಂಗ್ ಕಾಮಗಾರಿ ಕೈಗೊಳ್ಳಬೇಕೆಂದು ರೈತರು ಜನಪ್ರತಿನಿಽಗಳಿಗೆ, ಸಂಬಂಧಪಟ್ಟ ಇಲಾಖೆಯವರಿಗೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

21 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago